ಬೆಂಗಳೂರು(ಆ. 10): ಒಂಬತ್ತು ದಿನಗಳ ಹಿಂದೆ ಕೋವಿಡ್ ಸೋಂಕಿನಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿಗಳು ಇವತ್ತು ಪರೀಕ್ಷೆ ವರದಿಯಲ್ಲಿ ನೆಗಟಿವ್ ಬಂದ ಹಿನ್ನೆಲೆಯಲ್ಲಿ ಡಿಸ್ಚಾರ್ಜ್ ಆಗಿದ್ದಾರೆ. (ವರದಿ ಮತ್ತು ಫೋಟೋ ಕೃಪೆ: ಕೃಷ್ಣ ಜಿ.ವಿ. / ದೀಪಾ ಬಾಲಕೃಷ್ಣನ್)
ಕೊರೋನಾ ವೈರಸ್ ಸೋಂಕು ಹೊಂದಿ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಒಂಬತ್ತು ದಿನಗಳ ಬಳಿಕ ಅವರು ಮಣಿಪಾಲ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
2/ 11
ಇವತ್ತು ಬಂದ ಅವರ ಕೋವಿಡ್ ಪರೀಕ್ಷೆಯ ವರದಿಯಲ್ಲಿ ನೆಗಟಿವ್ ಬಂದ ಹಿನ್ನೆಲೆಯಲ್ಲಿ ವೈದ್ಯರು ಅವರ ಬಿಡುಗಡೆಗೆ ಅನುಮತಿ ನೀಡಿದ್ದಾರೆ.
3/ 11
ಮಣಿಪಾಲ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗವು ಯಡಿಯೂರಪ್ಪ ಅವರಿಗೆ ಕೈ ಮುಗಿದು ಬೀಳ್ಕೊಟ್ಟರು.
4/ 11
ಸಿಎಂ ಇವತ್ತು ಡಿಸ್ಚಾರ್ಜ್ ಆಗುವ ಮಾಹಿತಿ ಇದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಹೊರಗೆ ಜನರು ಜಮಾಯಿಸಿದ್ದರು.
5/ 11
ಒಂಬತ್ತು ದಿನಗಳ ಹಿಂದೆ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ದೃಢಪಟ್ಟು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು.
6/ 11
ಬಿಡುಗಡೆಯಾದ ಬಳಿಕ ಮನೆಯಲ್ಲಿ ಕೆಲ ದಿನ ಕ್ವಾರಂಟೈನ್ ಇರಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ.
7/ 11
ನಿಯಮದ ಪ್ರಕಾರ ಕನಿಷ್ಠ 7 ದಿನಗಳ ಕಾಲ ಕ್ವಾರಂಟೈನ್ ಇರಬೇಕು. ಸಾಂವಿಧಾನಿಕ ಹುದ್ದೆ ಹೊಂದಿರುವವರು ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಕ್ವಾರಂಟೈನ್ಗೆ ಒಳಪಡುವುದರಿಂದ ವಿನಾಯಿತಿ ಹೊಂದಿರುತ್ತಾರೆ.
8/ 11
ಯಡಿಯೂರಪ್ಪ ಅವರು ತಮ್ಮ ಕಾವೇರಿ ನಿವಾಸದಲ್ಲಿ 2-3 ದಿನಗಳ ಕಾಲ ವಿಶ್ರಾಂತಿ ಪಡೆದು ಆ ಬಳಿಕ ಎಂದಿನಂತೆ ಕೆಲಸಕ್ಕೆ ಹಾಜರಾಗಲಿದ್ದಾರೆ.
9/ 11
ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯಂದು ಸಿಎಂ ಅವರು ಧ್ವಜಾರೋಹಣ ಕೂಡ ಮಾಡಲಿದ್ದಾರೆ.
10/ 11
ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದೇನೆ. ನಿಮ್ಮೆಲ್ಲರ ಶುಭಹಾರೈಕೆಗಳಿಂದ ಗುಣಮುಖನಾಗಿದ್ದೇನೆ. ವೈದ್ಯರ ಸಲಹೆಯಂತೆ ಇನ್ನು ಕೆಲವು ದಿನ ಮನೆಯಲ್ಲೇ ಕ್ವಾರಂಟೈನ್ನಲ್ಲಿ ಇರಲಿದ್ದೇನೆ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
11/ 11
ಆತ್ಮವಿಶ್ವಾಸ ಹಾಗೂ ವೈದ್ಯಕೀಯ ಚಿಕಿತ್ಸೆಗಳಿಂದ ಕೊರೋನಾ ಗೆಲ್ಲಬಹುದು. ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ ಎಂಬ ಸಂದೇಶವನ್ನು ಯಡಿಯೂರಪ್ಪ ನೀಡಿದ್ದಾರೆ.
ಕೊರೋನಾ ವೈರಸ್ ಸೋಂಕು ಹೊಂದಿ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಒಂಬತ್ತು ದಿನಗಳ ಬಳಿಕ ಅವರು ಮಣಿಪಾಲ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ನಿಯಮದ ಪ್ರಕಾರ ಕನಿಷ್ಠ 7 ದಿನಗಳ ಕಾಲ ಕ್ವಾರಂಟೈನ್ ಇರಬೇಕು. ಸಾಂವಿಧಾನಿಕ ಹುದ್ದೆ ಹೊಂದಿರುವವರು ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಕ್ವಾರಂಟೈನ್ಗೆ ಒಳಪಡುವುದರಿಂದ ವಿನಾಯಿತಿ ಹೊಂದಿರುತ್ತಾರೆ.
ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದೇನೆ. ನಿಮ್ಮೆಲ್ಲರ ಶುಭಹಾರೈಕೆಗಳಿಂದ ಗುಣಮುಖನಾಗಿದ್ದೇನೆ. ವೈದ್ಯರ ಸಲಹೆಯಂತೆ ಇನ್ನು ಕೆಲವು ದಿನ ಮನೆಯಲ್ಲೇ ಕ್ವಾರಂಟೈನ್ನಲ್ಲಿ ಇರಲಿದ್ದೇನೆ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.