Karnataka Budget 2023: ಮಠ, ಮಂದಿರ ಜೀರ್ಣೋದ್ಧಾರಕ್ಕೆ ಸಾವಿರಾರು ಕೋಟಿ ಬಿಡುಗಡೆ!

ಈ ಬಾರಿ ರಾಜ್ಯ ಬಿಜೆಪಿ ಸರ್ಕಾರ ಮಠ ಮಾನ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದೆ. ಈ ವರ್ಷ ಕೂಡ ಸಾವಿರಾರು ಕೋಟಿ ಅನುದಾನ ಮೀಸಲಿಟ್ಟಿದೆ. ದತ್ತಿ ಇಲಾಖೆಗಳ ವರ್ಷದ ಅನುದಾನ 60 ಸಾವಿರಕ್ಕೆ ಹೆಚ್ಚಿಲಾಗಿದೆ. ಮಠ ಮಂದಿರಗಳ ಅಭಿವೃದ್ದಿಗೆ 1000 ಕೋಟಿ ರೂಪಾಯಿ ಬಿಡುಗಡೆಗೊಳಿಸಲಾಗಿದೆ.

First published:

  • 19

    Karnataka Budget 2023: ಮಠ, ಮಂದಿರ ಜೀರ್ಣೋದ್ಧಾರಕ್ಕೆ ಸಾವಿರಾರು ಕೋಟಿ ಬಿಡುಗಡೆ!

    ಸಿಎಂ ಬಸವರಾಜ್ ಬೊಮ್ಮಾಯಿ ಅವರು ಇಂದು ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ವಿಧಾನಸಭಾ ಚುನಾವಣೆ ಹಂತದಲ್ಲಿ ಮಂಡಿಸಲಾಗುವ ಸಿಎಂ ಬೊಮ್ಮಾಯಿ ಮಂಡಿಸಲಿರುವ ಬಜೆಟ್ ಸಾಕಷ್ಟು ನಿರೀಕ್ಷೆಗಳಿವೆ.

    MORE
    GALLERIES

  • 29

    Karnataka Budget 2023: ಮಠ, ಮಂದಿರ ಜೀರ್ಣೋದ್ಧಾರಕ್ಕೆ ಸಾವಿರಾರು ಕೋಟಿ ಬಿಡುಗಡೆ!

    ಚುನಾವಣೆ ಸಮೀಪದಲ್ಲಿರುವಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಈ ಬಜೆಟ್ ಘೋಷಿಸಿದ್ದು, ಪ್ರತಿ ವರ್ಷದಂತೆ ಈ ಬಾರಿಯೂ ಬಿಜೆಪಿ ಸರ್ಕಾರ ಮಠ, ಮಂದಿರಗಳ ಜೀರ್ಣೋದ್ಧಾರಕ್ಕೆ ಸಾವಿರಾರು ಕೋಟಿ ರೂಪಾಯಿಯನ್ನು ಅನುದಾನ ನೀಡಿದೆ. (ಸಾಂಕೇತಿಕ ಚಿತ್ರ)

    MORE
    GALLERIES

  • 39

    Karnataka Budget 2023: ಮಠ, ಮಂದಿರ ಜೀರ್ಣೋದ್ಧಾರಕ್ಕೆ ಸಾವಿರಾರು ಕೋಟಿ ಬಿಡುಗಡೆ!

    ಈ ಬಾರಿ ರಾಜ್ಯ ಬಿಜೆಪಿ ಸರ್ಕಾರ ಮಠ ಮಾನ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದೆ. ಈ ವರ್ಷ ಕೂಡ ಸಾವಿರಾರು ಕೋಟಿ ಅನುದಾನ ಮೀಸಲಿಟ್ಟಿದೆ. ದತ್ತಿ ಇಲಾಖೆಗಳ ವರ್ಷದ ಅನುದಾನ 60 ಸಾವಿರಕ್ಕೆ ಹೆಚ್ಚಿಲಾಗಿದೆ. ಮಠ ಮಂದಿರಗಳ ಅಭಿವೃದ್ದಿಗೆ 1000 ಕೋಟಿ ರೂಪಾಯಿ ಬಿಡುಗಡೆಗೊಳಿಸಲಾಗಿದೆ. (ಸಾಂಕೇತಿಕ ಚಿತ್ರ)

    MORE
    GALLERIES

  • 49

    Karnataka Budget 2023: ಮಠ, ಮಂದಿರ ಜೀರ್ಣೋದ್ಧಾರಕ್ಕೆ ಸಾವಿರಾರು ಕೋಟಿ ಬಿಡುಗಡೆ!

    ದೇವಸ್ಥಾನಗಳ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ ನೀಡಲಾಗಿದೆ. ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಾಲಯ ಮತ್ತು ಮಠಗಳ ಜೀರ್ಣೋದ್ಧಾರಕ್ಕಾಗಿ ಬಿಜೆಪಿ ಸರ್ಕಾರ 1, 000 ಕೋಟಿ ರೂ. ಸಮಗ್ರವಾಗಿ ಅಭಿವೃದ್ಧಿಗೆ ಮೀಸಲಿಟ್ಟಿದೆ. (ಸಾಂಕೇತಿಕ ಚಿತ್ರ)

    MORE
    GALLERIES

  • 59

    Karnataka Budget 2023: ಮಠ, ಮಂದಿರ ಜೀರ್ಣೋದ್ಧಾರಕ್ಕೆ ಸಾವಿರಾರು ಕೋಟಿ ಬಿಡುಗಡೆ!

    ಜಗತ್ತಿಗೆ ಸಂಸತ್ತಿನ ಪರಿಕಲ್ಪನೆಯನ್ನು ಪರಿಚಯಿಸಿದ ಬಸವ ಶರಣರು ಸ್ಥಾಪಿಸಿದ ಅನುಭವ ಮಂಟಪದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ. ಧಾರ್ಮಿಕ ದತ್ತಿ ಇಲಾಖೆಯ ಜಮೀನುಗಳ ವರ್ಷಾಶವನ್ನು 48,000 ರೂ. ಗಳಿಂದ 60,00 ರೂ.ಗೆ ಏರಿಸಲಾಗಿದೆ. ಈ ಸೌಲಭ್ಯದಿಂದ 3,71 ಸಂಸ್ಥೆಗಳಿಗೆ ಅನುಕೂಲಕರವಾಗಲಿದೆ. (ಸಾಂಕೇತಿಕ ಚಿತ್ರ)

    MORE
    GALLERIES

  • 69

    Karnataka Budget 2023: ಮಠ, ಮಂದಿರ ಜೀರ್ಣೋದ್ಧಾರಕ್ಕೆ ಸಾವಿರಾರು ಕೋಟಿ ಬಿಡುಗಡೆ!

    ಶ್ರೀ ಆಂಜನೇಯ ಜನ್ಮಸ್ಥಳವೆಂದು ಪ್ರಸಿದ್ಧವಾದ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಪ್ರವಾಸಿಗಳಿಗೆ ಮೂಲಸೌಕರ್ಯ ಒದಗಿಸಲು 100 ಕೋಟಿ ರೂ. ಅಂದಾಜು ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಒಳಗೊಂಡ ವಿಸ್ತ್ರತವಾದ ಯೋಜನೆಯನ್ನು ತಯಾರಿಸಿ, ಟೆಂಡರ್ ಕರೆಯಲಾಗಿದೆ. (ಸಾಂಕೇತಿಕ ಚಿತ್ರ)

    MORE
    GALLERIES

  • 79

    Karnataka Budget 2023: ಮಠ, ಮಂದಿರ ಜೀರ್ಣೋದ್ಧಾರಕ್ಕೆ ಸಾವಿರಾರು ಕೋಟಿ ಬಿಡುಗಡೆ!

    ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾದ C.R.2 ಮಾನದಂಡಗಳನ್ನು ಸಡಿಲಗೊಳಿಸುವುದಕ್ಕೆ ಕೇಂದ್ರ ಸರ್ಕಾರವು ಒಪ್ಪಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ವಲಯ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಧಾರ್ಮಿಕ, ಸಾಹಸ ಮತ್ತು ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ರೂಪರೇಷೆಗಳನ್ನು ತಯಾರಿಸಲಾಗುವುದು. (ಸಾಂಕೇತಿಕ ಚಿತ್ರ)

    MORE
    GALLERIES

  • 89

    Karnataka Budget 2023: ಮಠ, ಮಂದಿರ ಜೀರ್ಣೋದ್ಧಾರಕ್ಕೆ ಸಾವಿರಾರು ಕೋಟಿ ಬಿಡುಗಡೆ!

    ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯದ ಯೋಜನೆಯು ಮೈಸೂರು ನಗರದ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಹಾಗೂ ಸದೇಶ್ ದರ್ಶನ್ 20 ಆಡಿಯಲ್ಲಿ ಹಂಪಿಯ ಸ್ಮಾರಕ ಅಭಿವೃದ್ಧಿ ಮತ್ತು ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಶಾಶ್ವತ ಸೌಲಭ್ಯಗಳ ಅಭಿವೃದ್ಧಿ ಯೋಜನೆಗಳನ್ನು ಮಂಜೂರು ಮಾಡಲಾಗಿದೆ. ರಾಮನಗರದ ರಾಮದೇವರ ಬೆಟ್ಟದಲ್ಲಿ ಒಂದು ಭವ್ಯವಾದ ರಾಮಮಂದಿರವನ್ನು ನಿರ್ಮಿಗುವುುವುದಾಗಿ ತಿಳಿಸಿದ್ದಾರೆ. (ಸಾಂಕೇತಿಕ ಚಿತ್ರ)

    MORE
    GALLERIES

  • 99

    Karnataka Budget 2023: ಮಠ, ಮಂದಿರ ಜೀರ್ಣೋದ್ಧಾರಕ್ಕೆ ಸಾವಿರಾರು ಕೋಟಿ ಬಿಡುಗಡೆ!

    ಕರ್ನಾಟಕದ ಇತಿಹಾಸ ಮತ್ತು ಕಲೆಯ ಶ್ರೀಮಂತಿಕೆಯನ್ನು ಬಿಂಬಿಸುವ ಹ೦ಪಿಯ ವಿಜಯವಿಠಲ ದೇವಾಲಯ ಮತ್ತು ಪುರಂದರ ಮಂಟಪ, ವಿಜಯಪುರದ ಗೋಲ್ ಗುಂಬಜ್, ಚಿಕ್ಕಬಳ್ಳಾಪುರ ಜಿಲ್ಲೆಯ ಭೋಗನಂದೀಶ್ವರ ದೇವಾಲಯ, ಬಾದಾಮಿ ಗುಹೆಗಳು, ಕಿತ್ತೂರು ಹಾಗೂ ಕೋಟೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಈ ಸ್ಥಳಗಳಲ್ಲಿ ಅತ್ಯಾಧುನಿಕ ಬೆಳಕಿನ ವ್ಯವಸ್ಥೆ. 3D projection mapping, ಧ್ವನಿ ಮತ್ತು ಬೆಳಕು ಪ್ರದರ್ಶನಗಳನ್ನು ಅಳವಡಿಸಲಾಗುವುದು. ಇದಕ್ಕಾಗಿ 2023-24 ರಲ್ಲಿ 60 ಕೋಟಿ ರೂ. ಗಳನ್ನು ಒದಗಿಸಲಾಗಿದೆ. (ಸಾಂಕೇತಿಕ ಚಿತ್ರ)

    MORE
    GALLERIES