Crime News: ಮದುವೆಗೆ ನಿರಾಕರಿಸಿದ ಅಪ್ರಾಪ್ತ ಬಾಲಕಿಗೆ ಚಾಕುವಿನಿಂದ ಮನಬಂದಂತೆ ಚುಚ್ಚಿದ ಕಿರಾತಕ!

ನವದೆಹಲಿ: ಮದುವೆ ಆಗಲು ನಿರಾಕರಿಸಿದ ಅಪ್ರಾಪ್ತ ವಯಸ್ಸಿನ ಹುಡುಗಿಯನ್ನು ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಆಘಾತಕಾರಿ ಘಟನೆ ನವದೆಹಲಿಯಲ್ಲಿ ನಡೆದಿದೆ.

First published:

  • 17

    Crime News: ಮದುವೆಗೆ ನಿರಾಕರಿಸಿದ ಅಪ್ರಾಪ್ತ ಬಾಲಕಿಗೆ ಚಾಕುವಿನಿಂದ ಮನಬಂದಂತೆ ಚುಚ್ಚಿದ ಕಿರಾತಕ!

    ರಾ‍ಷ್ಟ್ರ ರಾಜಧಾನಿ ನವದೆಹಲಿಯ ಬದರ್‌ಪುರ ಪ್ರದೇಶದ ಮೊರಾಲ್‌ಬಂದ್ ಎಂಬಲ್ಲಿ ಈ ಘಟನೆ ನಡೆದಿದ್ದು, ಕಳೆದ ಭಾನುವಾರ ಮಧ್ಯಾಹ್ನ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    MORE
    GALLERIES

  • 27

    Crime News: ಮದುವೆಗೆ ನಿರಾಕರಿಸಿದ ಅಪ್ರಾಪ್ತ ಬಾಲಕಿಗೆ ಚಾಕುವಿನಿಂದ ಮನಬಂದಂತೆ ಚುಚ್ಚಿದ ಕಿರಾತಕ!

    ಬಾಲಕಿಯು ತನ್ನ ಗೆಳತಿಯ ಮನೆಯಲ್ಲಿ ಇದ್ದ ವೇಳೆ ಈ ಘಟನೆ ನಡೆದಿದ್ದು, ಸದ್ಯ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಆಕೆಗೆ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    MORE
    GALLERIES

  • 37

    Crime News: ಮದುವೆಗೆ ನಿರಾಕರಿಸಿದ ಅಪ್ರಾಪ್ತ ಬಾಲಕಿಗೆ ಚಾಕುವಿನಿಂದ ಮನಬಂದಂತೆ ಚುಚ್ಚಿದ ಕಿರಾತಕ!

    ಚಾಕು ಇರಿತದಿಂದ 17 ವರ್ಷದ ಬಾಲಕಿಯ ಕತ್ತು, ತಲೆಗೆ ಗಾಯವಾಗಿದ್ದು, ಬಾಲಕಿ ಮದುವೆ ಆಗಲು ನಿರಾಕರಿಸಿದ್ದಕ್ಕೆ ಆರೋಪಿಯು ಆಕೆಯ ಮೇಲೆ ದಾಳಿ ಮಾಡಿ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

    MORE
    GALLERIES

  • 47

    Crime News: ಮದುವೆಗೆ ನಿರಾಕರಿಸಿದ ಅಪ್ರಾಪ್ತ ಬಾಲಕಿಗೆ ಚಾಕುವಿನಿಂದ ಮನಬಂದಂತೆ ಚುಚ್ಚಿದ ಕಿರಾತಕ!

    ಕಳೆದ 4 ವರ್ಷಗಳಿಂದ ಬಾಲಕಿ ಹಾಗೂ ಯುವಕ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಯುವಕ ತನ್ನನ್ನು ಮದುವೆ ಆಗುವಂತೆ ಬಾಲಕಿಗೆ ಮನವಿ ಮಾಡಿದ್ದ ಎನ್ನಲಾಗಿದೆ.

    MORE
    GALLERIES

  • 57

    Crime News: ಮದುವೆಗೆ ನಿರಾಕರಿಸಿದ ಅಪ್ರಾಪ್ತ ಬಾಲಕಿಗೆ ಚಾಕುವಿನಿಂದ ಮನಬಂದಂತೆ ಚುಚ್ಚಿದ ಕಿರಾತಕ!

    ಹೀಗಾಗಿ ಸಂತ್ರಸ್ತ ಬಾಲಕಿ ಯುವಕನ ಜೊತೆ ಮದುವೆಗೆ ನಿರಾಕರಿಸಿದ್ದಲ್ಲದೇ ಆತನ ಜೊತೆ ಬಾಂಧವ್ಯವನ್ನೂ ಕಡಿದುಕೊಂಡಿದ್ದಳು. ಈ ಹಿನ್ನೆಲೆಯಲ್ಲಿ ಸಿಟ್ಟಾಗಿದ್ದ ಆರೋಪಿಯು ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.

    MORE
    GALLERIES

  • 67

    Crime News: ಮದುವೆಗೆ ನಿರಾಕರಿಸಿದ ಅಪ್ರಾಪ್ತ ಬಾಲಕಿಗೆ ಚಾಕುವಿನಿಂದ ಮನಬಂದಂತೆ ಚುಚ್ಚಿದ ಕಿರಾತಕ!

    ಪ್ರಕರಣದ ಸಂಬಂಧ ಐಪಿಸಿ ಸೆಕ್ಷನ್ 307 ರ ಅಡಿ ಕೊಲೆ ಯತ್ನ ಹಾಗೂ ಐಪಿಸಿ ಸೆಕ್ಷನ್ 506 ಹಾಗೂ 452ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಆಯುಕ್ತ ರಾಜೇಶ್ ದಿಯೋ ತಿಳಿಸಿದ್ಧಾರೆ.

    MORE
    GALLERIES

  • 77

    Crime News: ಮದುವೆಗೆ ನಿರಾಕರಿಸಿದ ಅಪ್ರಾಪ್ತ ಬಾಲಕಿಗೆ ಚಾಕುವಿನಿಂದ ಮನಬಂದಂತೆ ಚುಚ್ಚಿದ ಕಿರಾತಕ!

    ಸದ್ಯ ಪರಾರಿಯಾಗಿರುವ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಲು ಪೊಲೀಸರು ವಿಶೇಷ ತಂಡ ರಚನೆ ಮಾಡಿದ್ದಾರೆ. ತಾಂತ್ರಿಕ ತಂಡದ ನೆರವನ್ನು ಪಡೆಯುವ ಜೊತೆಯಲ್ಲೇ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲನೆ ಮಾಡಿದ್ದಾರೆ.

    MORE
    GALLERIES