28 ವರ್ಷದ ಮೊಹಮ್ಮದ್ ಸಿರಾಜ್ ನಾಗ್ಪುರ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಉಸ್ಮಾನ್ ಖವಾಜಾ ಅವರನ್ನು ಔಟ್ ಮಾಡಿದರು. ಅವರು ಎರಡನೇ ಇನ್ನಿಂಗ್ಸ್ನಲ್ಲಿ ಒಂದು ಓವರ್ ಬೌಲ್ ಮಾಡಿದರು. ದೆಹಲಿಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಸಿರಾಜ್ ಮೊದಲ ಇನಿಂಗ್ಸ್ ನಲ್ಲಿ 10 ಓವರ್ ಬೌಲಿಂಗ್ ಮಾಡಿದ್ದರು. ಎರಡನೇ ಇನಿಂಗ್ಸ್ನಲ್ಲಿ ಅವರಿಗೆ ಅವಕಾಶ ಸಿಗಲಿಲ್ಲ. ಈ ಟೆಸ್ಟ್ನಲ್ಲಿ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ.
ಮೊಹಮ್ಮದ್ ಸಿರಾಜ್ 2 ಟೆಸ್ಟ್ಗಳಲ್ಲಿ ಒಂದು ವಿಕೆಟ್ ಪಡೆದಿರಬಹುದು. ಆದರೆ ಅವರು ಹೊಸ ಚೆಂಡಿನೊಂದಿಗೆ ಅತ್ಯುತ್ತಮ ಲಯದಲ್ಲಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಅವರನ್ನು ತಂಡದಿಂದ ಕೈಬಿಡುವ ಸಾಧ್ಯತೆ ಕಮ್ಮಿ ಎನ್ನಬಹುದು. ಇದುವರೆಗೆ 17 ಟೆಸ್ಟ್ ಪಂದ್ಯಗಳಲ್ಲಿ 47 ವಿಕೆಟ್ ಪಡೆದಿದ್ದಾರೆ. 73 ರನ್ಗಳಿಗೆ 5 ವಿಕೆಟ್ ಪಡೆದದ್ದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ 200ಕ್ಕೂ ಹೆಚ್ಚು ವಿಕೆಟ್ ಪಡೆದಿದ್ದಾರೆ.
ಎಡಗೈ ವೇಗದ ಬೌಲರ್ ಜಯದೇವ್ ಉನದ್ಕತ್ ಕೂಡ ಟೆಸ್ಟ್ ತಂಡದಲ್ಲಿದ್ದಾರೆ. ಹಿಂದೆ, ಅವರು ತಮ್ಮ ನಾಯಕತ್ವದಲ್ಲಿ ಸೌರಾಷ್ಟ್ರಕ್ಕೆ ರಣಜಿ ಟ್ರೋಫಿ ಪ್ರಶಸ್ತಿಯನ್ನು ಗೆದ್ದರು. ಫೈನಲ್ನಲ್ಲಿ ಅವರು ಬಂಗಾಳ ವಿರುದ್ಧ 9 ವಿಕೆಟ್ಗಳನ್ನು ಪಡೆದರು. ಇದಾದ ನಂತರವೂ ಅವರಿಗೆ ಮೂರನೇ ಟೆಸ್ಟ್ನಲ್ಲಿ ಅವಕಾಶ ಸಿಗುವುದು ಕಷ್ಟವಾಗಿದೆ. ಮೊದಲ 2 ಟೆಸ್ಟ್ಗಳಲ್ಲಿಯೂ ಅವರು ಪ್ಲೇಯಿಂಗ್-11 ರ ಭಾಗವಾಗಿರಲಿಲ್ಲ.