ಬೆಳಗ್ಗೆ ಚಳಿ, ಮಧ್ಯಾಹ್ನವಾಗುತ್ತಿದ್ದಂತೆ ಕಣ್ಣು ಬಿಡಲಾರದಷ್ಟು ಬಿಸಿಲು. ಇದು ಸದ್ಯ ರಾಜ್ಯದ ನಾಗರಿಕರಲ್ಲಿ ಅನಾರೋಗ್ಯಕ್ಕೆ ಕಾರಣವಾಗಿರೋ ಹವಾಮಾನ. ಬೆಂಗಳೂರು ಸೇರಿದಂತೆ ಹಲವೆಡೆ ನಿರಂತರ ಕೆಮ್ಮು, ಉಸಿರಾಟದ ತೊಂದರೆ ಮತ್ತು ಜ್ವರದಿಂದ ಬಳಲುತ್ತಿರುವ ರೋಗಿಗಳು ಆಸ್ಪತ್ರೆಗೆ ದಾಖಲಾಗುವ ಸಂಖ್ಯೆ ಹೆಚ್ಚುತ್ತಿದೆ.