ಇಬ್ಬರು ಮಹಿಳೆಯರು ಶಬರಿಮಲೆ ಪ್ರವೇಶಿಸಿದ್ದನ್ನು ಖಂಡಿಸಿ ಕೇರಳ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ ಎನ್ನಲಾಗಿದೆ. ಇದಲ್ಲದೆ, ಪೊಲೀಸರು, ಮಾಧ್ಯಮದ ವರದಿಗಾರರು ಹಾಗೂ ಲೇಖಕರ ಮೇಲೆಯೂ ದಾಳಿ ನಡೆದಿರುವುದಾಗಿ ವರದಿಗಳು ತಿಳಿಸಿವೆ. ಪ್ರತಿಭಟನೆ ವೇಳೆ 7 ಪೊಲೀಸ್ ವಾಹನಗಳು ಹಾಗೂ 79 ಕೆಎಸ್ಆರ್'ಟಿಸಿ ಬಸ್ ಗಳನ್ನು ಧ್ವಂಸಗೊಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಪ್ರತಿಭಟನೆಯ ಕೆಲವು ಚಿತ್ರಗಳು ಇಲ್ಲಿವೆ ನೋಡಿ