Karnataka Elections 2023: ಹಳೆ ಮೈಸೂರು ಭಾಗದಲ್ಲಿ ಹಿಂದೂ ಮತ ಸೆಳೆಯಲು ಅಶ್ವತ್ಥ್ ನಾರಾಯಣ್ ತಂತ್ರಗಾರಿಕೆ
ಈ ಬಾರಿ ಹಳೆ ಮೈಸೂರು ಭಾಗದಲ್ಲಿ ಹಿಂದುತ್ವದ ಆಧಾರದ ಮೇಲೆ ಮತ ಕೇಳುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿಕೊಂಡು ಬರುತ್ತಿದ್ದಾರೆ. ಈ ನಿಟ್ಟಿನಲ್ಲಿಯೇ ಬಿಜೆಪಿ ಚುನಾವಣೆ ಪ್ರಚಾರ ನಡೆಸುತ್ತಿದೆ.
ಇದೀಗ ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ಭೂಮಿ ಪೂಜೆಗೆ ಬಿಜೆಪಿ ಸರ್ಕಾರ ಮುಂದಾಗಿದೆ. ರಾಮಮಂದಿರ ಭೂಮಿ ಪೂಜೆಗೆ 40 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ.
2/ 7
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯಿಂದ ಭೂಮಿ ಪೂಜೆಗೆ ಹಣ ಬಿಡುಗಡೆ ಮಾಡಿದ್ದಾರೆ. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್ ಯೋಜನೆ ವರದಿ ಪರಿಶೀಲನೆಗೆ ಮುಂದಾಗಿದ್ದಾರೆ.
3/ 7
ಇಂದು ವಿಕಾಸಸೌಧದಲ್ಲಿ ಮಧ್ಯಾಹ್ನ 12.30ಕ್ಕೆ ಪ್ಲಾನಿಂಗ್ ಕಮಿಟಿ ಜೊತೆ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್ ಸಭೆ ನಡೆಸಲಿದ್ದಾರೆ.
4/ 7
ರಾಮಮಂದಿರ ನಿರ್ಮಾಣಕ್ಕೆ ಸಿದ್ಧಪಡಿಸಿರುವ ಯೋಜನೆ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಯಲಿದೆ. ಯೋಜನೆ ಪರಿಶೀಲನೆ ನಂತರ ಅಂತಿಮವಾಗಿ ಶಂಕುಸ್ಥಾಪನೆ ಬಗ್ಗೆ ತೀರ್ಮಾನ ಮಾಡಲಾಗುತ್ತದೆ.
5/ 7
ಇದೇ ವಾರದಲ್ಲಿ ರಾಜ್ಯ ಸರ್ಕಾರ ಶಂಕು ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಪ್ಲಾನ್ ಮಾಡಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
6/ 7
ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಈ ಮೂಲಕ ಹಳೆ ಮೈಸೂರು ಭಾಗದಲ್ಲಿ ಚುನಾವಣೆಗೆ ಹಿಂದೂ ಮತಗಳನ್ನು ಸೆಳೆಯುವ ತಂತ್ರಗಾರಿಕೆ ಇದಾಗಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.
7/ 7
ಬಜೆಟ್ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ 50 ಕೋಟಿ ಘೋಷಣೆ ಮಾಡಿದ್ದರು.
First published:
17
Karnataka Elections 2023: ಹಳೆ ಮೈಸೂರು ಭಾಗದಲ್ಲಿ ಹಿಂದೂ ಮತ ಸೆಳೆಯಲು ಅಶ್ವತ್ಥ್ ನಾರಾಯಣ್ ತಂತ್ರಗಾರಿಕೆ
ಇದೀಗ ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ಭೂಮಿ ಪೂಜೆಗೆ ಬಿಜೆಪಿ ಸರ್ಕಾರ ಮುಂದಾಗಿದೆ. ರಾಮಮಂದಿರ ಭೂಮಿ ಪೂಜೆಗೆ 40 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ.
Karnataka Elections 2023: ಹಳೆ ಮೈಸೂರು ಭಾಗದಲ್ಲಿ ಹಿಂದೂ ಮತ ಸೆಳೆಯಲು ಅಶ್ವತ್ಥ್ ನಾರಾಯಣ್ ತಂತ್ರಗಾರಿಕೆ
ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಈ ಮೂಲಕ ಹಳೆ ಮೈಸೂರು ಭಾಗದಲ್ಲಿ ಚುನಾವಣೆಗೆ ಹಿಂದೂ ಮತಗಳನ್ನು ಸೆಳೆಯುವ ತಂತ್ರಗಾರಿಕೆ ಇದಾಗಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.