Hassan: ಕಾರು-ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ಅಪಘಾತ, ಐವರು ವಿದ್ಯಾರ್ಥಿಗಳ ದುರ್ಮರಣ
ಹಾಸನ (Hassan) ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿ ಬಳಿ ಭೀಕರ ರಸ್ತೆ ಅಪಘಾತದಲ್ಲಿ (Accident) ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು (Students death), ಓರ್ವ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಕೊನೆಯುಸಿರೆಳೆದಿದ್ದಾನೆ
ತುಮಕೂರು ಬಳಿ ನಡೆದ ಭೀಕರ ಅಪಘಾತದ ನೆನಪು ಮಾಸುವ ಮುನ್ನವೇ ಹಾಸನ ಜಿಲ್ಲೆ ಬೇಲೂರು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
2/ 8
ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಸಂಕೇನಹಳ್ಲಿ ತಿರುವಿನಲ್ಲಿ ಸಾರಿಗೆ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ
3/ 8
ಭೀಕರ ಅಪಘಾತದಲ್ಲಿ 4 ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದರೆ ಮತ್ತೋರ್ವ ವಿದ್ಯಾರ್ಥಿ ಆಸ್ಪತ್ರೆ ಗೆ ಸಾಗಿಸೋ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾನೆ.
4/ 8
ಮೃತಪಟ್ಟ ವಿದ್ಯಾರ್ಥಿಗಳು ಬೇಲೂರಿನ ವಿದ್ಯಾ ವಿಕಾಸ ಕಾಲೇಜಿನ ಪಿಯು ಕಾಲೇಜು ಹಾಗೂ ಹಾಸನ ಎನ್.ಡಿ.ಆರ್.ಕೆ. ಕಾಲೇಜಿನ ಡಿಗ್ರಿ ವಿದ್ಯಾರ್ಥಿಗಳು . ಇವರೆಲ್ಲಾ ಬೇಲೂರು ಪಟ್ಟಣದ ನಿವಾಸಿಗಳಾಗಿದ್ದಾರೆ
5/ 8
ಇವರೆಲ್ಲಾ ಕಾಲೇಜು ಮುಗಿಸಿ ಕಾರಿನಲ್ಲಿ ಹಾಸನದತ್ತ ಹೊರಟಿದ್ದರು. ಈ ವೇಳೆ ಚಿಕ್ಕಮಗಳೂರಿನತ್ತ ಹೊರಟಿದ್ದ KSRTC ಬಸ್ಸಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.
ಮಹಮದ್ ಜಿಲಾನಿ, ಮಹಮದ್ಕೈಫ್, ಬೇಲೂರಿನ ವಿದ್ಯಾವಿಕಾಸ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದರು ಮುಯಿನ್, ರಿಯಾನ್ ಹಾಸನದ ಎನ್.ಡಿ.ಆರ್.ಕೆ. ಕಾಲೇಜಿನ ಡಿಗ್ರಿ ವಿದ್ಯಾರ್ಥಿಗಳು, ಅಕ್ಮಲ್ಖಾನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು
8/ 8
ಇನ್ನು ಬಸ್ ನಲ್ಲಿದ್ದ ಹಲವರಿಗೆ ಗಾಯಗಳಾಗಿವೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ