ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿನ 1000 ಕ್ಕೂ ಹೆಚ್ಚು ಗೀತೆಗಳನ್ನು ರಚಿಸಿರುವ ನಾಗೇಂದ್ರ ಪ್ರಸಾದ್, 'ಸತ್ಯ' ಚಿತ್ರದ 'ಹುಟ್ಟು ಎರಡಕ್ಷರ' ಹಾಡಿಗೆ ರಾಜ್ಯ ಪ್ರಶಸ್ತಿ ಪಡೆದವರು. ದೀಪಕ್ ನಟನೆಯ 'ಶಿಷ್ಯ' ಹಾಗೂ 'ಅಂಬಿ' ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. ಕಿಚ್ಚ ಸುದೀಪ್ ನಟನೆಯ 'ನಲ್ಲ' ಸೇರಿದಂತೆ ಹಲವಾರು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಸೂಪರ್ ಹಿಟ್ 'ಶ್ರೀ ಮಂಜುನಾಥ' ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.