Karnataka Politics: ಬಾಬುರಾವ್ ಚಿಂಚನಸೂರ್ ಪಕ್ಷ ಸೇರ್ಪಡೆ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ಬಿರುಗಾಳಿ!

ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಇಂದು ಕಾಂಗ್ರೆಸ್​ ಪಕ್ಷ ಸೇರ್ಪಡೆಯಾಗಿದ್ದಾರೆ. ಸದಾಶಿವನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಅವರು ಕೈ ಪಾಳಯಕ್ಕೆ ಸೇರಿಕೊಂಡಿದ್ದಾರೆ. ಆದರೀಗ ಚುನಾವಣಾ ಹೊಸ್ತಿಲಲ್ಲಿ ನಡೆದ ಈ ಬೆಳವಣಿಗೆಯಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಚಿಂತೆ ಶುರುವಾಗಿದೆ.

First published:

  • 18

    Karnataka Politics: ಬಾಬುರಾವ್ ಚಿಂಚನಸೂರ್ ಪಕ್ಷ ಸೇರ್ಪಡೆ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ಬಿರುಗಾಳಿ!

    ಹೌದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸೋಮವಾರ ರಾತ್ರಿ ರಾಜೀನಾಮೆ ನೀಡುವ ಮೂಲಕ ಬಾಬುರಾವ್ ಚಿಂಚನಸೂರ್ ಬಿಜೆಪಿಗೆ ಗುಡ್​ಬೈ ಹೇಳಿದ್ದರು. ಬಳಿಕ ಅವರು ಕಾಂಗ್ರೆಸ್​ಗೆ ಮರಳುವ ಮಾತುಗಳು ಕೇಳಿ ಬಂದಿದ್ದು, ಅದರಂತೆ ಇಂದು ಅವರು ಪಕ್ಷ ಬದಲಾಯಿಸಿದ್ದಾರೆ.

    MORE
    GALLERIES

  • 28

    Karnataka Politics: ಬಾಬುರಾವ್ ಚಿಂಚನಸೂರ್ ಪಕ್ಷ ಸೇರ್ಪಡೆ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ಬಿರುಗಾಳಿ!

    ಬಾಬುರಾವ್ ಚಿಂಚನಸೂರ್ ಗುರುಮಠಕಲ್ ಕ್ಷೇತ್ರದ ವಿಧಾನಸಭೆ ಟಿಕೆಟ್ ಕೇಳಿದ್ದರು. ಆದರೆ, ವಿಧಾನಪರಿಷತ್ ಸದಸ್ಯರಾಗಿರುವ ಕಾರಣ ಟಿಕೆಟ್ ನೀಡಲಾಗದು ಎಂದು ಬಿಜೆಪಿ ನಾಯಕರು ತಿಳಿಸಿದ್ದರು. ಹೀಗಾಗಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ.

    MORE
    GALLERIES

  • 38

    Karnataka Politics: ಬಾಬುರಾವ್ ಚಿಂಚನಸೂರ್ ಪಕ್ಷ ಸೇರ್ಪಡೆ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ಬಿರುಗಾಳಿ!

    ಇನ್ನು ಚುನಾವಣಾ ಹೊಸ್ತಿಲಲ್ಲಿ ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್​ಗೆ ಸೇರ್ಪಡೆಯಾಗಿರುವುದು ಗುರುಮಠಕಲ್ ಕ್ಷೇತ್ರದ ಟಿಕೆಟ್​ ಆಕಾಂಕ್ಷಿಗಳನ್ನು ಆತಂಕಕ್ಕೀಡು ಮಾಡಿದೆ.

    MORE
    GALLERIES

  • 48

    Karnataka Politics: ಬಾಬುರಾವ್ ಚಿಂಚನಸೂರ್ ಪಕ್ಷ ಸೇರ್ಪಡೆ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ಬಿರುಗಾಳಿ!

    ಹೌದು ಈಗಾಗಲೇ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ ಪಡೆಯಲು 8 ನಾಯಕರು ಅರ್ಜಿ ಸಲ್ಲಿಸಿದ್ದರು. ಟಿಕೆಟ್​ ಪಡೆದು ಈ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಬೇಕೆಂಬ ಕನಸು ಇವರದ್ದಾಗಿತ್ತು. ಆದರೀಗ ಈ ಎಲ್ಲಾ ಕನಸುಗಳು ಭಗ್ನವಾಗುವ ಸುಳಿವು ಸಿಗಲಾರಂಭಿಸಿದೆ.

    MORE
    GALLERIES

  • 58

    Karnataka Politics: ಬಾಬುರಾವ್ ಚಿಂಚನಸೂರ್ ಪಕ್ಷ ಸೇರ್ಪಡೆ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ಬಿರುಗಾಳಿ!

    ಹೌದು ಬಾಬುರಾವ್ ಚಿಂಚನಸೂರ್ ಗುರುಮಠಕಲ್ ಟಿಕೆಟ್ ಫೈನಲ್ ಬಗ್ಗೆ ಮಾತನಾಡಿಕೊಂಡು ಕಾಂಗ್ರೆಸ್ ಸೇರಿದ್ದಾರೆನ್ನಲಾಗಿದೆ. ಚಿಂಚನಸೂರ್ ಈ ನಡೆಯಿಂದ ಆಕಾಂಕ್ಷಿಗಳ ಎಲ್ಲಾ ಲೆಕ್ಕಾಚಾರ ಉಲ್ಟಾ ಆಗಿದೆ.

    MORE
    GALLERIES

  • 68

    Karnataka Politics: ಬಾಬುರಾವ್ ಚಿಂಚನಸೂರ್ ಪಕ್ಷ ಸೇರ್ಪಡೆ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ಬಿರುಗಾಳಿ!

    ಕಾಂಗ್ರೆಸ್​ನಿಂದ ಗುರುಮಠಕಲ್ 4ಕ್ಷೇತ್ರದಿಂದ ಸ್ಪರ್ಧಿಸಲು ಸ್ಥಳೀಯರಿಗೆ ಟಿಕೆಟ್ ಆದ್ಯತೆ ಸಿಗುತ್ತದೆ ಎಂಬ ವಿಶ್ವಾಸದಲ್ಲಿ ಆಕಾಂಕ್ಷಿಗಳಿದ್ದರು. ಆದರೀಗ ಕೈ ಪಾಳಯ ಇವೆಲ್ಲಕ್ಕೂ ತದ್ವಿತರುದ್ಧವಾಗಿ ಸ್ಥಳೀಯರಲ್ಲದ ಬಾಬುರಾವ್ ಚಿಂಚನಸೂರ್​ಗೆ ಗಾಳ ಹಾಕಿದೆ.

    MORE
    GALLERIES

  • 78

    Karnataka Politics: ಬಾಬುರಾವ್ ಚಿಂಚನಸೂರ್ ಪಕ್ಷ ಸೇರ್ಪಡೆ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ಬಿರುಗಾಳಿ!

    ಚಿಂಚನಸೂರ್​ ಕಾಂಗ್ರೆಸ್ ಸೇರ್ಪಡೆಯಿಂದ ಕಾಂಗ್ರೆಸ್ ನಲ್ಲಿರುವ ಚಿಂಚನಸೂರ ವಿರೋಧಿ ಬಣದಲ್ಲಿ ಭುಗಿಲೇಳುವ ಅಸಮಾಧಾನ ಸಾಧ್ಯತೆ  ಇದೆ. 

    MORE
    GALLERIES

  • 88

    Karnataka Politics: ಬಾಬುರಾವ್ ಚಿಂಚನಸೂರ್ ಪಕ್ಷ ಸೇರ್ಪಡೆ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ಬಿರುಗಾಳಿ!

    ಅತ್ತ ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿದ ಬಾಬುರಾವ್ ಚಿಂಚನಸೂರ್​, ನಾನು ಅವಕಾಶವಾದಿ ರಾಜಕಾರಣಿ ಅಲ್ಲ.​ 2023ರಲ್ಲಿ ಚಿಂಚನಸೂರ್ ಸಾಮರ್ಥ್ಯ ಏನು ಅಂತಾ ಗೊತ್ತಾಗುತ್ತದೆ. ಇಂದಿಗೆ ಬಿಜೆಪಿ ಮುಗಿದ ಅಧ್ಯಾಯ. ನಾನು ಡಿ.ಕೆ.ಶಿವಕುಮಾರ್ ಬಗ್ಗೆ ಎಲ್ಲೂ ಚಕಾರ ಎತ್ತಿಲ್ಲ. ನಾನು ಡಿ.ಕೆ.ಶಿವಕುಮಾರ್ ಋಣ ತೀರಿಸಬೇಕಿದೆ. ಹೀಗಾಗಿ ಟಿಕೆಟ್ ನೀಡುವುದು ಕಾಂಗ್ರೆಸ್ ಹೈಕಮಾಂಡ್​​ಗೆ ಬಿಟ್ಟ ವಿಚಾರ ಎಂದರು.

    MORE
    GALLERIES