Tamil Nadu Rains: ಭಾರೀ ಮಳೆಯಿಂದ ಚೆನ್ನೈ ಸೇರಿದಂತೆ 3 ಜಿಲ್ಲೆಗಳಲ್ಲಿ ಶಾಲೆಗೆ ರಜೆ ಘೋಷಣೆ​; ಪ್ರಧಾನಿಯಿಂದ ಅಗತ್ಯ ನೆರವಿನ ಭರವಸೆ

ತಮಿಳುನಾಡಿನ (Tamil Nadu Rains) ಚೆನ್ನೈ ಸೇರಿದಂತೆ ವಿವಿಧ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದಾಗಿ ಅನೇಕ ಪ್ರದೇಶದಲ್ಲಿ ನೀರು ನಿಂತಿದ್ದು, ಪ್ರವಾಹದ (Flood in Chennai) ಸ್ಥಿತಿ ಉಂಟಾಗಿದೆ. ನಿರಂತರ ಮಳೆಯಿಂದಾಗಿ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್ಪಟ್ಟು, ವಿಲ್ಲುಪುರಂ, ಕಡಲೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ರಕ್ಷಣಾ ಕಾರ್ಯಕ್ಕಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ರಾಜ್ಯಕ್ಕೆ ಆಗಮಿಸಿದೆ.

First published:

  • 18

    Tamil Nadu Rains: ಭಾರೀ ಮಳೆಯಿಂದ ಚೆನ್ನೈ ಸೇರಿದಂತೆ 3 ಜಿಲ್ಲೆಗಳಲ್ಲಿ ಶಾಲೆಗೆ ರಜೆ ಘೋಷಣೆ​; ಪ್ರಧಾನಿಯಿಂದ ಅಗತ್ಯ ನೆರವಿನ ಭರವಸೆ

    ಈಶಾನ್ಯ ಮಾನ್ಸೂನ್‌ನಿಂದಾಗಿ ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಶಾಲೆಗಳಿಗೆ ರಜೆ ನೀಡುವಂತೆ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಆಯಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದ್ದಾರೆ.

    MORE
    GALLERIES

  • 28

    Tamil Nadu Rains: ಭಾರೀ ಮಳೆಯಿಂದ ಚೆನ್ನೈ ಸೇರಿದಂತೆ 3 ಜಿಲ್ಲೆಗಳಲ್ಲಿ ಶಾಲೆಗೆ ರಜೆ ಘೋಷಣೆ​; ಪ್ರಧಾನಿಯಿಂದ ಅಗತ್ಯ ನೆರವಿನ ಭರವಸೆ

    ತಮಿಳುನಾಡಿನ ಉತ್ತರ ಕರಾವಳಿಯ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚೆನ್ನೈ ಮತ್ತು ಇತರ ಮೂರು ಜಿಲ್ಲೆಗಳಲ್ಲಿ ಬಹುತೇಕ ಸರ್ಕಾರಿ ಕಚೇರಿಗಳು ಕೂಡ ಬಂದ್​ ಆಗಿದೆ. ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಿಸಿ ಅಥವಾ ನೌಕರರು ಮನೆಯಿಂದಲೇ ಕೆಲಸ ಮಾಡಲು ಅವಕಾಶ ಮಾಡಿಕೊಡುವಂತೆ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮನವಿ ಮಾಡಿದ್ದಾರೆ

    MORE
    GALLERIES

  • 38

    Tamil Nadu Rains: ಭಾರೀ ಮಳೆಯಿಂದ ಚೆನ್ನೈ ಸೇರಿದಂತೆ 3 ಜಿಲ್ಲೆಗಳಲ್ಲಿ ಶಾಲೆಗೆ ರಜೆ ಘೋಷಣೆ​; ಪ್ರಧಾನಿಯಿಂದ ಅಗತ್ಯ ನೆರವಿನ ಭರವಸೆ

    ಚೆನ್ನೈನಲ್ಲಿ ಭಾನುವಾರ ರಾತ್ರಿಯಿಡೀ ಮಳೆ ಸುರಿದಿದ್ದು, 21 ಸೆಂ.ಮೀ ಮಳೆ ದಾಖಲಾಗಿದೆ. ನಗರದ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ರಾಜ್ಯ ಸರ್ಕಾರದ ಮನವಿಯ ನಂತರ ರಾಜಯದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ರಕ್ಷಣಾ ಕಾರ್ಯಾಚರಣೆಯಲ್ಲಿ ನಾಲ್ಕು ತಂಡಗಳನ್ನು ನಿಯೋಜಿಸಿದೆ.

    MORE
    GALLERIES

  • 48

    Tamil Nadu Rains: ಭಾರೀ ಮಳೆಯಿಂದ ಚೆನ್ನೈ ಸೇರಿದಂತೆ 3 ಜಿಲ್ಲೆಗಳಲ್ಲಿ ಶಾಲೆಗೆ ರಜೆ ಘೋಷಣೆ​; ಪ್ರಧಾನಿಯಿಂದ ಅಗತ್ಯ ನೆರವಿನ ಭರವಸೆ

    ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ತಮಿಳುನಾಡಿನ ಉತ್ತರ ಕರಾವಳಿಯ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಎರಡು ದಿನಗಳು ಕೂಡ ಮಳೆ ಅಬ್ಬರ ಹೆಚ್ಚಿರಲಿದೆ ಎನ್ನಲಾಗಿದೆ.

    MORE
    GALLERIES

  • 58

    Tamil Nadu Rains: ಭಾರೀ ಮಳೆಯಿಂದ ಚೆನ್ನೈ ಸೇರಿದಂತೆ 3 ಜಿಲ್ಲೆಗಳಲ್ಲಿ ಶಾಲೆಗೆ ರಜೆ ಘೋಷಣೆ​; ಪ್ರಧಾನಿಯಿಂದ ಅಗತ್ಯ ನೆರವಿನ ಭರವಸೆ

    ನಿರಂತರ ಮಳೆಯಿಂದಾಗಿ ಚೆನ್ನೈ ಸುತ್ತಮುತ್ತಲಿನ ಕೆರೆಗಳಲ್ಲಿ ನೀರಿನ ಸಂಗ್ರಹಣೆ ಅಧಿಕವಾಗಿದೆ. ಭಾರೀ ಮಳೆ ಪ್ರವಾಹದಿಂದ ಜನರು ನಲುಗಿದ್ದು, ಅಗತ್ಯ ನೆರವು ನೀಡುವ ಭರವಸೆಯನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ.

    MORE
    GALLERIES

  • 68

    Tamil Nadu Rains: ಭಾರೀ ಮಳೆಯಿಂದ ಚೆನ್ನೈ ಸೇರಿದಂತೆ 3 ಜಿಲ್ಲೆಗಳಲ್ಲಿ ಶಾಲೆಗೆ ರಜೆ ಘೋಷಣೆ​; ಪ್ರಧಾನಿಯಿಂದ ಅಗತ್ಯ ನೆರವಿನ ಭರವಸೆ

    ಈ ಸಂಬಂಧ ಸಿಎಂ ಸ್ಟಾಲಿನ್​ ಅವರಿಗೆ ಟ್ವೀಟ್​ ಮಾಡಿರುವ ಅವರು, ತಮಿಳುನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಚರ್ಚಿಸಲಾಗಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಬೆಂಬಲವನ್ನು ಭರವಸೆ ನೀಡಲಾಗಿದೆ. ಪ್ರತಿಯೊಬ್ಬರ ಯೋಗಕ್ಷೇಮ ಮತ್ತು ಸುರಕ್ಷತೆಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದಿದ್​ದಾರೆ.

    MORE
    GALLERIES

  • 78

    Tamil Nadu Rains: ಭಾರೀ ಮಳೆಯಿಂದ ಚೆನ್ನೈ ಸೇರಿದಂತೆ 3 ಜಿಲ್ಲೆಗಳಲ್ಲಿ ಶಾಲೆಗೆ ರಜೆ ಘೋಷಣೆ​; ಪ್ರಧಾನಿಯಿಂದ ಅಗತ್ಯ ನೆರವಿನ ಭರವಸೆ

    ಚೆನ್ನೈನಲ್ಲಿ ಅತಿ ಹೆಚ್ಚು ಅಂದರೆ 134.29 ಮಿಮೀ ಮಳೆಯಾಗಿದೆ. ಗ್ರೇಟರ್ ಚೆನ್ನೈ ಕಾರ್ಪೊರೇಷನ್ ನಗರದಲ್ಲಿ 160 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ. ಕಾಂಚೀಪುರಂ ಮತ್ತು ತಿರುವಳ್ಳೂರಿನಲ್ಲಿ ಪ್ರವಾಹದ ಎಚ್ಚರಿಕೆಯನ್ನು ನೀಡಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸಲು ಮತ್ತು ಸುರಕ್ಷಿತ ಸ್ಥಳಗಳಲ್ಲಿ ಇರಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

    MORE
    GALLERIES

  • 88

    Tamil Nadu Rains: ಭಾರೀ ಮಳೆಯಿಂದ ಚೆನ್ನೈ ಸೇರಿದಂತೆ 3 ಜಿಲ್ಲೆಗಳಲ್ಲಿ ಶಾಲೆಗೆ ರಜೆ ಘೋಷಣೆ​; ಪ್ರಧಾನಿಯಿಂದ ಅಗತ್ಯ ನೆರವಿನ ಭರವಸೆ

    ಕೊಯಮತ್ತೂರು, ತಿರುನೆಲ್ವೇಲಿ, ತಿರುವರೂರ್, ವಿಲ್ಲುಪುರಂ, ಈರೋಡ್, ಕರೂರ್, ಕಡಲೂರು, ಪುದುಕೊಟ್ಟೈ, ಪೆರಂಬಲೂರು ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ.60ಕ್ಕಿಂತ ಹೆಚ್ಚು ಮಳೆಯಾಗಿದ್ದು, ಜಿಲ್ಲೆಗಳಲ್ಲಿ 5,106 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ. ಭಾರೀ ಮಳೆಯಿಂದಾಗಿ ರಸ್ತೆ ಮತ್ತು ರೈಲು ಸಂಚಾರಕ್ಕೆ ತೊಂದರೆಯಾಗಿದೆ. ಕೆಲವು ವಿಮಾನಗಳು ವಿಳಂಬವಾಗಿದ್ದರೂ, ವಿಮಾನ ಸೇವೆಗಳಲ್ಲಿ ಯಾವುದೇ ದೊಡ್ಡ ವ್ಯತ್ಯಯ ಉಂಟಾಗಿಲ್ಲ.

    MORE
    GALLERIES