ಕಾಂತಾರ 2 ಸಿನಿಮಾ ಯಾವ ಸೆಟ್ಟೇರುತ್ತದೆ ಎಂದು ಕಾಯುತ್ತಿರುವ ಪ್ರೇಕ್ಷಕರಿಗೆ ಒಂದು ಗುಡ್ನ್ಯೂಸ್ ಸಿಕ್ಕಿದೆ. ಈಗ ಸಿನಿಮಾ ತಂಡ ಕಾಂತಾರಾ ಭಾಗ-2 ಚಿತ್ರಕ್ಕೆ ಅಣ್ಣಪ್ಪ ಪಂಜುರ್ಲಿ ಬಳಿ ಅನುಮತಿ ಕೇಳಿದೆ.
2/ 7
ಮಂಗಳೂರಿನ ಬಂದಲೆಯಲ್ಲಿ ನಡೆದ ಅಣ್ಣಪ್ಪ ಪಂಜುರ್ಲಿ ಕೋಲದಲ್ಲಿ ಚಿತ್ರತಂಡ ಭಾಗವಹಿಸಿ ಮುಂದಿನ ಸಿನಿಮಾ ಮಾಡಲು ಅನುಮತಿ ಕೇಳಿದೆ.
3/ 7
ಅಣ್ಣಪ್ಪ ಪಂಜುರ್ಲಿ ದೈವಕ್ಕೆ ಕಾಂತಾರ ಚಿತ್ರತಂಡ ಹರಕೆ ಕೋಲ ನೀಡಿದ್ದು ಈ ಸಂದರ್ಭ ಕಾಂತಾರ 2 ಸಿನಿಮಾಗೆ ಅನುಮತಿ ಕೇಳಿದ್ದರು. ಕಾಂತಾರ ಭಾಗ-2 ಸಿನಿಮಾಗೆ ಅಣ್ಣಪ್ಪ ಪಂಜುರ್ಲಿ ದೈವ ಷರತ್ತುಬದ್ಧ ಅನುಮತಿ ನೀಡಿದೆ.
4/ 7
ಹರಕೆ ಕೋಲದಲ್ಲಿ ಕಾಂತಾರಾ-2 ಚಿತ್ರಕ್ಕೆ ಅನುಮತಿ ಕೇಳಿದ ಚಿತ್ರತಂಡ ಈ ಬಗ್ಗೆ ಪ್ರಸ್ತಾಪಿಸಿದೆ. ಈ ವೇಳೆ ಚಿತ್ರತಂಡಕ್ಕೆ ಹಲವು ನಿಯಮಗಳನ್ನು ಹೇಳಿದ ದೈವ ಅಣ್ಣಪ್ಪ ಪಂಜುರ್ಲಿ ಸಿನಿಮಾ ಮಾಡಲು ಅವಕಾಶ ಕೊಟ್ಟಿದೆ.
5/ 7
ಮೊದಲು ಚಿತ್ರಮಾಡುವಾಗ ಹತ್ತು ಬಾರಿ ಯೋಚನೆ ಮಾಡಿದ್ದೀರಿ. ಈ ಬಾರಿ ನೂರು ಬಾರಿ ಯೋಚನೆ ಮಾಡಿ. ಹಳೆಯ ತಂಡವನ್ನೇ ಉಪಯೋಗಿಸಿ ಮುಂದುವರಿಯಿರಿ ಎಂದು ದೈವ ಷರತ್ತು ಹೇಳಿದೆ.
6/ 7
ಶುದ್ಧಾಚಾರದೊಂದಿಗೆ ಚಿತ್ರವನ್ನು ಮುಂದುವರಿಸಿರಿ. ಮಾಡಿದ ಪ್ರಯತ್ನಕ್ಕೆ ಜಯ ಸಿಗುವಂತೆ ಮಾಡುತ್ತೇನೆ ಎಂದು ಅಣ್ಣಪ್ಪ ಪಂಜುರ್ಲಿ ದೈವ ಕಾಂತಾರ ಚಿತ್ರತಂಡಕ್ಕೆ ಅಭಯ ನೀಡಿದೆ.
7/ 7
ಅಣ್ಣಪ್ಪ ಪಂಜುರ್ಲಿ ಕೋಲದ ಸಂಧರ್ಭದಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು, ನಟ ರಿಷಬ್ ಶೆಟ್ಟಿ, ಸಪ್ತಮಿ ಗೌಡ, ಪ್ರಮೋದ್ ಶೆಟ್ಟಿ,ರಿಷಬ್ ಪತ್ನಿ ಪ್ರಗತಿ ಶೆಟ್ಟಿ ಸೇರಿದಂತೆ ಕಾಂತಾರಾ ಕಲಾವಿದರು, ರಿಷಬ್ ಕುಟುಂಬಸ್ಥರು ಭಾಗಿಯಾಗಿದ್ದರು.