ಮಾರ್ಚ್ 17 ಕ್ಕೆ ಪುನೀತ್ ರಾಜ್ಕುಮಾರ್ ಅವರ 49ನೇ ಹುಟ್ಟುಹಬ್ಬ. ಅದಕ್ಕೆ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದಾರೆ. ಅಪ್ಪು ಅಭಿನಯದ ಯುವರತ್ನ ಮತ್ತೆ ತೆರೆಗೆ ಬರಲಿದೆ.
ಮಾರ್ಚ್ 17 ಕ್ಕೆ ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರ 49ನೇ ವರ್ಷದ ಹುಟ್ಟುಹಬ್ಬ ಇದೆ. ಅದಕ್ಕೆ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಲು ತೀರ್ಮಾನ ಮಾಡಿದ್ದಾರೆ.
2/ 8
ಅಪ್ಪು ಅಗಲಿ ಒಂದೂವರೆ ವರ್ಷ ಕಳೆಯುತ್ತಾ ಬಂದ್ರೂ ಅವರ ನೆನಪು ಮಾತ್ರ ಜೀವಂತವಾಗಿದೆ. ಅದಕ್ಕೆ ಅಭಿಮಾನಿಗಳ ಮನಸ್ಸಿನಲ್ಲಿ ಅಪ್ಪು ದೇವರಾಗಿ ಉಳಿದು ಬಿಟ್ಟಿದ್ದಾರೆ.
3/ 8
ಪುನೀತ್ ಬರ್ತ್ಡೇಗೆ ಬೆಂಗಳೂರಿನ ಜೆಪಿ ನಗರದ ಸಿದ್ಧಲಿಂಗೇಶ್ವರ ಥಿಯೇಟರ್ ವಿಶೇಷವಾಗಿ ರೆಡಿಯಾಗಿದೆ. ಅದಕ್ಕೆ ಗುರುವಾರ ಅಪ್ಪು ಅಭಿನಯದ `ಯುವರತ್ನ' ಸಿನಿಮಾವನ್ನು ವಿಶೇಷವಾಗಿ ಉಚಿತ ಪ್ರದರ್ಶನ ಮಾಡುತ್ತಿದ್ದಾರೆ.
4/ 8
ಸಿದ್ಧಲಿಂಗೇಶ್ವರ ಥಿಯೇಟರ್ ನಲ್ಲಿ ಯುವರತ್ನ ಸಿನಿಮಾ ರಾತ್ರಿ 9.30ಕ್ಕೆ ವಿಶೇಷ ಪ್ರದರ್ಶನ ಉಚಿತವಾಗಿ ಮಾಡಲಾಗುತ್ತೆ. ಆ ಬಳಿಕ ರಾತ್ರಿ 12 ಗಂಟೆಗೆ ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಲಾಗುತ್ತದೆ.
5/ 8
ಜೆಪಿ ನಗರದ ದೊಡ್ಮನೆ ಅಭಿಮಾನಿಗಳ ಸಂಘ, ಮಾರ್ಚ್ 17ರ ಬೆಳಗ್ಗೆ 9 ಗಂಟೆಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದಾರೆ. ಬೆಂಗಳೂರಿನ ವಿವಿಧೆಡೆ ಅಪ್ಪು ಹುಟ್ಟುಹಬ್ಬ ಆಚರಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.
6/ 8
ಪುನೀತ್ ರಾಜ್ಕುಮಾರ್ ನಟನೆಯ ಕೊನೆಯ ಸಾಕ್ಷ್ಯಚಿತ್ರ ಗಂಧದಗುಡಿ ಮಾರ್ಚ್ 17ರಂದು ಒಟಿಟಿಗೆ ಲಗ್ಗೆ ಇಡುತ್ತಿದೆ. ಅಮೆಜಾನ್ ಪ್ರೈಂನಲ್ಲಿ ಪ್ರಸಾರವಾಗಲಿದೆ.
7/ 8
ಅಲ್ಲದೇ ಮಾರ್ಚ್ 17ಕ್ಕೆ ಕಬ್ಜ ಸಿನಿಮಾ ಬಿಡುಗಡೆ ಆಗುತ್ತಿದೆ. ಕಬ್ಜ ಸಿನಿಮಾವನ್ನು ಚಿತ್ರತಂಡವು ಪುನೀತ್ ಅವರಿಗೆ ಅರ್ಪಣೆ ಮಾಡುತ್ತಿದ್ದಾರೆ.
8/ 8
ರಾಜ್ಯದೆಲ್ಲೆಡೆ ಅಪ್ಪು ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಅಭಿಮಾನಿಗಳು ಕಾಯ್ತಾ ಇದ್ದಾರೆ. ಪುನೀತ್ ಅವರನ್ನು ನೆನೆದು ಸಂಭ್ರಮಿಸಲು ಸಜ್ಜಾಗಿದ್ದಾರೆ.
ಪುನೀತ್ ಬರ್ತ್ಡೇಗೆ ಬೆಂಗಳೂರಿನ ಜೆಪಿ ನಗರದ ಸಿದ್ಧಲಿಂಗೇಶ್ವರ ಥಿಯೇಟರ್ ವಿಶೇಷವಾಗಿ ರೆಡಿಯಾಗಿದೆ. ಅದಕ್ಕೆ ಗುರುವಾರ ಅಪ್ಪು ಅಭಿನಯದ `ಯುವರತ್ನ' ಸಿನಿಮಾವನ್ನು ವಿಶೇಷವಾಗಿ ಉಚಿತ ಪ್ರದರ್ಶನ ಮಾಡುತ್ತಿದ್ದಾರೆ.
ಸಿದ್ಧಲಿಂಗೇಶ್ವರ ಥಿಯೇಟರ್ ನಲ್ಲಿ ಯುವರತ್ನ ಸಿನಿಮಾ ರಾತ್ರಿ 9.30ಕ್ಕೆ ವಿಶೇಷ ಪ್ರದರ್ಶನ ಉಚಿತವಾಗಿ ಮಾಡಲಾಗುತ್ತೆ. ಆ ಬಳಿಕ ರಾತ್ರಿ 12 ಗಂಟೆಗೆ ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಲಾಗುತ್ತದೆ.
ಜೆಪಿ ನಗರದ ದೊಡ್ಮನೆ ಅಭಿಮಾನಿಗಳ ಸಂಘ, ಮಾರ್ಚ್ 17ರ ಬೆಳಗ್ಗೆ 9 ಗಂಟೆಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದಾರೆ. ಬೆಂಗಳೂರಿನ ವಿವಿಧೆಡೆ ಅಪ್ಪು ಹುಟ್ಟುಹಬ್ಬ ಆಚರಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.