ಮಾಜಿ ಸಿಎಂಗಳ ಸಮಾಗಮಕ್ಕೆ ವೇದಿಕೆಯಾಯ್ತು ಹಾಲಿ ಸಿಎಂ ಬಿಎಸ್ವೈ ಹುಟ್ಟುಹಬ್ಬ ಸಮಾರಂಭ
ಯಡಿಯೂರಪ್ಪ ಅವರ 78ನೇ ಜನ್ಮದಿನದ ಅಂಗವಾಗಿ ಇಂದು ಅರಮನೆ ಮೈದಾನದಲ್ಲಿ ಅಭಿನಂದನಾ ಸಮಾರಂಭ ನಡೆಸಲಾಗಿದೆ. ಈ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಗಣ್ಯರನ್ನು ಆಮಂತ್ರಿಸಲಾಗಿದೆ. ಇನ್ನು ಕಾರ್ಯಕ್ರಮದಲ್ಲಿ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಸದಾನಂದಗೌಡ, ಎಸ್ಎಂ ಕೃಷ್ಣ, ಜಗದೀಶ್ ಶೆಟ್ಟರ್, ಉತ್ತರ ಪ್ರದೇಶ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವರಾಗಿರುವ ರಾಜನಾಥ್ ಸಿಂಗ್ ಸೇರಿದಂತೆ ಬಿಜೆಪಿ ನಾಯಕರು ಸಮಾಗಮವಾಗಿದೆ.