Tamil Nadu Rains: ಪ್ರಜ್ಞಾಹೀನ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತೊಯ್ದ ಮಹಿಳಾ ಇನ್ಸ್​ಪೆಕ್ಟರ್

ಭಾರೀ ಮಳೆಗೆ ತಮಿಳುನಾಡು (Tamil Nadu) ತತ್ತರಿಸಿದೆ. ಚೆನ್ನೈ (Chennai) ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳು ಮಳೆಯಿಂದ (Chennai Rains) ಸಾಕಷ್ಟು ಹಾನಿಗೊಳಗಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಚೆನ್ನೈನ ಪ್ರಮುಖ ರಸ್ತೆಗಳು ನದಿಯಂತೆ ಆಗಿದ್ದು, ಅನೇಕ ಜನರು ನಿರಾಶ್ರಿತ ತಾಣ ಸೇರಿದ್ದಾರೆ. ಇನ್ನು ಭಾರೀ ಮಳೆಯಿಂದಾಗಿ ವಿಮಾನ ಸೇವೆಗಳು ಕೂಡ ರದ್ದಾಗಿದೆ. (Photos: ANI)

First published:

  • 18

    Tamil Nadu Rains: ಪ್ರಜ್ಞಾಹೀನ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತೊಯ್ದ ಮಹಿಳಾ ಇನ್ಸ್​ಪೆಕ್ಟರ್

    ಭಾರೀ ಮಳೆಯಿಂದಾಗಿ ಚೆನ್ನೈನ ಟಿಪಿ ಛತ್ರಂ ಪ್ರದೇಶದ ಸ್ಮಶಾನದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಪೊಲೀಸ್ ಇನ್ಸ್‌ಪೆಕ್ಟರ್ ರಾಜೇಶ್ವರಿ ಭುಜದ ಮೇಲೆ ಹೊತ್ತುಕೊಂಡು ಆಟೋದಲ್ಲಿ ಹತ್ತಿರದ ಆಸ್ಪತ್ರೆಗೆ ಧಾವಿಸುತ್ತಿರುವ ವಿಡಿಯೋ ವೈರಲ್​ ಆಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸ್ ಇನ್ಸ್‌ಪೆಕ್ಟರ್ ರಾಜೇಶ್ವರಿ ಅವರ ನಿಸ್ವಾರ್ಥ ಕಾರ್ಯಕ್ಕೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.

    MORE
    GALLERIES

  • 28

    Tamil Nadu Rains: ಪ್ರಜ್ಞಾಹೀನ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತೊಯ್ದ ಮಹಿಳಾ ಇನ್ಸ್​ಪೆಕ್ಟರ್

    ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಗುರುವಾರ ಭಾರೀ ಮಳೆ ಸುರಿದಿದ್ದು, ಚೆನ್ನೈನ ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು, 28 ವರ್ಷದ ವ್ಯಕ್ತಿ ಸ್ಮಶಾನದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ವರದಿಗಳು ತಿಳಿಸಿವೆ. ಎಗ್ಮೋರ್ ಮತ್ತು ಪೆರಂಬೂರ್‌ನಂತಹ ಸ್ಥಳಗಳಲ್ಲಿ ಮರಗಳು ಉರುಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

    MORE
    GALLERIES

  • 38

    Tamil Nadu Rains: ಪ್ರಜ್ಞಾಹೀನ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತೊಯ್ದ ಮಹಿಳಾ ಇನ್ಸ್​ಪೆಕ್ಟರ್

    ತಮಿಳುನಾಡಿನ ಉತ್ತರ ಭಾಗಗಳಲ್ಲಿ ಹಲವಾರು ಜಿಲ್ಲೆಗಳಲ್ಲಿ ನಿನ್ನೆ ರಾತ್ರಿಯಿಂದ ಭಾರೀ ಮಳೆ ಆಗಿದೆ. ಚೆನ್ನೈ ಮತ್ತು ಹತ್ತಿರದ ಚೆಂಗಲ್ಪಟ್ಟು, ತಿರುವಳ್ಳೂರು, ಕಾಂಚೀಪುರಂ ಮತ್ತು ವಿಲ್ಲುಪುರಂದಲ್ಲಿ ನಿರಂತರ ಮಳೆಗೆ ಜನರು ಹೈರಾಣಾಗಿದ್ದಾರೆ.. ರಾಜ್ಯಾದ್ಯಂತ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ

    MORE
    GALLERIES

  • 48

    Tamil Nadu Rains: ಪ್ರಜ್ಞಾಹೀನ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತೊಯ್ದ ಮಹಿಳಾ ಇನ್ಸ್​ಪೆಕ್ಟರ್

    ಭಾರೀ ಮಳೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವವರ ರಕ್ಷಣೆಗೆ ಕೇಂದ್ರದ 11 ಎನ್​ಡಿಆರ್​ಎಫ್​ ತಂಡ ತಮಿಳುನಾಡಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಇನ್ನು 2 ತಂಡ ಪುದುಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.

    MORE
    GALLERIES

  • 58

    Tamil Nadu Rains: ಪ್ರಜ್ಞಾಹೀನ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತೊಯ್ದ ಮಹಿಳಾ ಇನ್ಸ್​ಪೆಕ್ಟರ್

    ಮಳೆ ನಿರಾಶ್ರಿತರಿಗೆ ಗಂಜಿ ಕೇಂದ್ರ ತೆರೆಯಲಾಗಿದ್ದು, ಸಿಎಂ ಸ್ಟಾಲಿನ್​ ಅಲ್ಲಿಗೆ ಭೇಟಿ ನೀಡಿ ಅಲ್ಲಿನ ಆಹಾರ ವ್ಯವಸ್ಥೆ ಸೇರಿದಂತೆ ಇನ್ನಿತರ ಕುರಿತು ಮಾಹಿತಿ ಪಡೆದಿದ್ದಾರೆ.

    MORE
    GALLERIES

  • 68

    Tamil Nadu Rains: ಪ್ರಜ್ಞಾಹೀನ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತೊಯ್ದ ಮಹಿಳಾ ಇನ್ಸ್​ಪೆಕ್ಟರ್

    ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸಲು ಮತ್ತು ಪರಿಹಾರ ಶಿಬಿರಗಳಲ್ಲಿ ಗುಣಮಟ್ಟದ ಆಹಾರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸಿಎಂ ನಿರ್ದೇಶನ ನೀಡಿದ್ದಾರೆ

    MORE
    GALLERIES

  • 78

    Tamil Nadu Rains: ಪ್ರಜ್ಞಾಹೀನ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತೊಯ್ದ ಮಹಿಳಾ ಇನ್ಸ್​ಪೆಕ್ಟರ್

    ದಶಕಗಳಷ್ಟು ಹಳೆಯದಾದ ಕೆರೆಗಳನ್ನು ಅತಿಕ್ರಮಣ ಮಾಡಿದ ಪರಿಣಾಮ ಮಳೆನೀರು ನೈಸರ್ಗಿಕವಾಗಿ ನೀರು ಹರಿದು ಹೋಗಲು ಮಾರ್ಗ ಇಲ್ಲದೇ ಈ ರೀತಿ ಪ್ರವಾಹ ನಿರ್ಮಾಣವಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.

    MORE
    GALLERIES

  • 88

    Tamil Nadu Rains: ಪ್ರಜ್ಞಾಹೀನ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತೊಯ್ದ ಮಹಿಳಾ ಇನ್ಸ್​ಪೆಕ್ಟರ್

    ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲೂ ಮಳೆಯಾಗುತ್ತಿದ್ದು, ಮುಂದಿನ 24 ಗಂಟೆ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ

    MORE
    GALLERIES