Seva Sindhu: ಆಟೋ ಚಾಲಕರ ಸಹಾಯಧನ ಅರ್ಜಿ ಹಾಕಲು ಮತ್ತೊಂದು ಅವಕಾಶ
Lockdown Relief Fund: ಟ್ಯಾಕ್ಸಿ ಚಾಲಕರೇ, ಕೊರೋನಾ ಸಂಕಷ್ಟ ಹಿನ್ನೆಲೆ ಸರ್ಕಾರ ನೀಡುವ ಪರಿಹಾರ ಧನ ನೀವು ಸ್ವೀಕರಿಸಿಲ್ಲವೇ? ಇನ್ನೂ ನೀವು ಅರ್ಜಿ ಹಾಕಿಲ್ಲವಾದ್ರೆ ನಿಮಗೆ ಮತ್ತೊಂದು ಅವಕಾಶವಿದೆ. ಜುಲೈ 31 ರವರೆಗೆ ಅರ್ಜಿ ಸಲ್ಲಿಸಬಹುದು.
News18 Kannada | July 24, 2020, 12:18 PM IST
1/ 11
ಆಟೋ, ಟ್ಯಾಕ್ಸಿ ಚಾಲಕರೇ ಕೊರೋನಾ ಸಂಕಷ್ಟ ಹಿನ್ನೆಲೆ ಸರ್ಕಾರ ನೀಡುವ ಪರಿಹಾರ ಧನ ನೀವು ಸ್ವೀಕರಿಸಿಲ್ಲವೇ? ಇನ್ನೂ ನೀವು ಅರ್ಜಿ ಹಾಕಿಲ್ಲವಾದ್ರೆ ನಿಮಗೆ ಮತ್ತೊಂದು ಅವಕಾಶವಿದೆ. ಜುಲೈ 31 ರವರೆಗೆ ಅರ್ಜಿ ಸಲ್ಲಿಸಬಹುದು.
2/ 11
ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದಂತೆ ಲಾಕ್ ಡೌನ್ ಮಾಡಲಾಯಿತು. ಇದರಿಂದ ಇಡೀ ದೇಶದ ಅರ್ಥಿಕ ಪರಿಸ್ಥಿತಿಯೇ ಸ್ತಬ್ದಗೊಂಡಿತು. ಆಗ ರಾಜ್ಯ ಸರ್ಕಾರ ಆಟೋ, ಟ್ಯಾಕ್ಸಿ ಚಾಲಕರಿಗೆ ಪರಿಹಾರ ಧನವಾಗಿ ತಲಾ ಒಬ್ಬ ಆಟೋ ಚಾಲಕರಿಗೆ ಐದು ಸಾವಿರ ನೀಡಲು ನಿರ್ಧರಿಸಿತ್ತು
3/ 11
ಅದರ ಹಿನ್ನೆಲೆ ಈಗಾಗಲೇ ಆಟೋ ಚಾಲಕರು ಸೇವಾ ಸಿಂಧು ಆಪ್ ನಲ್ಲಿ ನೊಂದಣಿ ಮಾಡಿಸಿದ್ದಾರೆ. ಆದರೆ, ಇದರ ಪ್ರಮಾಣ ತುಂಬ ಕಡಿಮೆಯಿದೆ. ಇದರ ಹಿನ್ನೆಲೆ ಸಾರಿಗೆ ಇಲಾಖೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಎಂದು ಸಾರಿಗೆ ಇಲಾಖೆ ವಿಸ್ತರಿಸಿದೆ
4/ 11
ವೆಬ್ಸೈಟ್ನಲ್ಲಿ ಆಟೋರಿಕ್ಷಾ ಚಾಲಕರು/ಟಾಕ್ಸಿ ಚಾಲಕರಿಗೆ ಕೋವಿಡ್-19ರ ಅವಧಿಯಲ್ಲಿ ಪರಿಹಾರ ವಿತರಿಸುವುದು' ಎಂಬ ಬರಹದ ಮೇಲೆ ಕ್ಲಿಕ್ ಮಾಡಿದರೆ ಅರ್ಜಿ ಸಲ್ಲಿಸುವ ಪುಟ ತೆರೆಯುತ್ತದೆ. ದಯವಿಟ್ಟು ಅರ್ಜಿಯನ್ನು ಆಂಗ್ಲ ಭಾಷೆ ಯಲ್ಲಿ ನೋಂದಾಯಿಸಿ ಎಂದು ಮನವಿ ಮಾಡಲಾಗಿದೆ. ಒಟ್ಟು 4 ಹಂತದಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
5/ 11
ಮೊದಲ ಹಂತ ಮೊದಲ ಹಂತದಲ್ಲಿ ಅರ್ಜಿದಾರರ ವಿಳಾಸ ನಮೂದಿಸಬೇಕು. ಆಧಾರ್ ಕಾರ್ಡ್ನಲ್ಲಿ ಇರುವಂತೆ ಹೆಸರು, ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ವಿಳಾಸ, ಜಿಲ್ಲೆ, ತಾಲೂಕು, ವರ್ಗವನ್ನು ಭರ್ತಿ ಮಾಡಬೇಕು.
6/ 11
ಚಾಲಕರು 2ನೇ ಹಂತದಲ್ಲಿ ಚಾಲನಾ ಅನುಜ್ಞಾ ಪತ್ರ (ಡಿಎಲ್) ವಿವರಗಳನ್ನು ಭರ್ತಿ ಮಾಡಬೇಕು. ಡಿಎಲ್ ಸಂಖ್ಯೆ, ಡಿಎಲ್ ಸಿಂಧುತ್ವ ದಿನಾಂಕ, ಡಿಎಲ್ನಲ್ಲಿ ಇರುವಂತೆ ನಿಮ್ಮ ಹೆಸರು, ಬ್ಯಾಡ್ಜ್ ಸಂಖ್ಯೆ, ವಾಹನದ ವರ್ಗದ ವಿವರ ತುಂಬಬೇಕು.
7/ 11
ಚಾಲಕರು 2ನೇ ಹಂತದಲ್ಲಿ ಚಾಲನಾ ಅನುಜ್ಞಾ ಪತ್ರ (ಡಿಎಲ್) ವಿವರಗಳನ್ನು ಭರ್ತಿ ಮಾಡಬೇಕು. ಡಿಎಲ್ ಸಂಖ್ಯೆ, ಡಿಎಲ್ ಸಿಂಧುತ್ವ ದಿನಾಂಕ, ಡಿಎಲ್ನಲ್ಲಿ ಇರುವಂತೆ ನಿಮ್ಮ ಹೆಸರು, ಬ್ಯಾಡ್ಜ್ ಸಂಖ್ಯೆ, ವಾಹನದ ವರ್ಗದ ವಿವರ ತುಂಬಬೇಕು.
8/ 11
ಚಾಲಕರು ಲಾಕ್ಡೌನ್ಗಿಂತ ಮುನ್ನ ನೀವು ಚಲಾಯಿಸುತ್ತಿದ್ದ ವಾಹನದ ವಿವರಗಳನ್ನು ತುಂಬಬೇಕು. ವಾಹನದ ಸಂಖ್ಯೆ, ಚಾಸಿಸ್ ಸಂಖ್ಯೆ (ಕೊನೆಯ 5 ಅಂಕಿ), ಆರ್ಸಿ ಪುಸ್ತಕದಲ್ಲಿ ಇರುವಂತೆ ಹೆಸರು, ಸಾರಿಗೆ ವಾಹನದ ವರ್ಗ, ಆಸನ ಸಂಖ್ಯೆ, ಅರ್ಹತಾ ಪತ್ರದ ಸಿಂಧುತ್ವ ದಿನಾಂಕ ಭರ್ತಿ ಮಾಡಬೇಕು
9/ 11
4ನೇ ಹಂತದಲ್ಲಿ ಆಟೋರಿಕ್ಷಾ ಕ್ಯಾಬ್ / ಟ್ಯಾಕ್ಸಿ ಚಾಲಕನಾದ ನಾನು ಲಾಕ್ಡೌನ್ ಸಮಯದಲ್ಲಿ ದೈನಂದಿನ ಉದ್ಯೋಗವನ್ನು ನಡೆಸಲಾಗದೆ ಆದಾಯ ಕಳೆದುಕೊಂಡಿರುವುದು ಸತ್ಯವಾಗಿದೆ ಮತ್ತು ಈ ಸಮಯದಲ್ಲಿ ನನ್ನ ಆರ್ಥಿಕ ಸ್ಥಿತಿಯು ಉತ್ತಮವಾಗಿರುವುದಿಲ್ಲ ಎಂದು ದೃಢೀಕರಿಸುತ್ತೇನೆ ಎಂದು ಸ್ವಯಂ ಘೋಷಣೆ ಮಾಡಿಕೊಳ್ಳಬೇಕು
10/ 11
ಇದರಿಂದ ಅರ್ಜಿ ಸಲ್ಲಿಸಲು ವಿಸ್ತರಣೆಯಾಗಿದ್ದು ಇದುವರೆಗೂ ಅರ್ಜಿ ಸಲ್ಲಿಸಲು ಆಗದೇ ಇರುವ ರಾಜ್ಯದ ಆಟೋ ಚಾಲಕರು ಅರ್ಜಿ ಸಲ್ಲಿಸಲು ಅವಕಾಶ ಮಿಸ್ ಮಾಡ್ಕೋಬೇಡಿ
11/ 11
<br /> ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಸಮಸ್ಯೆಯಾದರೆ 9449863214 ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ಅಲ್ಲದೆ, ಇದರ ಜೊತೆಗೆ 080-22236698 ಈ ದೂರವಾಣಿ ಸಂಖ್ಯೆಗೆ ಕರೆ ಮಾಡುವ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬಹುದು