ಜೀರ್ಣಕ್ರಿಯೆ: ರಾತ್ರಿ ಮಲಗುವ ಮೊದಲು ಐದು ಒಣದ್ರಾಕ್ಷಿಗಳನ್ನು ಒಂದು ಕಪ್ ನೀರಿನಲ್ಲಿ ನೆನೆಸಿ ಮತ್ತು ಮರುದಿನ ಬೆಳಗ್ಗೆ ನೆನೆಸಿದ ಒಣದ್ರಾಕ್ಷಿ ತಿಂದು ಮತ್ತು ನೀರನ್ನು ಕುಡಿಯಿರಿ. ಹೀಗೆ ತಿನ್ನುವುದರಿಂದ ನಮ್ಮ ದೇಹಕ್ಕೆ ಹೆಚ್ಚಿನ ಪೋಷಕಾಂಶಗಳು ಸಿಗುತ್ತವೆ. ಸಮೃದ್ಧವಾಗಿ ಫೈಬರ್ ಹೊಂದಿರುವ ಒಣದ್ರಾಕ್ಷಿ ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ ಮತ್ತು ಮಲಬದ್ಧತೆಯನ್ನು ತಡೆಯುತ್ತದೆ. ಈ ಡ್ರೈ ಫ್ರೂಟ್ ಅನ್ನು ಪ್ರತಿದಿನ ತಿನ್ನುವುದರಿಂದ ಉತ್ತಮ ಕರುಳಿನ ಬ್ಯಾಕ್ಟೀರಿಯಾಗಳ ಸಂಖ್ಯೆ ಹೆಚ್ಚಾಗುತ್ತದೆ. ಇದರಲ್ಲಿರುವ ಟಾರ್ಟಾರಿಕ್ ಆಮ್ಲವು ಉರಿಯೂತ ನಿವಾರಕ ಗುಣಗಳಿಂದಾಗಿ ಕರುಳಿನ ಕ್ಯಾನ್ಸರ್ ಬರುವ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. (ಸಾಂದರ್ಭಿಕ ಚಿತ್ರ)
ಹೃದ್ರೋಗದ ಅಪಾಯವನ್ನು ತಡೆಯುತ್ತದೆ: ಒಣದ್ರಾಕ್ಷಿಯ ಸೇವನೆ ಹೃದಯ ಸಂಬಂಧಿ ಹಾನಿಯನ್ನು ತಡೆಯುತ್ತದೆ. ಯಕೃತ್ತನ್ನು ಸಹ ರಕ್ಷಿಸುತ್ತದೆ. ಒಣದ್ರಾಕ್ಷಿಯಲ್ಲಿ ಹೆಚ್ಚಿನ ಪ್ರಮಾಣದ ಉತ್ಕರ್ಷಣ ನಿರೋಧಕಗಳ ಕಾರಣ, ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ಔಷಧೀಯ ಗುಣಗಳನ್ನು ಹೊಂದಿರುವ ಒಣದ್ರಾಕ್ಷಿಗಳನ್ನು ವಾರಕ್ಕೆ ಎರಡು ಬಾರಿ ತೆಗೆದುಕೊಳ್ಳುವಂತೆ ವೈದ್ಯರು ಶಿಫಾರಸು ಮಾಡುತ್ತಾರೆ. (ಸಾಂದರ್ಭಿಕ ಚಿತ್ರ)