ಸಮಾಧಿ ಸ್ಥಳಕ್ಕೆ ತಮಿಳು ನಟ ಶಿವಕಾರ್ತಿಕೇಯನ್ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ನಟ ಶಿವಕಾರ್ತಿಕೇಯನ್, ಪುನೀತ್ ಅದ್ಬುತ ನಟ. ಅವರ ನಿಧನ ನೋವು ತಂದಿದೆ. ಒಂದು ತಿಂಗಳ ಹಿಂದೆ ಪುನೀತ್ ರನ್ನು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದೆ. ಮನೆಗೆ ಬಂದು ಭೇಟಿಯಾಗುವಂತೆ ಆಹ್ವಾನಿಸಿದ್ರು. ಆದ್ರೆ ಅವರನ್ನು ಭೇಟಿ ಮಾಡಲು ಸಾಧ್ಯವೇ ಆಗಲಿಲ್ಲ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.