ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಕಾಲಾವಧಿಯಲ್ಲಿ ಆರಂಭಿಸಿದ ಜನಪ್ರಿಯ ಯೋಜನೆ ಇಂದಿರಾ ಕ್ಯಾಂಟೀನ್. ಮೊದಲಿಗೆ ಬೆಂಗಳೂರಿನಲ್ಲಿ ಮಾತ್ರ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿತ್ತು. ನಂತರ ಜಿಲ್ಲಾ ಕೇಂದ್ರಗಳಿಗೆ ಈ ಯೋಜನೆ ವಿಸ್ತರಣೆ ಮಾಡಲಾಗಿತ್ತು. ಇದೀಗ ಈ ಯೋಜನೆಗೆ ಅನುದಾನ ನಿಲ್ಲಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಇಂದಿರಾ ಕ್ಯಾಂಟೀನ್ಗೆ ರಾಜ್ಯ ಸರ್ಕಾರ ಅನುದಾನ ಸ್ಥಗಿತಗೊಳಿಸಿದೆ. ಆ ಮೂಲಕ ಬಡವರಿಗೆ ರಿಯಾಯಿತಿ ದರದಲ್ಲಿ ದೊರಕುತ್ತಿದ್ದ ಊಟಕ್ಕೂ ಕಲ್ಲು ಹಾಕಿದೆ ಎಂದು ಗುಂಡೂರಾವ್ ಆಕ್ರೋಶ ಹೊರ ಹಾಕಿದರು.
2/ 8
ಇಂದಿರಾ ಕ್ಯಾಂಟೀನ್ ಕಾಂಗ್ರೆಸ್ನ ಕೊಡುಗೆ ಎನ್ನುವ ಕಾರಣಕ್ಕೆ ಅನುದಾನ ನಿಲ್ಲಿಸಿದ್ದೀರಾ? ಅಥವಾ ಬಡವರ ಮೇಲೆ ನಿಷ್ಕಾಳಜಿಯಿಂದ ಅನುದಾನ ಸ್ಥಗಿತಗೊಳಿಸಿದಿರೋ ಎಂದು ಸಿಎಂ ಬೊಮ್ಮಾಯಿಗೆ ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ.
3/ 8
ರಾಜಕೀಯ ದುರುದ್ದೇಶದಿಂದ ರಾಜ್ಯ ಸರ್ಕಾರ ಕ್ಯಾಂಟೀನ್ಗೆ ಅನುದಾನ ಸ್ಥಗಿತಗೊಳಿಸಿರುವುದು ಹೀನ ಬುದ್ದಿ. ಈ ಸರ್ಕಾರಕ್ಕೆ ಬಡವರ ಮೇಲೆ ನೈಜ ಕಾಳಜಿಯಿದ್ದರೆ ಇಂದಿರಾ ಕ್ಯಾಂಟೀನ್ಗೆ ಅನುದಾನ ನೀಡಲಿ ಎಂದು ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ,
4/ 8
ಇಂದಿರಾ ಕ್ಯಾಂಟೀನ್ ಗೆ ಆಹಾರ ಅರಸಿ ಬರುವವರ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡಿದೆ. ಇಂದಿರಾ ಕ್ಯಾಂಟೀನ್ ಗೆ ಆಗಮಿಸುವ ಗ್ರಾಹಕರ ಸಂಖ್ಯೆ ಅರ್ಧಕ್ಕರ್ಧ ಕುಸಿತವಾಗಿರುವ ಅಂಕಿ ಅಂಶಗಳ ಮಾಹಿತಿ ನ್ಯೂಸ್ 18 ಕನ್ನಡಕ್ಕೆ ಲಭ್ಯವಾಗಿದೆ.
5/ 8
ಇಂದಿರಾ ಕ್ಯಾಂಟೀನ್ ಗ್ರಾಹಕರ ಸಂಖ್ಯೆ ಶೇ.60ರಷ್ಟು ಕುಸಿದಿದೆ ಎನ್ನಲಾಗಿದೆ. ಮೊದಲು ದಿನ ನಿತ್ಯ 3.5 ಲಕ್ಷ ಮಂದಿ ಪ್ರತಿದಿನ ಕ್ಯಾಂಟೀನ್ ಗೆ ಬರುತ್ತಿದ್ದರು. ಇದೀಗ ಅದರ ಸಂಖ್ಯೆ 1.5 ಲಕ್ಷಕ್ಕೆ ಇಳಿಕೆಯಾಗಿದೆ.
6/ 8
ಆರಂಭದಲ್ಲಿ ಬೆಳಗ್ಗೆ, ಮಧ್ಯಾಹ್ನ, ರಾತ್ರಿ ತಲಾ 400 ಜನರು ಆಗಮಿಸುತ್ತಿದ್ದರು. ಈಗ ಅದರ ಸಂಖ್ಯೆ ಪ್ರತಿ ನಿತ್ಯ 100ಕ್ಕೆ ಇಳಿಕೆಯಾಗಿದೆ ಎಂಬ ಮಾಹಿತಿ ನ್ಯೂಸ್ 18 ಕನ್ನಡಕ್ಕೆ ತಿಳಿದು ಬಂದಿದೆ.
7/ 8
ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 198 ಇಂದಿರಾ ಕ್ಯಾಂಟೀನ್ ಗಳಿವೆ. ಈ ಪೈಕಿ 175 ಸ್ಥಿರ ಹಾಗೂ 24 ಮೊಬೈಲ್ ಕ್ಯಾಂಟೀನ್ ಗಳಿವೆ.
8/ 8
2017 ಆಗಸ್ಟ್ 15 ರಂದು ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿತ್ತು. ದುಡಿಯುವ ಕೆಳ ವರ್ಗದ ಜನಕ್ಕೆ ಕಡಿಮೆ ಬೆಲೆಯಲ್ಲಿ (ತಿಂಡಿ 5 ರೂ ಮತ್ತು ಊಟ 10 ರೂ) ನೀಡೋದು ಈ ಯೋಜನೆಯ ಉದ್ದೇಶವಾಗಿದೆ.
ಇಂದಿರಾ ಕ್ಯಾಂಟೀನ್ಗೆ ರಾಜ್ಯ ಸರ್ಕಾರ ಅನುದಾನ ಸ್ಥಗಿತಗೊಳಿಸಿದೆ. ಆ ಮೂಲಕ ಬಡವರಿಗೆ ರಿಯಾಯಿತಿ ದರದಲ್ಲಿ ದೊರಕುತ್ತಿದ್ದ ಊಟಕ್ಕೂ ಕಲ್ಲು ಹಾಕಿದೆ ಎಂದು ಗುಂಡೂರಾವ್ ಆಕ್ರೋಶ ಹೊರ ಹಾಕಿದರು.
ಇಂದಿರಾ ಕ್ಯಾಂಟೀನ್ ಕಾಂಗ್ರೆಸ್ನ ಕೊಡುಗೆ ಎನ್ನುವ ಕಾರಣಕ್ಕೆ ಅನುದಾನ ನಿಲ್ಲಿಸಿದ್ದೀರಾ? ಅಥವಾ ಬಡವರ ಮೇಲೆ ನಿಷ್ಕಾಳಜಿಯಿಂದ ಅನುದಾನ ಸ್ಥಗಿತಗೊಳಿಸಿದಿರೋ ಎಂದು ಸಿಎಂ ಬೊಮ್ಮಾಯಿಗೆ ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ.
ರಾಜಕೀಯ ದುರುದ್ದೇಶದಿಂದ ರಾಜ್ಯ ಸರ್ಕಾರ ಕ್ಯಾಂಟೀನ್ಗೆ ಅನುದಾನ ಸ್ಥಗಿತಗೊಳಿಸಿರುವುದು ಹೀನ ಬುದ್ದಿ. ಈ ಸರ್ಕಾರಕ್ಕೆ ಬಡವರ ಮೇಲೆ ನೈಜ ಕಾಳಜಿಯಿದ್ದರೆ ಇಂದಿರಾ ಕ್ಯಾಂಟೀನ್ಗೆ ಅನುದಾನ ನೀಡಲಿ ಎಂದು ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ,
ಇಂದಿರಾ ಕ್ಯಾಂಟೀನ್ ಗೆ ಆಹಾರ ಅರಸಿ ಬರುವವರ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡಿದೆ. ಇಂದಿರಾ ಕ್ಯಾಂಟೀನ್ ಗೆ ಆಗಮಿಸುವ ಗ್ರಾಹಕರ ಸಂಖ್ಯೆ ಅರ್ಧಕ್ಕರ್ಧ ಕುಸಿತವಾಗಿರುವ ಅಂಕಿ ಅಂಶಗಳ ಮಾಹಿತಿ ನ್ಯೂಸ್ 18 ಕನ್ನಡಕ್ಕೆ ಲಭ್ಯವಾಗಿದೆ.
ಇಂದಿರಾ ಕ್ಯಾಂಟೀನ್ ಗ್ರಾಹಕರ ಸಂಖ್ಯೆ ಶೇ.60ರಷ್ಟು ಕುಸಿದಿದೆ ಎನ್ನಲಾಗಿದೆ. ಮೊದಲು ದಿನ ನಿತ್ಯ 3.5 ಲಕ್ಷ ಮಂದಿ ಪ್ರತಿದಿನ ಕ್ಯಾಂಟೀನ್ ಗೆ ಬರುತ್ತಿದ್ದರು. ಇದೀಗ ಅದರ ಸಂಖ್ಯೆ 1.5 ಲಕ್ಷಕ್ಕೆ ಇಳಿಕೆಯಾಗಿದೆ.
ಆರಂಭದಲ್ಲಿ ಬೆಳಗ್ಗೆ, ಮಧ್ಯಾಹ್ನ, ರಾತ್ರಿ ತಲಾ 400 ಜನರು ಆಗಮಿಸುತ್ತಿದ್ದರು. ಈಗ ಅದರ ಸಂಖ್ಯೆ ಪ್ರತಿ ನಿತ್ಯ 100ಕ್ಕೆ ಇಳಿಕೆಯಾಗಿದೆ ಎಂಬ ಮಾಹಿತಿ ನ್ಯೂಸ್ 18 ಕನ್ನಡಕ್ಕೆ ತಿಳಿದು ಬಂದಿದೆ.
2017 ಆಗಸ್ಟ್ 15 ರಂದು ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿತ್ತು. ದುಡಿಯುವ ಕೆಳ ವರ್ಗದ ಜನಕ್ಕೆ ಕಡಿಮೆ ಬೆಲೆಯಲ್ಲಿ (ತಿಂಡಿ 5 ರೂ ಮತ್ತು ಊಟ 10 ರೂ) ನೀಡೋದು ಈ ಯೋಜನೆಯ ಉದ್ದೇಶವಾಗಿದೆ.