Bengaluru: ಕೆಆರ್​ ಸರ್ಕಲ್​ನಲ್ಲಿ ಮಳೆ ನೀರಿನಲ್ಲಿ ಮುಳುಗಿದ ಕಾರು; ನಾಲ್ವರ ರಕ್ಷಣೆ, ಯುವತಿ ಸಾವು

ಮೃತ ಯುವತಿಯನ್ನು 22 ವರ್ಷದ ಭಾನುರೇಖಾ ಎಂದು ಗುರುತಿಸಲಾಗಿದೆ. ಯುವತಿಯನ್ನು ರಕ್ಷಣೆ ಮಾಡಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಬೆಂಗಳೂರಿನ ಸೈಂಟ್ ಮಾರ್ಥಾಸ್ ಆಸ್ಪತ್ರೆಯಲ್ಲಿ ಯುವತಿಯನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದ್ದರು ಎಂಬ ಆರೋಪ ಕೇಳಿ ಬಂದಿದೆ.

  • News18 Kannada
  • |
  •   | Bangalore [Bangalore], India
First published:

  • 17

    Bengaluru: ಕೆಆರ್​ ಸರ್ಕಲ್​ನಲ್ಲಿ ಮಳೆ ನೀರಿನಲ್ಲಿ ಮುಳುಗಿದ ಕಾರು; ನಾಲ್ವರ ರಕ್ಷಣೆ, ಯುವತಿ ಸಾವು

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಕೆಆರ್ ಸರ್ಕಲ್​ನಲ್ಲಿ ಕಾರು ಮುಳುಗಡೆಯಾಗಿದ್ದು, ಈ ವೇಳೆ ಕಾರಿನಲ್ಲಿ ಸಿಲುಕಿದ್ದ ಇಡೀ ಕುಟುಂಬವನ್ನು ರಕ್ಷಣೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಯಲ್ಲಿ ಯುವತಿಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

    MORE
    GALLERIES

  • 27

    Bengaluru: ಕೆಆರ್​ ಸರ್ಕಲ್​ನಲ್ಲಿ ಮಳೆ ನೀರಿನಲ್ಲಿ ಮುಳುಗಿದ ಕಾರು; ನಾಲ್ವರ ರಕ್ಷಣೆ, ಯುವತಿ ಸಾವು

    ಮಳೆ ಆರಂಭವಾಗುತ್ತಿದ್ದಂತೆ ಕೆಆರ್​ ಸರ್ಕಲ್​​ ಬಳಿಯ ಅಂಡರ್ ಪಾಸ್​ನಲ್ಲಿ ಮಳೆ ನೀರಿ ಸಂಗ್ರಹವಾಗಿತ್ತು. ಈ ವೇಳೆ ಕಬ್ಬನ್​ ಪಾರ್ಕ್​​ ಕಡೆಯಿಂದ ಬರುತ್ತಿದ್ದ ಕಾರು ಮಳೆ ನೀರಿನಲ್ಲಿ ಸಿಕ್ಕಿ ಹಾಕಿಕೊಂಡಿದೆ.

    MORE
    GALLERIES

  • 37

    Bengaluru: ಕೆಆರ್​ ಸರ್ಕಲ್​ನಲ್ಲಿ ಮಳೆ ನೀರಿನಲ್ಲಿ ಮುಳುಗಿದ ಕಾರು; ನಾಲ್ವರ ರಕ್ಷಣೆ, ಯುವತಿ ಸಾವು

    ಆಂಧ್ರ ಪ್ರದೇಶ ಆರು ಮಂದಿಯ ಕುಟುಂಬ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಏಕಾಏಕಿ ಮಳೆ ನೀರಿನಲ್ಲಿ ಕೂಗಿಕೊಂಡಿದ್ದ ಕಾರಣ ನ್ಯೂಸ್18 ಪ್ರತಿನಿಧಿ ಸ್ಥಳದಲ್ಲಿ ಅವರನ್ನು ಗಮನಿಸಿದ್ದರು. ಕೂಡಲೇ ಸ್ಥಳದಲ್ಲಿ ಸಾರ್ವಜನಿಕರ ನೆರವು ಪಡೆದುಕೊಂಡು ಅವರನ್ನು ರಕ್ಷಣೆ ಮಾಡುವ ಕಾರ್ಯ ಮಾಡಿದ್ದರು.

    MORE
    GALLERIES

  • 47

    Bengaluru: ಕೆಆರ್​ ಸರ್ಕಲ್​ನಲ್ಲಿ ಮಳೆ ನೀರಿನಲ್ಲಿ ಮುಳುಗಿದ ಕಾರು; ನಾಲ್ವರ ರಕ್ಷಣೆ, ಯುವತಿ ಸಾವು

    ಇದೇ ಸಂದರ್ಭದಲ್ಲಿ ರ್ಯಾಪಿಡ್​​ ಆ್ಯಕ್ಷನ್​ ಟೀಂ ಪೊಲೀಸರು ತಮ್ಮ ಕರ್ತವ್ಯಕ್ಕೆ ತೆರಳಲು ಕಾರಿನಲ್ಲಿ ಹೋಗುತ್ತಿದ್ದರು. ಕೂಡಲೇ ಮಾಧ್ಯಮ ಪ್ರತಿನಿಧಿಯ ಮನವಿಗೆ ಸ್ಪಂಧಿಸಿದ ಆ್ಯಕ್ಷನ್ ಟೀಂ ಸದಸ್ಯರು ನೀರನಲ್ಲಿ ಮುಳುಗಿದ್ದ ಸಾರ್ವಜನಿಕರ ರಕ್ಷಣೆ ಮುಂದಾಗಿದ್ದರು.

    MORE
    GALLERIES

  • 57

    Bengaluru: ಕೆಆರ್​ ಸರ್ಕಲ್​ನಲ್ಲಿ ಮಳೆ ನೀರಿನಲ್ಲಿ ಮುಳುಗಿದ ಕಾರು; ನಾಲ್ವರ ರಕ್ಷಣೆ, ಯುವತಿ ಸಾವು

    ಕಾರಿನ ಮುಂಭಾಗ ಗ್ಲಾಸ್​ ಒಡೆದು ಕಾರಿನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಹೊರಕ್ಕೆ ತರುವ ಕೆಲಸ ಮಾಡಿದ್ದರು. ಒಟ್ಟು ನಾಲ್ವರು ಮಹಿಳೆಯನ್ನು ರಕ್ಷಣೆ ಮಾಡಲಾಗಿದ್ದು, ಓರ್ವ ಯುವತಿ ಸಾವನ್ನಪ್ಪಿದ್ದಾರೆ.

    MORE
    GALLERIES

  • 67

    Bengaluru: ಕೆಆರ್​ ಸರ್ಕಲ್​ನಲ್ಲಿ ಮಳೆ ನೀರಿನಲ್ಲಿ ಮುಳುಗಿದ ಕಾರು; ನಾಲ್ವರ ರಕ್ಷಣೆ, ಯುವತಿ ಸಾವು

    ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂತ್ರಸ್ತ ಮಹಿಳೆಯೊಬ್ಬರು, ನಾವು ಆಂಧ್ರ ಪ್ರದೇಶ ವಿಜಯವಾಡ ಮೂಲದವರು. ಒಂದು ದಿನ ರಜೆ ಇದ್ದ ಬೆಂಗಳೂರಿನಲ್ಲಿ ಸ್ಥಳಗಳನ್ನು ನೋಡಲು ಕಾರಿನಲ್ಲಿ ಹೊರಗೆ ಬಂದಿದ್ದರು. ಮಳೆ ಆರಂಭವಾದ ಕಾರಣ ಕಬ್ಬನ್​ ಪಾರ್ಕ್​ನಿಂದ ಮನೆಗೆ ತೆರಳು ವಾಪಸ್ ಆಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಸದ್ಯ ನೀರನಲ್ಲಿ ಇನ್ನು ಒಬ್ಬರು ಸಿಲುಕಿದ್ದಾರೆ ಅಂತ ಕುಟುಂಬಸ್ಥರು ಹೇಳುತ್ತಿದ್ದು, ನಾವು ಕಾರಿನಲ್ಲಿ ಆರು ಮಂದಿ ತೆರಳುತ್ತಿದ್ದೇವು ಎಂದು ಕಣ್ಣೀರಿಟ್ಟಿದ್ದಾರೆ.

    MORE
    GALLERIES

  • 77

    Bengaluru: ಕೆಆರ್​ ಸರ್ಕಲ್​ನಲ್ಲಿ ಮಳೆ ನೀರಿನಲ್ಲಿ ಮುಳುಗಿದ ಕಾರು; ನಾಲ್ವರ ರಕ್ಷಣೆ, ಯುವತಿ ಸಾವು

    ಮೃತ ಯುವತಿಯನ್ನು 22 ವರ್ಷದ ಭಾನುರೇಖಾ ಎಂದು ಗುರುತಿಸಲಾಗಿದೆ. ಯುವತಿಯನ್ನು ರಕ್ಷಣೆ ಮಾಡಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಬೆಂಗಳೂರಿನ ಸೈಂಟ್ ಮಾರ್ಥಾಸ್ ಆಸ್ಪತ್ರೆಯಲ್ಲಿ ಯುವತಿಯನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದ್ದರು ಎಂಬ ಆರೋಪ ಕೇಳಿ ಬಂದಿದೆ. ಆದರೆ ಆಸ್ಪತ್ರೆ ಸಿಬ್ಬಂದಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಆಟೋದಲ್ಲೇ ಕಾಯುವಂತೆ ಮಾಡಿದ್ದು, ಆ ಬಳಿಕ ಸ್ಥಳಕ್ಕೆ ಮಾಧ್ಯಮಗಳು ಹೋಗುತ್ತಿದ್ದಂತೆ ಯುವತಿಯನ್ನು ಚಿಕಿತ್ಸೆ ಕರೆದುಕೊಂಡು ಹೋಗಿದ್ದು, ಆ ವೇಳೆಗೆ ಯುವತಿ ಸಾವನ್ನಪ್ಪಿದ್ದರು ಎಂದು ಘೋಷಣೆ ಮಾಡಿದ್ದಾರೆ.

    MORE
    GALLERIES