ಹಂಪಿ ಉತ್ಸವದ ಹಿನ್ನೆಲೆ ಸಂಗೀತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಭಾನುವಾರ ರಾತ್ರಿ ಗಾಯಕ ವಿಜಯ್ ಪ್ರಕಾಶ್ ಹಾಗೂ ಬಹುಭಾಷಾ ಗಾಯಕ ಕೈಲಾಶ್ ಖೇರ್ ಅವರ ಸಂಗೀತ ಕಾರ್ಯಕ್ರಮದಲ್ಲಿ ಅಹಿತಕರ ಘಟನೆ ನಡೆದಿದೆ.
2/ 8
ರಾತ್ರಿ 1:30ಕ್ಕೆ ಗಾಯಕ ಕೈಲಾಶ್ ಖೇರ್ ಅವರು ಹಂಪಿ ಗಾಯತ್ರಿ ಪೀಠದ ಪ್ರಧಾನ ವೇದಿಕೆಯಲ್ಲಿ ಸಂಗೀತ ಕಾರ್ಯಕ್ರಮ ನಡೆಸಿಕೊಡುತ್ತಿದ್ದರು.
3/ 8
ಕೈಲಾಶ್ ಖೇರ್ ಹಾಡು ಹೇಳುತ್ತಿದ್ದ ವೇಳೆ ಕಿಡಿಗೇಡಿಗಳು ನೀರು ತುಂಬಿದ ಬಾಟಲಿಯನ್ನು ಎಸೆದಿದ್ದಾರೆ.
4/ 8
ಕನ್ನಡ ಹಾಡು ಹಾಡಿಲ್ಲ ಎನ್ನುವ ಕಾರಣಕ್ಕೆ ಕಿಡಿಗೇಡಿಗಳು ಗಾಯಕ ಕೈಲಾಶ್ ಖೇರ್ ಮೇಲೆ ನೀರಿನ ಬಾಟಲಿ ಎಸೆದಿದ್ದಾರೆ ಎನ್ನಲಾಗಿದೆ.
5/ 8
ಕಿಡಿಗೇಡಿಗಳು ಎಸೆದ ಬಾಟಲ್ ಕೈಲಾಶ್ ಖೇರ್ ಪಕ್ಕದಲ್ಲಿ ಬಿದ್ದಿದೆ. ತಕ್ಷಣ ಪೊಲೀಸರು ಇಬ್ಬರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
6/ 8
ಬೃಹತ್ ವೇದಿಕೆಯಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದಲ್ಲಿ ಕಿಡಿಗೇಡಿಗಳು ಬಾಟಲ್ ಎಸೆದರೂ ಸಹ ಗಾಯಕ ಕೈಲಾಶ್ ಖೇರ್ ತಮ್ಮ ಗಾಯನ ನಿಲ್ಲಿಸದೆ ಹಾಡು ಹಾಡಿದ್ರು.
7/ 8
ತಡರಾತ್ರಿ 2:30ರ ವರೆಗೆ ಗಾಯಕ ಕೈಲಾಶ್ ಖೇರ್ ಹಾಗೂ ತಂಡ ಹಂಪಿ ಉತ್ಸವದಲ್ಲಿ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.
8/ 8
ಕೈಲಾಶ್ ಖೇರ್ ಅವರ ಹಾಡಿನ ಮೋಡಿಗೆ ಜನರು ಹುಚ್ಚೆದ್ದು ಕುಣಿದು ಸಂಭ್ರಮಿಸಿದ್ದಾರೆ.
First published:
18
Kailash Kher: ಹಂಪಿ ಉತ್ಸವದಲ್ಲಿ ಗಾಯಕ ಕೈಲಾಶ್ ಖೇರ್ ಮೇಲೆ ಬಾಟಲಿ ಎಸೆತ; ಇಬ್ಬರು ಪೊಲೀಸರ ವಶಕ್ಕೆ
ಹಂಪಿ ಉತ್ಸವದ ಹಿನ್ನೆಲೆ ಸಂಗೀತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಭಾನುವಾರ ರಾತ್ರಿ ಗಾಯಕ ವಿಜಯ್ ಪ್ರಕಾಶ್ ಹಾಗೂ ಬಹುಭಾಷಾ ಗಾಯಕ ಕೈಲಾಶ್ ಖೇರ್ ಅವರ ಸಂಗೀತ ಕಾರ್ಯಕ್ರಮದಲ್ಲಿ ಅಹಿತಕರ ಘಟನೆ ನಡೆದಿದೆ.