ರಕ್ಷಿತಾ ಪ್ರೇಮ್ ಕನ್ನಡ, ತಮಿಳು ಮತ್ತು ತೆಲಗು ಚಿತ್ರರಂಗದ ಹಲವು ಚಿತ್ರಗಳಲ್ಲಿ ನಟಿಸಿರುವ ಖ್ಯಾತ ನಟಿ. ಇವರು 1984 ರಲ್ಲಿ ಬೆಂಗಳೂರಿನಲ್ಲಿ ಜನಿಸಿದ್ದಾರೆ.
2/ 8
ಇವರ ಖ್ಯಾತ ಛಾಯಾಗ್ರಾಹಕ ಬಿ.ಸಿ.ಗೌರಿಶಂಕರ್ ಮತ್ತು ನಟಿ ಮಮತಾರಾವ್ ರವರ ಪುತ್ರಿ. 2007 ರಲ್ಲಿ ನಿರ್ದೇಶಕ ಪ್ರೇಮ್ರನ್ನು ವಿವಾಹವಾದ ರಕ್ಷಿತಾರಿಗೆ ಒಬ್ಬ ಪುತ್ರನಿದ್ದಾನೆ.
3/ 8
2002 ರಲ್ಲಿ ತೆರೆಕಂಡ ಪುನೀತ್ ರಾಜಕುಮಾರ್ ಅಭಿನಯದ `ಅಪ್ಪು' ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದರು.ನಂತರ ಈ ಚಿತ್ರದ ತೆಲುಗು ಮತ್ತು ತಮಿಳು ರಿಮೇಕ್ನಲ್ಲಿ ಕೂಡ ನಾಯಕಿಯಾಗಿ ನಟಿಸಿದರು. ಕಲಾಸಿಪಾಳ್ಯ ಚಿತ್ರ ರಕ್ಷಿತಾ ಸಿನಿ ಕರಿಯರ್ಗೆ ಬಿಗ್ಬ್ರೇಕ್ ನೀಡಿತು.
4/ 8
ಕನ್ನಡದಲ್ಲಿ ಪುನೀತ್, ಸುದೀಪ್, ಶಿವರಾಜಕುಮಾರ್, ಉಪೇಂದ್ರ, ಶ್ರೀಮುರಳಿ ಮುಂತಾದ ನಟರೊಂದಿಗೆ ನಟಿಸಿದ ರಕ್ಷಿತಾ ತೆಲುಗಿನಲ್ಲಿ ಚಿರಂಜೀವಿ, ನಾಗಾರ್ಜುನ, ಮಹೇಶ್ ಬಾಬು, ರವಿತೇಜ, ಎನ್.ಟಿ.ಆರ್ ಮುಂತಾದ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.
5/ 8
ಪ್ರೇಮ್ ಜೊತೆ ವಿವಾಹವಾದ ನಂತರ ನಟನೆಗೆ ವಿರಾಮ ಹೇಳಿದ ರಕ್ಷಿತಾ ತಮ್ಮ ಹೋಮ್ ಬ್ಯಾನರ್ನಲ್ಲಿ ಚಿತ್ರ ನಿರ್ಮಾಣಕ್ಕಿಳಿದರು. ಶಿವರಾಜಕುಮಾರ್ರವರ ನೂರನೇ ಚಿತ್ರ ಜೋಗಯ್ಯವನ್ನು ನಿರ್ಮಾಣವನ್ನು `ಪ್ರೇಮ್ ಪಿಕ್ಚರ್ಸ್' ಅಡಿಯಲ್ಲಿ ನಿರ್ಮಾಣ ಮಾಡಿದರು.
6/ 8
ಇದೇ ಬ್ಯಾನರ್ನಲ್ಲಿ ಪ್ರೇಮ್ ನಟನೆಯ `ಡಿ.ಕೆ' ಚಿತ್ರವನ್ನು ನಿರ್ಮಿಸಿದ್ದಾರೆ. ಇತ್ತೀಚೆಗೆ ರಕ್ಷಿತಾ ಅವರು ತಮ್ಮನಿಗಾಗಿ ಏಕ್ ಲವ್ ಯಾ ಸಿನಿಮಾ ಮಾಡಿದ್ದರು.
7/ 8
ಕಿರುತೆರೆಯಲ್ಲಿ ನಿರೂಪಕಿಯಾಗಿ `ಸ್ವಯಂವರ' ಕಾರ್ಯಕ್ರಮ ನಿರೂಪಣೆ ಮಾಡಿರುವ ರಕ್ಷಿತಾ ಹಲವು ಕಾರ್ಯಕ್ರಮಗಳಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ್ದಾರೆ. ಇವುಗಳಲ್ಲಿ ಜೀ ಕನ್ನಡದ `ಕಾಮಿಡಿ ಕಿಲಾಡಿಗಳು' ತುಂಬಾ ಪ್ರಸಿದ್ಧವಾಗಿದೆ.
8/ 8
2012 ರಲ್ಲಿ ಶ್ರೀರಾಮಲು ನೇತೃತ್ವದ `ಬಿ.ಎಸ್.ಆರ್. ಕಾಂಗ್ರಸ್' ಸದಸ್ಯೆಯಾಗಿದ್ದ ರಕ್ಷಿತಾ ಕೆಲವು ಭಿನ್ನಾಭಿಪ್ರಾಯಗಳಿಂದ ಪಕ್ಷ ತೊರೆದು 2013 ರಲ್ಲಿ ಜೆಡಿಎಸ್ ಪಕ್ಷ ಸೇರಿದರು. ನಂತರ 2014 ರಲ್ಲಿ ಬಿಜೆಪಿ ಸೇರಿದರು.
2002 ರಲ್ಲಿ ತೆರೆಕಂಡ ಪುನೀತ್ ರಾಜಕುಮಾರ್ ಅಭಿನಯದ `ಅಪ್ಪು' ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದರು.ನಂತರ ಈ ಚಿತ್ರದ ತೆಲುಗು ಮತ್ತು ತಮಿಳು ರಿಮೇಕ್ನಲ್ಲಿ ಕೂಡ ನಾಯಕಿಯಾಗಿ ನಟಿಸಿದರು. ಕಲಾಸಿಪಾಳ್ಯ ಚಿತ್ರ ರಕ್ಷಿತಾ ಸಿನಿ ಕರಿಯರ್ಗೆ ಬಿಗ್ಬ್ರೇಕ್ ನೀಡಿತು.
ಕನ್ನಡದಲ್ಲಿ ಪುನೀತ್, ಸುದೀಪ್, ಶಿವರಾಜಕುಮಾರ್, ಉಪೇಂದ್ರ, ಶ್ರೀಮುರಳಿ ಮುಂತಾದ ನಟರೊಂದಿಗೆ ನಟಿಸಿದ ರಕ್ಷಿತಾ ತೆಲುಗಿನಲ್ಲಿ ಚಿರಂಜೀವಿ, ನಾಗಾರ್ಜುನ, ಮಹೇಶ್ ಬಾಬು, ರವಿತೇಜ, ಎನ್.ಟಿ.ಆರ್ ಮುಂತಾದ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.
ಪ್ರೇಮ್ ಜೊತೆ ವಿವಾಹವಾದ ನಂತರ ನಟನೆಗೆ ವಿರಾಮ ಹೇಳಿದ ರಕ್ಷಿತಾ ತಮ್ಮ ಹೋಮ್ ಬ್ಯಾನರ್ನಲ್ಲಿ ಚಿತ್ರ ನಿರ್ಮಾಣಕ್ಕಿಳಿದರು. ಶಿವರಾಜಕುಮಾರ್ರವರ ನೂರನೇ ಚಿತ್ರ ಜೋಗಯ್ಯವನ್ನು ನಿರ್ಮಾಣವನ್ನು `ಪ್ರೇಮ್ ಪಿಕ್ಚರ್ಸ್' ಅಡಿಯಲ್ಲಿ ನಿರ್ಮಾಣ ಮಾಡಿದರು.
ಕಿರುತೆರೆಯಲ್ಲಿ ನಿರೂಪಕಿಯಾಗಿ `ಸ್ವಯಂವರ' ಕಾರ್ಯಕ್ರಮ ನಿರೂಪಣೆ ಮಾಡಿರುವ ರಕ್ಷಿತಾ ಹಲವು ಕಾರ್ಯಕ್ರಮಗಳಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ್ದಾರೆ. ಇವುಗಳಲ್ಲಿ ಜೀ ಕನ್ನಡದ `ಕಾಮಿಡಿ ಕಿಲಾಡಿಗಳು' ತುಂಬಾ ಪ್ರಸಿದ್ಧವಾಗಿದೆ.
2012 ರಲ್ಲಿ ಶ್ರೀರಾಮಲು ನೇತೃತ್ವದ `ಬಿ.ಎಸ್.ಆರ್. ಕಾಂಗ್ರಸ್' ಸದಸ್ಯೆಯಾಗಿದ್ದ ರಕ್ಷಿತಾ ಕೆಲವು ಭಿನ್ನಾಭಿಪ್ರಾಯಗಳಿಂದ ಪಕ್ಷ ತೊರೆದು 2013 ರಲ್ಲಿ ಜೆಡಿಎಸ್ ಪಕ್ಷ ಸೇರಿದರು. ನಂತರ 2014 ರಲ್ಲಿ ಬಿಜೆಪಿ ಸೇರಿದರು.