ನಗರದ ಪ್ರಮುಖ ಬೀದಿಗಳಲ್ಲಿ ಪ್ರದರ್ಶನಗೊಂಡ ಆಂಜನೇಯ ದರ್ಶನ, ಆದಿ ಶಕ್ತಿಯಿಂದ ಶುಂಭ ನೀಶುಂಭರ ಸಂಹಾರ, ಗಣಪತಿಯಿಂದ ಗಜಾಸುರನವಧೆ, ಚಂಡ ಮುಂಡರ ವಧೆ ಸೇರಿದಂತೆ ಹಲವು ಪೌರಾಣಿಕ ಕಥಾವಸ್ತುವನ್ನು ಆಧರಿಸಿದ ನೃತ್ಯ ಪ್ರದರ್ಶನಗಳನ್ನು, ಯುದ್ಧದ ದೃಶ್ಯಗಳನ್ನು ಮಂಟಪಗಳು ಸಾದರಪಡಿಸಿದವು. ಶುಕ್ರವಾರ ರಾತ್ರಿ 11 ಗಂಟೆಗೆ ಶುರುವಾದ ದಶಮಂಟಪಗಳ ಶೋಭಾಯಾತ್ರೆ ಬೆಳಿಗ್ಗೆ 5 ಗಂಟೆವರೆಗೂ ನಡೆಯಿತು.