ಶಬರಿಮಲೆ ಅಯ್ಯಪ್ಪ ಸ್ಯಾಮಿ ದೇಗುಲಕ್ಕೆ ಇಬ್ಬರು ಮಹಿಳೆಯರ ಪ್ರವೇಶದಿಂದಾಗಿ ಇಡೀ ಕೇರಳವೇ ಹೊತ್ತಿ ಉರಿಯುತ್ತದೆ. ಪ್ರತಿಭಟನೆಗಳು ನಡೆಯುತ್ತಿದ್ದು, ಪರಿಸ್ಥಿತಿ ಉದ್ವಿಗ್ನವಾಗಿದೆ. ಈಗಾಗಲೇ ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕದಿಂದ ಕೇರಳಕ್ಕೆ ಸಂಚರಿಸುತ್ತಿದ್ದ ಎಲ್ಲಾ ಬಸ್ಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಈ ಹಿನ್ನೆಲೆಯಲ್ಲಿ ಬಸ್ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಅಯ್ಯಪ್ಪನ ಭಕ್ತರಲ್ಲಿ ಆಕ್ರೋಶ ಹೆಚ್ಚಾಗಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಹೀಗಾಗಿಯೇ ಸ್ಥಳೀಯ ಸಿಪಿಎಂ ಕಚೇರಿಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಇಲ್ಲಿನ ಪ್ರತಿಭಟನೆ ತಾರಕ್ಕೇರಿದ್ದು, ಉಂಟಾದ ಗಲಭೆಯಲ್ಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ. ಕೇರಳ ಬಂದ್ನಿಂದಾಗಿ ಶಬರಿಮಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮತ್ತೊಮ್ಮೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.