The Kerala Story: ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧಿಸಲು ನಿರ್ಧರಿಸಿದ ದೀದಿ ಸರ್ಕಾರ!

ಕೋಲ್ಕತ್ತಾ: ಭಾರೀ ವಿವಾದವನ್ನು ಸೃಷ್ಟಿಸಿರುವ ವಿವಾದಾತ್ಮಕ ಚಿತ್ರ ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ರಾಜ್ಯದಲ್ಲಿ ನಿಷೇಧಿಸಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಚಿತ್ರ ರಾಜ್ಯದಲ್ಲಿ ಅಶಾಂತಿಯನ್ನು ಉಂಟು ಮಾಡಬಹುದು ಎಂದು ಹೇಳಿರುವ ಅವರು ‘ಬಿಜೆಪಿ ಕಾಶ್ಮೀರ್ ಫೈಲ್ಸ್‌ನಂತೆ ಬಂಗಾಳದ ಬಗ್ಗೆಯೂ ಸಿನಿಮಾ ಮಾಡಲು ಹಣ ನೀಡುತ್ತಿದೆ’ ಎಂದು ಆರೋಪಿಸಿದ್ದಾರೆ.

First published:

  • 19

    The Kerala Story: ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧಿಸಲು ನಿರ್ಧರಿಸಿದ ದೀದಿ ಸರ್ಕಾರ!

    ರಾಜ್ಯ ಸಚಿವಾಲಯ ದಿ ಕೇರಳ ಸ್ಟೋರಿ ಸಿನಿಮಾವನ್ನು ನಿಷೇಧ ಮಾಡಲು ನಿರ್ಧರಿಸಿರುವ ಬಗ್ಗೆ ಸಿಎಂ ಮಮತಾ ಬ್ಯಾನರ್ಜಿ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿದ್ದು, ಇನ್ನೂ ಅಧಿಕೃತ ಆದೇಶ ಹೊರಬಂದಿಲ್ಲ.

    MORE
    GALLERIES

  • 29

    The Kerala Story: ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧಿಸಲು ನಿರ್ಧರಿಸಿದ ದೀದಿ ಸರ್ಕಾರ!

    ‘ಒಂದು ವರ್ಗವನ್ನು ಅವಮಾನಿಸಲು ಅವರು ಕಾಶ್ಮೀರ ಫೈಲ್‌ಗಳನ್ನು ಮಾಡಿದರು. ಕೇರಳದ ಫೈಲ್‌ಗಳು ಯಾವುವು? ಅವರು ಕಾಶ್ಮೀರಿ ಜನರನ್ನು ಖಂಡಿಸಲು ಕಾಶ್ಮೀರ ಫೈಲ್‌ಗಳನ್ನು ಸಿದ್ಧಪಡಿಸಿದ ನಂತರ ಈಗ ಕೇರಳ ರಾಜ್ಯವನ್ನು ದೂಷಿಸುತ್ತಿದ್ದಾರೆ. ಅವರು ಪ್ರತಿನಿತ್ಯ ತಮ್ಮ ನಿರೂಪಣೆಯ ಮೂಲಕ ಅವಮಾನ ಮಾಡುತ್ತಿದ್ದಾರೆ ಬ್ಯಾನರ್ಜಿ ಹೇಳಿದರು.

    MORE
    GALLERIES

  • 39

    The Kerala Story: ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧಿಸಲು ನಿರ್ಧರಿಸಿದ ದೀದಿ ಸರ್ಕಾರ!

    ‘ಬಂಗಾಳಕ್ಕೂ ಅವಮಾನ ಮಾಡುತ್ತಿದ್ದಾರೆ. 'ಬಂಗಾಳ ಉಳಿಸಿ' ಎಂಬ ಭಿತ್ತಿಪತ್ರಗಳನ್ನು ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಬಂಗಾಳದಲ್ಲಿ ಏನಾಯಿತು? ಇದು ಶಾಂತಿಯುತ, ಶಾಂತಿಪ್ರಿಯ ರಾಜ್ಯವಾಗಿದೆ. ಬಿಜೆಪಿ ಏಕೆ ಕೋಮುವಾದಿ ರಾಜಕಾರಣ ಮಾಡುತ್ತಿದೆ? ಎಂದು ದೀದಿ ಪ್ರಶ್ನಿಸಿದ್ದಾರೆ.

    MORE
    GALLERIES

  • 49

    The Kerala Story: ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧಿಸಲು ನಿರ್ಧರಿಸಿದ ದೀದಿ ಸರ್ಕಾರ!

    ಇತ್ತ ನಿನ್ನೆ ದೆಹಲಿಯಲ್ಲಿ ದಿ ಕೇರಳ ಸ್ಟೋರಿ ಚಲನಚಿತ್ರವನ್ನು ವೀಕ್ಷಿಸಿದ ನಂತರ, ಕೇಂದ್ರ ಸಚಿವ ಅನುರಾಗ್ ಠಾಕೂರ್, ಪಶ್ಚಿಮ ಬಂಗಾಳವು ಚಲನಚಿತ್ರವನ್ನು ನಿಷೇಧಿಸುವ ಮೂಲಕ ‘ತಪ್ಪು ಮಾಡುತ್ತಿದೆ’ ಎಂದು ಹೇಳಿದ್ದಾರೆ. ‘ಸತ್ಯವನ್ನು ಮಾತನಾಡಲು ಅವರು ಯಾರಿಗೂ ಅವಕಾಶ ನೀಡುವುದಿಲ್ಲವೇ? ಭಯೋತ್ಪಾದಕ ಸಂಘಟನೆಗಳಿಂದ ನೀವು (ಮಮತಾ ಬ್ಯಾನರ್ಜಿ) ಏನು ಪಡೆಯುತ್ತೀರಿ?’ ಎಂದು ಪ್ರಶ್ನಿದ್ದಾರೆ.

    MORE
    GALLERIES

  • 59

    The Kerala Story: ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧಿಸಲು ನಿರ್ಧರಿಸಿದ ದೀದಿ ಸರ್ಕಾರ!

    ಈ ಸಿನಿಮಾವನ್ನು ಸುದೀಪ್ತೋ ಸೇನ್ ರಚಿಸಿ ನಿರ್ದೇಶಿಸಿದ್ದಾರೆ. ಅದಾ ಶರ್ಮಾ ಸಿನಿಮಾದಲ್ಲಿ ನಟಿಸಿದ್ದಾರೆ. ಕೇರಳದಲ್ಲಿ ಸಾವಿರಾರು ಹಿಂದೂ ಯುವತಿಯರನ್ನು ಪ್ರೀತಿಸುವ ನಾಟಕವಾಡಿ ಇಸ್ಲಾಂಗೆ ಮತಾಂತರಗೊಳಿಸುತ್ತಾರೆ. ನಂತರ ಅವರನ್ನು ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್ ಅಥವಾ ಐಸಿಸ್‌ಗೆ ಸೇರ್ಪಡೆಗೊಳಿಸುತ್ತಾರೆ ಎಂದು ಬಗ್ಗೆ ಸಿನಿಮಾದಲ್ಲಿ ತೋರಿಸಲಾಗಿದೆ.

    MORE
    GALLERIES

  • 69

    The Kerala Story: ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧಿಸಲು ನಿರ್ಧರಿಸಿದ ದೀದಿ ಸರ್ಕಾರ!

    ಕೇರಳದಲ್ಲಿ 32,000 ಮಹಿಳೆಯರನ್ನು ಪ್ರೀತಿಸುವ ನಾಟಕವಾಡಿ ಇಸ್ಲಾಂಗೆ ಮತಾಂತರಗೊಳಿಸಿ ಅವರನ್ನು ಐಸಿಸ್‌ಗೆ ಸೇರ್ಪಡೆಗೊಳಿಸಲಾಗಿದೆ ಎಂದು ಸಿನಿಮಾದ ಟ್ರೇಲರ್‌ನಲ್ಲಿ ಹೇಳಿದಾಗಿನಿಂದ ಈ ಸಿನಿಮಾ ವಿವಾದಕ್ಕೆ ಸಿಲುಕಿತ್ತು. ವಿವಾದ ಭುಗಿಲೇಳುತ್ತಿದ್ದಂತೆ 32000 ಬದಲಿಗೆ ಕೇರಳದ ವಿವಿಧ ಭಾಗಗಳಲ್ಲಿ ನಡೆದ ಮೂರು ಯುವತಿಯರ ನೈಜ ಕಥೆ ಎಂದು ಸಿನಿಮಾ ತಂಡ ತನ್ನ ಹೇಳಿಕೆಯನ್ನು ಬದಲಾಯಿಸಿತ್ತು.

    MORE
    GALLERIES

  • 79

    The Kerala Story: ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧಿಸಲು ನಿರ್ಧರಿಸಿದ ದೀದಿ ಸರ್ಕಾರ!

    ಕೇರಳದ ಆಡಳಿತ ಪಕ್ಷ ಸಿಪಿಎಂ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಾಯಕರು, ‘ಚಲನಚಿತ್ರ ನಿರ್ಮಾಪಕರು ಉದ್ದೇಶಪೂರ್ವಕವಾಗಿ ವೈಭವೀಕರಣ ಮತ್ತು ಹಿಡನ್ ಅಜೆಂಡಾದಿಂದ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ‘ಕೇರಳದಲ್ಲಿ ರಾಜಕೀಯ ಲಾಭ ಪಡೆಯುವ ಬಲಪಂಥೀಯ ಪ್ರಯತ್ನಗಳ ಹಿನ್ನೆಲೆಯಲ್ಲಿ ಇಂತಹ ‘ಪ್ರಚಾರ ಚಿತ್ರಗಳನ್ನು’ ನೋಡಬೇಕು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

    MORE
    GALLERIES

  • 89

    The Kerala Story: ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧಿಸಲು ನಿರ್ಧರಿಸಿದ ದೀದಿ ಸರ್ಕಾರ!

    ಈ ಚಿತ್ರವು ಭಯೋತ್ಪಾದನೆಯ ಕೊಳಕು ಸತ್ಯವನ್ನು ತೋರಿಸುತ್ತದೆ ಮತ್ತು ಭಯೋತ್ಪಾದಕರ ಕಾರ್ಯವೈಖರಿಯನ್ನು ಬಹಿರಂಗಪಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುವ ಮೂಲಕ ಚಲನಚಿತ್ರವನ್ನು ಬೆಂಬಲಿಸಿದ್ದಾರೆ. ಅಲ್ಲದೇ ಚಿತ್ರವನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ಭಯೋತ್ಪಾದಕ ಪ್ರವೃತ್ತಿಯೊಂದಿಗೆ ನಿಂತಿದೆ ಎಂದು ಆರೋಪಿಸಿದ್ದಾರೆ.

    MORE
    GALLERIES

  • 99

    The Kerala Story: ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧಿಸಲು ನಿರ್ಧರಿಸಿದ ದೀದಿ ಸರ್ಕಾರ!

    ಇತ್ತ ಮಧ್ಯಪ್ರದೇಶವು ಈ ಚಲನಚಿತ್ರವನ್ನು ತೆರಿಗೆ ಮುಕ್ತಗೊಳಿಸಿದೆ. ಈ ಚಿತ್ರ ಲವ್ ಜಿಹಾದ್, ಧಾರ್ಮಿಕ ಮತಾಂತರ ಮತ್ತು ಭಯೋತ್ಪಾದನೆಯ ಪಿತೂರಿಯನ್ನು ಬಹಿರಂಗಪಡಿಸುತ್ತದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲೂ ಚಿತ್ರವನ್ನು ತೆರಿಗೆ ಮುಕ್ತಗೊಳಿಸಬೇಕು ಎಂದು ದೆಹಲಿ ಬಿಜೆಪಿ ಒತ್ತಾಯಿಸಿದೆ.

    MORE
    GALLERIES