Kichcha Sudeep: ಜೇಬಿಗೆ ಹಾಕ್ಕೊಂಡು ಹೋಗ್ತಾ ಇರ್ತಾರೆ! ಕಿಚ್ಚನ ಬಗ್ಗೆ ಅವಹೇಳನಕಾರಿ ಹೇಳಿಕೆ

Kichcha Sudeep: ನಮ್ಮಲ್ಲಿ ಯಾರೇ ಬಂದರೂ ಊಟ ಮಾಡ್ಕೋತಾರೆ, ತಿಂದ್ಕೋತಾರೆ, ಜೇಬಿಗೆ ಹಾಕೊಂಡು ಹೋಗ್ತಾ ಇರ್ತಾರೆ ಎಂದು ಕೊಳ್ಳೇಗಾಲ ಮಾಜಿ ಶಾಸಕನ ಪುತ್ರ ಅವಹೇಳನಕಾರಿ ಹೇಳಿಕೆ ಕೊಟ್ಟಿದ್ದಾರೆ.

First published:

  • 17

    Kichcha Sudeep: ಜೇಬಿಗೆ ಹಾಕ್ಕೊಂಡು ಹೋಗ್ತಾ ಇರ್ತಾರೆ! ಕಿಚ್ಚನ ಬಗ್ಗೆ ಅವಹೇಳನಕಾರಿ ಹೇಳಿಕೆ

    ಕಿಚ್ಚ ಸುದೀಪ್ ‌ಬಗ್ಗೆ ಕೊಳ್ಳೇಗಾಲ ಮಾಜಿ ಶಾಸಕನ ಪುತ್ರ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಚಾರ ಈಗ ಮತ್ತಷ್ಟು ಚರ್ಚೆಯಾಗುತ್ತಿದೆ. ಈ ಆರೋಪದ ವಿಚಾರವಾಗಿ ಬಹಳಷ್ಟು ಜನ ಕಿಚ್ಚ ಅಭಿಮಾನಿಗಳು ಖಂಡನೆ ವ್ಯಕ್ತಪಡಿಸಿದ್ದಾರೆ.

    MORE
    GALLERIES

  • 27

    Kichcha Sudeep: ಜೇಬಿಗೆ ಹಾಕ್ಕೊಂಡು ಹೋಗ್ತಾ ಇರ್ತಾರೆ! ಕಿಚ್ಚನ ಬಗ್ಗೆ ಅವಹೇಳನಕಾರಿ ಹೇಳಿಕೆ

    ಮಾಜಿ ಶಾಸಕ ಜಿ.ಎನ್ ನಂಜುಂಡಸ್ವಾಮಿ ಪುತ್ರ ಲೋಕೇಶ್ ಅವರು ಕಿಚ್ಚ ಸುದೀಪ್ ಅವರನ್ನು ಅವಹೇಳನ ಮಾಡಿದ್ದಾರೆಂದು ಆರೋಪ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ ಎನ್ನಲಾಗಿದ್ದು ಈ ಕುರಿತು ಚರ್ಚೆ ಜೋರಾಗಿದೆ.

    MORE
    GALLERIES

  • 37

    Kichcha Sudeep: ಜೇಬಿಗೆ ಹಾಕ್ಕೊಂಡು ಹೋಗ್ತಾ ಇರ್ತಾರೆ! ಕಿಚ್ಚನ ಬಗ್ಗೆ ಅವಹೇಳನಕಾರಿ ಹೇಳಿಕೆ

    ಸುದೀಪ್ ಬರ್ತಾರೆ, ಅವರು ಬರ್ತಾರೆ, ಇವರು ಬರ್ತಾರೆ ಎಂದು ಶಾಸಕ ಎನ್ ಮಹೇಶ್ ಹೇಳ್ತಿದ್ದಾರೆ. ನಮ್ಮಲ್ಲಿ ಯಾರೇ ಬಂದರೂ ಊಟ ಮಾಡ್ಕೋತಾರೆ, ತಿಂದ್ಕೋತಾರೆ, ಜೇಬಿಗೆ ಹಾಕೊಂಡು ಹೋಗ್ತಾ ಇರ್ತಾರೆ. ಅದನ್ನು ಬಿಟ್ಟು ಅವರು ಏನೂ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

    MORE
    GALLERIES

  • 47

    Kichcha Sudeep: ಜೇಬಿಗೆ ಹಾಕ್ಕೊಂಡು ಹೋಗ್ತಾ ಇರ್ತಾರೆ! ಕಿಚ್ಚನ ಬಗ್ಗೆ ಅವಹೇಳನಕಾರಿ ಹೇಳಿಕೆ

    ಮಾಜಿ ಶಾಸಕನ ಪುತ್ರ ಲೋಕೇಶ್ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಹೇಳಿರುವ ವಿಡಿಯೋ ವೈರಲ್ ಆಗಿದ್ದು ಅವರ ಹೇಳಿಕೆಗೆ ತೀವ್ರ ಟೀಕೆ ಕೇಳಿ ಬಂದಿದೆ. ಲೋಕೇಶ್ ವಿರುದ್ದ ವಾಲ್ಮೀಕಿ ನಾಯಕ ಸಂಘಟನೆಗಳಿಂದ ಪ್ರತಿಭಟನೆ ಎಚ್ಚರಿಕೆ ಬಂದಿದೆ.

    MORE
    GALLERIES

  • 57

    Kichcha Sudeep: ಜೇಬಿಗೆ ಹಾಕ್ಕೊಂಡು ಹೋಗ್ತಾ ಇರ್ತಾರೆ! ಕಿಚ್ಚನ ಬಗ್ಗೆ ಅವಹೇಳನಕಾರಿ ಹೇಳಿಕೆ

    ಲೋಕೇಶ್ ಹೇಳಿಕೆಯಿಂದ ಸುದೀಪ್ ‌ ಹಾಗು ಅವರ ಅಭಿಮಾನಿಗಳಿಗೆ ಅವಮಾನವಾಗಿದೆ. ಲೋಕೇಶ್ ಕೂಡಲೇ ಕ್ಷಮೆ ಯಾಚಿಸಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುತ್ತೆ ಎಂದು ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸರಗೂರು ಶಿವು ಎಚ್ಚರಿಕೆ ಕೊಟ್ಟಿದ್ದಾರೆ.

    MORE
    GALLERIES

  • 67

    Kichcha Sudeep: ಜೇಬಿಗೆ ಹಾಕ್ಕೊಂಡು ಹೋಗ್ತಾ ಇರ್ತಾರೆ! ಕಿಚ್ಚನ ಬಗ್ಗೆ ಅವಹೇಳನಕಾರಿ ಹೇಳಿಕೆ

    ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರ ಬೀಳಲಿದೆ. ಹೀಗಿರುವಾಗ ಇತ್ತ ಪಕ್ಷಗಳೂ ಭರ್ಜರಿ ತಯಾರಿ ನಡೆಸುತ್ತಿದ್ದು, ಯಾರಿಗೆಲ್ಲಾ ಟಿಕೆಟ್​ ನೀಡಬೇಕೆಂಬ ಬಗ್ಗೆಯೂ ಸಿದ್ಧತೆ ಆರಂಭವಾಗಿದೆ. ನಟ ಸುದೀಪ್ ಸುದೀಪ್ ಬೊಮ್ಮಾಯಿ (Basavaraj Bommai) ಪರ ಪ್ರಚಾರ ನಡೆಸುತ್ತೇನೆ. ಅವರಿಗೆ ಬೆಂಬಲ ನೀಡುತ್ತೇನೆ ಎಂದಿದ್ದರು.

    MORE
    GALLERIES

  • 77

    Kichcha Sudeep: ಜೇಬಿಗೆ ಹಾಕ್ಕೊಂಡು ಹೋಗ್ತಾ ಇರ್ತಾರೆ! ಕಿಚ್ಚನ ಬಗ್ಗೆ ಅವಹೇಳನಕಾರಿ ಹೇಳಿಕೆ

    ರಾಜಕೀಯವಾಗಿ ಅಲ್ಲ ವೈಯುಕ್ತಿಕವಾಗಿ ಬೊಮ್ಮಾಯಿ ಅವರಿಗೆ ಬೆಂಬಲ ನೀಡುವುದಾಗಿ ಕಿಚ್ಚ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಪ್ರಚಾರ ಕೆಲಸ ಶುರು ಮಾಡಿಕೊಂಡಿರುವ ನಟ ಹಲವು ಪ್ರದೇಶಗಳಿಗೆ ಭೇಟಿ ಕೊಡುತ್ತಿದ್ದಾರೆ.

    MORE
    GALLERIES