ಮುಂಬರುವ ಲೋಕಸಭಾ ಚುನಾವಣೆಗೆ ನೆಹರೂ ಕುಟುಂಬದ ನಾಲ್ಕನೇ ತಲೆಮಾರಿನ ಕುಡಿ ಪ್ರಿಯಾಂಕಾ ಗಾಂಧಿ ಇಂದು ಉತ್ತರಪ್ರದೇಶದಿಂದ ರಣಕಹಳೆ ಮೊಳಗಿಸಿದ್ಧಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಪ್ರಿಯಾಂಕಾ ಗಾಂಧಿ ಇಂದು ಉತ್ತರಪ್ರದೇಶದಲ್ಲಿ ಬೃಹತ್ ರ್ಯಾಲಿ ನಡೆಸಿದರು. ಪ್ರಿಯಾಂಕಾ ಗಾಂಧಿಯವರ ಮೆಗಾ ರ್ಯಾಲಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಉತ್ತರಪ್ರದೇಶ ಪಶ್ಚಿಮ ವಿಭಾಗದ ಉಸ್ತುವಾರಿ ಜ್ಯೋತಿರಾದಿತ್ಯ ಸಿಂಧ್ಯ ಹಾಗೂ ಹಲವಾರು ಕಾಂಗ್ರೆಸ್ ಮುಖಂಡರು ಜೊತೆಗೂಡಿದ್ದರು. ಈವರೆಗೆ ಅಮೇಥಿ ಮತ್ತು ರಾಯ್ಬರೇಲಿಯಲ್ಲಿ ಮಾತ್ರ ರೋಡ್ಶೋ ನಡೆಸಿದ್ದ ಪ್ರಿಯಾಂಕಾ ಇದೇ ಮೊದಲ ಬಾರಿಗೆ ತಾಯಿ ಹಾಗೂ ಅಣ್ಣನ ಕ್ಷೇತ್ರದ ಹೊರಗೆ ರ್ಯಾಲಿ ನಡೆಸಿದರು.