Rishabh Shetty: ವಿಶ್ವಸಂಸ್ಥೆಯಲ್ಲಿ ಮೊಳಗಿದ ಕನ್ನಡದ ಕಂಪು, ರಿಷಬ್ ಶೆಟ್ಟಿ ಮಾಡಿದ ಭಾಷಣವೇನು?

ನಿರ್ದೇಶಕ, ನಟ ರಿಷಬ್ ಶೆಟ್ಟಿ ಜಿನಿವಾದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಪರಿಸರ ಸಂರಕ್ಷಣೆ ಕುರಿತು ಕನ್ನಡದಲ್ಲಿಯೇ ಮಾತನಾಡಿದ್ದಾರೆ. ಅವರು ಮಾತನಾಡಿದ ಭಾಷಣದ ವಿವರ ಇಲ್ಲಿದೆ ನೋಡಿ.

First published:

  • 17

    Rishabh Shetty: ವಿಶ್ವಸಂಸ್ಥೆಯಲ್ಲಿ ಮೊಳಗಿದ ಕನ್ನಡದ ಕಂಪು, ರಿಷಬ್ ಶೆಟ್ಟಿ ಮಾಡಿದ ಭಾಷಣವೇನು?

    ಕಾಂತಾರ ಸಿನಿಮಾದ ನಿರ್ದೇಶಕ, ನಟ ರಿಷಬ್ ಶೆಟ್ಟಿ ಅವರ ಖ್ಯಾತಿ ಎಲ್ಲೆಡೆ ಇದ್ದು, ಜಿನಿವಾದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ರಿಷಬ್ ಶೆಟ್ರು ಭಾಗಿಯಾಗಿದ್ದಾರೆ. ಕಾಡಂಚಿನ ಸಮಸ್ಯೆಗಳನ್ನು ಕುರಿತು ಕನ್ನಡದಲ್ಲೇ ಮಾತನಾಡಿದ್ದಾರೆ.

    MORE
    GALLERIES

  • 27

    Rishabh Shetty: ವಿಶ್ವಸಂಸ್ಥೆಯಲ್ಲಿ ಮೊಳಗಿದ ಕನ್ನಡದ ಕಂಪು, ರಿಷಬ್ ಶೆಟ್ಟಿ ಮಾಡಿದ ಭಾಷಣವೇನು?

    ರಿಷಬ್ ಶೆಟ್ಟಿ ಭಾಷಣ ಈ ರೀತಿ ಇದೆ. 'ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತ ಹೆಚ್ಚು ಅವಧಿಯಿಂದ ತಳಮಟ್ಟ ದಿಂದ ಕಾರ್ಯನಿರ್ವಹಿಸುತ್ತಿರುವ ಭಾರತದ ಏಕೋಪಾಸ್ ಪ್ರತಿನಿಧಿಯಾಗಿ ನಾನು ಬಂದಿದ್ದೇನೆ. ಪರಿಸರ ಸುಸ್ಥಿರತೆ ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟ-ನಿರ್ದೇಶಕನಾಗಿ, ಪರಿಸರ ಸುಸ್ಥಿರತೆ ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದೇ ನನ್ನ ಉದ್ದೇಶ ಎಂದಿದ್ದಾರೆ.

    MORE
    GALLERIES

  • 37

    Rishabh Shetty: ವಿಶ್ವಸಂಸ್ಥೆಯಲ್ಲಿ ಮೊಳಗಿದ ಕನ್ನಡದ ಕಂಪು, ರಿಷಬ್ ಶೆಟ್ಟಿ ಮಾಡಿದ ಭಾಷಣವೇನು?

    'ಪರಿಸರ ಸುಸ್ಥಿರತೆಯ ಶೋಧನೆಗೆ ಜಾಗತಿಕ ಏಜೆನ್ಸಿಗಳು ಹಾಗೂ ಸರ್ಕಾರದ ಸಂಸ್ಥೆಗಳ ಮುಂಚೂಣಿಯಲ್ಲಿವೆ. ಜೊತೆಗೆ ಭಾರತದಲ್ಲಿ ನಾಗರಿಕ ಸಮಾಜ ಸಹ ಸ್ಥಳೀಯ ಪರಿಸರ ರಕ್ಷಣೆಯ ಕಾರ್ಯದಲ್ಲಿ ತೊಡಗಿದೆ. ಇಂತಹ ಪರಿಸರ ಪ್ರಜ್ಞೆಗೆ ಸಿನಿಮಾ ಎಂಬ ಮಾಧ್ಯಮವು ಕನ್ನಡಿ ಹಿಡಿಯುತ್ತದೆ.

    MORE
    GALLERIES

  • 47

    Rishabh Shetty: ವಿಶ್ವಸಂಸ್ಥೆಯಲ್ಲಿ ಮೊಳಗಿದ ಕನ್ನಡದ ಕಂಪು, ರಿಷಬ್ ಶೆಟ್ಟಿ ಮಾಡಿದ ಭಾಷಣವೇನು?

    ಸಿನಿಮಾವೂ ವಾಸ್ತವವನ್ನು ಜಗತ್ತಿಗೆ ತೋರಿಸುವ ಪ್ರಮುಖ ಪಾತ್ರ ನಿರ್ವಹಿಸುತ್ತವೆ, ಹಲವಾರು ಭಾರತೀಯ ಸಿನಿಮಾಗಳು ಕಾಲ್ಪನಿಕ ಹಾಗೂ ವಾಸ್ತವ ಕತೆಗಳ ಮೂಲಕ ಪರಿಸರ ಸಂರಕ್ಷಣೆಯ ವಿಚಾರ ಹೇಳಿದ್ದು, ಈ ಕುರಿತ ಜಾಗೃತಿ ಮೂಡಿಸಿವೆ ಎಂಬುದು ನಮ್ಮ ಹೆಮ್ಮೆ ಎಂದು ಹೇಳಿದ್ದಾರೆ.

    MORE
    GALLERIES

  • 57

    Rishabh Shetty: ವಿಶ್ವಸಂಸ್ಥೆಯಲ್ಲಿ ಮೊಳಗಿದ ಕನ್ನಡದ ಕಂಪು, ರಿಷಬ್ ಶೆಟ್ಟಿ ಮಾಡಿದ ಭಾಷಣವೇನು?

    ಇತ್ತೀಚಿನ ನನ್ನ ಕಾಂತಾರ ಸಿನಿಮಾದಲ್ಲಿ ಸಹ, ನಿಸರ್ಗದ ಮಡಿಲಲ್ಲಿ, ಮನುಷ್ಯನ ಜೀವನ, ಜನರ ಸ್ಥಳೀಯ ನಂಬಿಕೆ, ಆಚರಣೆ ಕುರಿತ ಪ್ರಮುಖ ಅಂಶಗಳು ಅಡಕವಾಗಿವೆ. ಪರಿಸರದ ಜತೆ ನಾವು ಹೊಂದಿರುವ ನಂಟು, ಅದು ನಮ್ಮ ಮೇಲೆ ಬೀರುವ ಪರಿಣಾಮ ಸಹಬಾಳ್ವೆ, ಸಾಂಸ್ಕøತಿಕ ಹಿರಿಮೆಗಳು ಹೇಗೆ ಪರಸ್ಪರ ಅವಲಂಬಿಸಿದೆ ಎಂಬುದನ್ನು ಕಾಂತಾರ ಸಿನಿಮಾ ತೋರಿಸಿದೆ.

    MORE
    GALLERIES

  • 67

    Rishabh Shetty: ವಿಶ್ವಸಂಸ್ಥೆಯಲ್ಲಿ ಮೊಳಗಿದ ಕನ್ನಡದ ಕಂಪು, ರಿಷಬ್ ಶೆಟ್ಟಿ ಮಾಡಿದ ಭಾಷಣವೇನು?

    ಸ್ಥಳೀಯ ಪರಿಸರ ರಕ್ಷಣೆ, ಇದರಲ್ಲಿ ಸರ್ಕಾರದ ಪಾತ್ರ, ಪರಿಸರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಮುದಾಯಗಳ ಪ್ರಾಮುಖ್ಯತೆಗಳನ್ನು ಸಿನಿಮಾ ಎಳೆಎಳೆಯಾಗಿ ಬಿಚ್ಚಿಟ್ಟಿದೆ ಎಂದು ರಿಷಬ್ ಶೆಟ್ಟಿ ಅವರು ಹೇಳಿದ್ದಾರೆ.

    MORE
    GALLERIES

  • 77

    Rishabh Shetty: ವಿಶ್ವಸಂಸ್ಥೆಯಲ್ಲಿ ಮೊಳಗಿದ ಕನ್ನಡದ ಕಂಪು, ರಿಷಬ್ ಶೆಟ್ಟಿ ಮಾಡಿದ ಭಾಷಣವೇನು?

    ಕಾಂತಾರದಂತಹ ಸಿನಿಮಾಗಳು ವಾಸ್ತವವನ್ನು ತೆರೆದಿಡುವ ಜತೆಗೆ ಪರಿಸರದ ಸವಾಲುಗಳನ್ನು ಎದುರಿಸಲು, ಸಮಸ್ಯೆಗಳನ್ನು ಬಗೆಹರಿಸಲು ಜನರಿಗೆ ಸ್ಫೂರ್ತಿ ನೀಡುತ್ತವೆ. ಭಾವನೆಗಳನ್ನು ಜಾಗೃತಗೊಳಿಸಿ, ಪರಿಸರ ರಕ್ಷಣೆಯಲ್ಲಿ ಜನ ತೆರಳುವಂತೆ ಮಾಡುತ್ತವೆ. ಇಂತಹ ಪ್ರಯತ್ನ ಪರಿಶ್ರಮವನ್ನು ಗುರುತಿಸಬೇಕು, ಪ್ರೋತ್ಸಾಹಿಸಬೇಕು ಎಂಬುದಾಗಿ ಕಲಿ ನೆರೆದಿರುವ ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತೇನೆ ಎಂದು ಭಾಷಣ ಮುಗಿಸಿದ್ದಾರೆ.

    MORE
    GALLERIES