Sarath Babu: ಹಿರಿಯ ನಟ ಶರತ್ ಬಾಬು ನಿಧರಾಗಿದ್ದಾರೆ. ಸೌತ್ ಸಿನಿಮಾ ಇಂಡಸ್ಟ್ರಿಯ ಜನಪ್ರಿಯ ನಟ ಶರತ್ ಬಾಬು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೈದರಾಬಾದ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ
ಸೌತ್ ಸಿನಿಮಾ ಇಂಡಸ್ಟ್ರಿಯ ಜನಪ್ರಿಯ ನಟ ಶರತ್ ಬಾಬು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೈದರಾಬಾದ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ . ಶರತ್ ಬಾಬು ಸಾವಿನ ಬಗ್ಗೆ ಕುಟುಂಬಸ್ಥರು ಅಧಿಕೃತ ಮಾಹಿತಿ ನೀಡಿದ್ದಾರೆ.
2/ 9
ಶರತ್ ಬಾಬು ಅವರಿಗೆ ಉಸಿರಾಡಲು ಕೂಡ ಕಷ್ಟವಾಗಿತ್ತು, ವೆಂಟಿಲೇಟರ್ನಲ್ಲಿ ಇಡಲಾಗಿತ್ತು ಶರತ್ ಬಾಬು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದೆ ಶರತ್ ಬಾಬು ನಿಧನದ ಬಗ್ಗೆ ಸುದ್ದಿಯಾಗಿತ್ತು. ಆದ್ರೆ ನಟನ ಅಕ್ಕ ಶರತ್ ನಿಧನದ ಸುದ್ದಿ ಸುಳ್ಳು ಎಂದಿದ್ರು. ಇದೀಗ ನಟ ಸಾವಿನ ಬಗ್ಗೆ ಮಾಹಿತಿ ನೀಡಿದ್ದಾರೆ.
3/ 9
ಇತ್ತೀಚಿಗೆ ನಟ ಶರತ್ ಬಾಬು ದಿಢೀರ್ ಅಸ್ವಸ್ಥರಾಗಿದ್ದ ಹಿನ್ನೆಲೆ ಅವರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ನಟನ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಅವರನ್ನು ಬೆಂಗಳೂರಿನಿಂದ ಹೈದರಾಬಾದ್ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
4/ 9
ದಕ್ಷಿಣದ ಹಿರಿಯ ನಟ ಶರತ್ ಬಾಬು ಸುಮಾರು 4 ದಶಕಗಳಿಂದ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಕನ್ನಡದಲ್ಲಿ ಸುಮಾರು 20ಕ್ಕಿಂತ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು.
5/ 9
ಶರತ್ ಬಾಬು ಅವರು 31 ಜುಲೈ 1951 ರಂದು ಶ್ರೀಕಾಕುಳಂ ಜಿಲ್ಲೆಯ ಅಮುದಲಾದಲ್ಲಿ ಜನಿಸಿದರು. ತಂದೆ ಉದ್ಯಮಿ. ಶರತ್ ಬಾಬುಗೆ ಪೊಲೀಸ್ ಆಗಬೇಕು ಎನ್ನುವ ಆಸೆ ಇತ್ತಂತೆ. ಕಣ್ಣಿನ ಸಮಸ್ಯೆಯಿಂದ ಪೊಲೀಸ್ ಆಗಲು ಸಾಧ್ಯವಾಗಲಿಲ್ಲ. ಆದರೆ ಹಲವು ಸಿನಿಮಾಗಳಲ್ಲಿ ಪೊಲೀಸ್ ಅಧಿಕಾರಿಯಾಗಿ ಶರತ್ ಬಾಬು ಕಾಣಿಸಿಕೊಂಡಿದ್ದರು.
6/ 9
ರಾಮರಾಜ್ಯಂ' ತೆಲುಗು ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದರು. ಆದ್ರೆ ರಾಮರಾಜ್ಯಂ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡಲಿಲ್ಲ. ಶರತ್ ಬಾಬು ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ನಾಯಕನಾಗಿ ಮತ್ತು ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ.
7/ 9
ಸುಮಾರು 8 ನಂದಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇವರ ಮೂಲ ಹೆಸರು ಸತ್ಯಂ ಬಾಬು ದೀಕ್ಷಿತಲು. ನಾಯಕನಾಗಿ ಮತ್ತು ಪೋಷಕ ನಟನಾಗಿ ಸಾಕಷ್ಟು ಮನ್ನಣೆ ಪಡೆದಿದ್ದಾರೆ. ಕನ್ನಡದಲ್ಲಿ ಅವರು ನಟಿಸಿದ ಅಮೃತವರ್ಷಿಣಿ ಸಿನಿಮಾ ಸೂಪರ್ ಹಿಟ್ ಆಗಿತ್ತು.
8/ 9
ಶರತ್ ಬಾಬು 1973 ರಲ್ಲಿ 'ರಾಮ ರಾಜ್ಯ' ಚಿತ್ರದ ಮೂಲಕ ನಟನಾಗಿ ಎಂಟ್ರಿ ಕೊಟ್ಟರು. ಇಂಡಸ್ಟ್ರಿಯಲ್ಲಿ 50 ವರ್ಷ ಪೂರೈಸಿರುವ ಅವರಿಗೆ ಸದ್ಯ 72 ವರ್ಷವಾಗಿದೆ.
9/ 9
ಶರತ್ ಬಾಬು ರಮಾಪ್ರಭಾ ಮತ್ತು ಸ್ನೇಹಾ ನಂಬಿಯಾರ್ ಅವರನ್ನು ವಿವಾಹವಾಗಿದ್ರೂ ಇಬ್ಬರಿಗೂ ವಿಚ್ಛೇದನ ನೀಡಿದ್ದರು. ಪ್ರಸ್ತುತ ಚೆನ್ನೈನಲ್ಲಿ ನೆಲೆಸಿದ್ದರು.
ಸೌತ್ ಸಿನಿಮಾ ಇಂಡಸ್ಟ್ರಿಯ ಜನಪ್ರಿಯ ನಟ ಶರತ್ ಬಾಬು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೈದರಾಬಾದ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ . ಶರತ್ ಬಾಬು ಸಾವಿನ ಬಗ್ಗೆ ಕುಟುಂಬಸ್ಥರು ಅಧಿಕೃತ ಮಾಹಿತಿ ನೀಡಿದ್ದಾರೆ.
ಶರತ್ ಬಾಬು ಅವರಿಗೆ ಉಸಿರಾಡಲು ಕೂಡ ಕಷ್ಟವಾಗಿತ್ತು, ವೆಂಟಿಲೇಟರ್ನಲ್ಲಿ ಇಡಲಾಗಿತ್ತು ಶರತ್ ಬಾಬು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದೆ ಶರತ್ ಬಾಬು ನಿಧನದ ಬಗ್ಗೆ ಸುದ್ದಿಯಾಗಿತ್ತು. ಆದ್ರೆ ನಟನ ಅಕ್ಕ ಶರತ್ ನಿಧನದ ಸುದ್ದಿ ಸುಳ್ಳು ಎಂದಿದ್ರು. ಇದೀಗ ನಟ ಸಾವಿನ ಬಗ್ಗೆ ಮಾಹಿತಿ ನೀಡಿದ್ದಾರೆ.
ಇತ್ತೀಚಿಗೆ ನಟ ಶರತ್ ಬಾಬು ದಿಢೀರ್ ಅಸ್ವಸ್ಥರಾಗಿದ್ದ ಹಿನ್ನೆಲೆ ಅವರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ನಟನ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಅವರನ್ನು ಬೆಂಗಳೂರಿನಿಂದ ಹೈದರಾಬಾದ್ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ದಕ್ಷಿಣದ ಹಿರಿಯ ನಟ ಶರತ್ ಬಾಬು ಸುಮಾರು 4 ದಶಕಗಳಿಂದ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಕನ್ನಡದಲ್ಲಿ ಸುಮಾರು 20ಕ್ಕಿಂತ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು.
ಶರತ್ ಬಾಬು ಅವರು 31 ಜುಲೈ 1951 ರಂದು ಶ್ರೀಕಾಕುಳಂ ಜಿಲ್ಲೆಯ ಅಮುದಲಾದಲ್ಲಿ ಜನಿಸಿದರು. ತಂದೆ ಉದ್ಯಮಿ. ಶರತ್ ಬಾಬುಗೆ ಪೊಲೀಸ್ ಆಗಬೇಕು ಎನ್ನುವ ಆಸೆ ಇತ್ತಂತೆ. ಕಣ್ಣಿನ ಸಮಸ್ಯೆಯಿಂದ ಪೊಲೀಸ್ ಆಗಲು ಸಾಧ್ಯವಾಗಲಿಲ್ಲ. ಆದರೆ ಹಲವು ಸಿನಿಮಾಗಳಲ್ಲಿ ಪೊಲೀಸ್ ಅಧಿಕಾರಿಯಾಗಿ ಶರತ್ ಬಾಬು ಕಾಣಿಸಿಕೊಂಡಿದ್ದರು.
ರಾಮರಾಜ್ಯಂ' ತೆಲುಗು ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದರು. ಆದ್ರೆ ರಾಮರಾಜ್ಯಂ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡಲಿಲ್ಲ. ಶರತ್ ಬಾಬು ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ನಾಯಕನಾಗಿ ಮತ್ತು ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ.
ಸುಮಾರು 8 ನಂದಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇವರ ಮೂಲ ಹೆಸರು ಸತ್ಯಂ ಬಾಬು ದೀಕ್ಷಿತಲು. ನಾಯಕನಾಗಿ ಮತ್ತು ಪೋಷಕ ನಟನಾಗಿ ಸಾಕಷ್ಟು ಮನ್ನಣೆ ಪಡೆದಿದ್ದಾರೆ. ಕನ್ನಡದಲ್ಲಿ ಅವರು ನಟಿಸಿದ ಅಮೃತವರ್ಷಿಣಿ ಸಿನಿಮಾ ಸೂಪರ್ ಹಿಟ್ ಆಗಿತ್ತು.