Namma Metro: ಈವರೆಗೆ 38 ಜನರನ್ನು ಬಲಿ ಪಡೆದ ನಮ್ಮ ಮೆಟ್ರೋ ಕಾಮಗಾರಿ; ರಾಜ್ಯ ಸರ್ಕಾರದಿಂದ ಅಧಿಕೃತ ಮಾಹಿತಿ

ವರ್ಷದ ಆರಂಭ ಜನವರಿಯಲ್ಲೇ ನಾಗವಾರ ಬಳಿಯ ಹೊರವರ್ತುಲ ರಸ್ತೆಯ ಮೆಟ್ರೋ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಪಿಲ್ಲರ್ ಕುಸಿದು ಬಿದ್ದು ಮಹಿಳೆ ಮತ್ತು ಎರಡು ವರ್ಷದ ಮಗು ಸಾವನ್ನಪ್ಪಿದ್ದರು.

First published:

  • 16

    Namma Metro: ಈವರೆಗೆ 38 ಜನರನ್ನು ಬಲಿ ಪಡೆದ ನಮ್ಮ ಮೆಟ್ರೋ ಕಾಮಗಾರಿ; ರಾಜ್ಯ ಸರ್ಕಾರದಿಂದ ಅಧಿಕೃತ ಮಾಹಿತಿ

    ಬೆಂಗಳೂರು: ರಾಜ್ಯ ಸರ್ಕಾರ ನೀಡಿರುವ ಮಾಹಿತಿಯ ಅನ್ವಯ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಡೆಸುತ್ತಿರುವ ನಿರ್ಮಾಣ ಕಾಮಗಾರಿಯ ಸಂದರ್ಭದಲ್ಲಿ ಇದುವರೆಗೂ ನಡೆದಿರುವ ಅಪಘಾತಗಳಲ್ಲಿ ಈವರೆಗೂ 38 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 26

    Namma Metro: ಈವರೆಗೆ 38 ಜನರನ್ನು ಬಲಿ ಪಡೆದ ನಮ್ಮ ಮೆಟ್ರೋ ಕಾಮಗಾರಿ; ರಾಜ್ಯ ಸರ್ಕಾರದಿಂದ ಅಧಿಕೃತ ಮಾಹಿತಿ

    ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಜನತಾದಳ ಎಂಎಸ್​​ಸಿ ಟಿಎ ಶರವಣ ಅವರು ಕೇಳಿದ್ದ ಲಿಖಿತ ಪ್ರಶ್ನೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಉತ್ತರಿಸಿದ್ಧಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 36

    Namma Metro: ಈವರೆಗೆ 38 ಜನರನ್ನು ಬಲಿ ಪಡೆದ ನಮ್ಮ ಮೆಟ್ರೋ ಕಾಮಗಾರಿ; ರಾಜ್ಯ ಸರ್ಕಾರದಿಂದ ಅಧಿಕೃತ ಮಾಹಿತಿ

    ಸಿಎಂ ಬೊಮ್ಮಾಯಿ ಸದನದಲ್ಲಿ ನೀಡಿರುವ ಮಾಹಿತಿಯಂತೆ ಮೆಟ್ರೋ ರೈಲು ಯೋಜನೆಗೆ ಕಾಮಗಾರಿ ವೇಳೆ ಇದುವರೆಗೂ ಸಂಭವಿಸಿದ ಅಪಘಾತಗಳಲ್ಲಿ ಒಟ್ಟು 50 ಮಂದಿ ಹಾನಿಗೊಳಗಾಗಿದ್ದಾರೆ. ಇದರಲ್ಲಿ 38 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. 2023ರ ವರ್ಷದ ಆರಂಭ ಜನವರಿಯಲ್ಲೇ ನಾಗವಾರ ಬಳಿಯ ಹೊರವರ್ತುಲ ರಸ್ತೆಯ ಮೆಟ್ರೋ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಪಿಲ್ಲರ್ ಕುಸಿದು ಬಿದ್ದು ಮಹಿಳೆ ಮತ್ತು ಎರಡು ವರ್ಷದ ಮಗು ಸಾವನ್ನಪ್ಪಿದ್ದರು. (ಸಾಂದರ್ಭಿಕ ಚಿತ್ರ)

    MORE
    GALLERIES

  • 46

    Namma Metro: ಈವರೆಗೆ 38 ಜನರನ್ನು ಬಲಿ ಪಡೆದ ನಮ್ಮ ಮೆಟ್ರೋ ಕಾಮಗಾರಿ; ರಾಜ್ಯ ಸರ್ಕಾರದಿಂದ ಅಧಿಕೃತ ಮಾಹಿತಿ

    ದುರ್ಘಟನೆ ಬಗ್ಗೆ ತನಿಖೆ ನಡೆಸಿ ವರದಿ ನೀಡಿದ್ದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ತಜ್ಞರು, ಪಿಲ್ಲರ್ ನಿರ್ಮಾಣಕ್ಕೆ ಅಳವಡಿಸಿದ್ದ ಕಬ್ಬಿಣದ ಪಿಲ್ಲರ್​ ನಿಂತುಕೊಳ್ಳಲು ಅಗತ್ಯವಿದ್ದಷ್ಟು ಸಪೋರ್ಟ್ ನೀಡಿದೆ ಇದ್ದದ್ದು ದುರಂತಕ್ಕೆ ಕಾರಣ ಎಂದು ಹೇಳಿದ್ದರು. ಮೆಟ್ರೋ ಪಿಲ್ಲರ್ ನಿರ್ಮಾಣದ ವೇಳೆ 18 ಮೀಟರ್ ಎತ್ತರದ ಕಂಬಿ ಕಟ್ಟಲಾಗಿತ್ತು. ಇಷ್ಟು ಎತ್ತರದ ಪಿಲ್ಲರ್​ಗೆ ಕಂಬಿ ಕಟ್ಟುವಾಗ ಮುಂಜಾಗೃತಾ ಕ್ರಮವಾಗಿ ಕಂಬಿಗೆ ಸರಿಯಾದ ಸಪೋರ್ಟ್ ನೀಡಬೇಕಿತ್ತು. ಆ ಕೆಲಸವನ್ನು ಮಾಡದಿರುವುದೇ ದುರಂತಕ್ಕೆ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. (ಸಾಂದರ್ಭಿಕ ಚಿತ್ರ)

    MORE
    GALLERIES

  • 56

    Namma Metro: ಈವರೆಗೆ 38 ಜನರನ್ನು ಬಲಿ ಪಡೆದ ನಮ್ಮ ಮೆಟ್ರೋ ಕಾಮಗಾರಿ; ರಾಜ್ಯ ಸರ್ಕಾರದಿಂದ ಅಧಿಕೃತ ಮಾಹಿತಿ

    ಎಂಎಲ್​ಸಿ ಶರವಣ ಅವರ ಪ್ರಶ್ನೆಗೆ ಉತ್ತರಿಸಿದ್ದ ಸಿಎಂ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಅಧ್ಯಯನದಲ್ಲಿ ತಿಳಿಸಿರುವ ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದರು. ಬಿಎಂಆರ್ ಸಿಎಲ್ ಎಂಜಿನಿಯರ್ ಗಳಿಗೆ ಹೊಸದಾಗಿ ಟ್ರೈನಿಂಗ್ ಕೊಡಲಾಗುತ್ತಿದೆ. ಮುಂದೆ ಇಂತಹ ದುರಂತಗಳು ನಡೆದಂತೆ ಏನೇಲ್ಲಾ ಕ್ರಮ ಕೈಗೊಳ್ಳಬೇಕು ಅನ್ನೋದರ ಬಗ್ಗೆ ಎಸ್​ಒಪಿ ಬದಲಾವಣೆ ಮಾಡಲಾಗುತ್ತದೆ ಎಂದು ಐಐಎಸ್‌ಸಿ ವರದಿಯ ಬಳಿಕ ಮೆಟ್ರೋ ಅಧಿಕಾರಿಗಳು ಸ್ಪಷ್ಟಪಡಿಸಿದ್ದರು.

    MORE
    GALLERIES

  • 66

    Namma Metro: ಈವರೆಗೆ 38 ಜನರನ್ನು ಬಲಿ ಪಡೆದ ನಮ್ಮ ಮೆಟ್ರೋ ಕಾಮಗಾರಿ; ರಾಜ್ಯ ಸರ್ಕಾರದಿಂದ ಅಧಿಕೃತ ಮಾಹಿತಿ

    ಅಲ್ಲದೆ, ಈವರೆಗೂ ಸಂಭವಿಸಿದ ಅಪಘಾತಗಳಲ್ಲಿ ಗಾಯಗೊಂಡಿರುವ ಮತ್ತು ಸಾವನ್ನಪ್ಪಿರುವ ಒಟ್ಟು 50 ಮಂದಿಗೆ ಒಟ್ಟು 3.15 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ದುರಂತಕ್ಕೆ ಕಾರಣವಾಗಿದ್ದ ಮೂವರು ಎಂಜಿನಿಯರ್​​ಗಳನ್ನು ಅಮಾನತ್ತು ಮಾಡಲಾಗಿದೆ. ಗುತ್ತಿಗೆದಾರರಿಗೆ 1.77 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ ಎಂದು ಸಿಎಂ ವಿವರಿಸಿದ್ದರು. (ಸಾಂದರ್ಭಿಕ ಚಿತ್ರ)

    MORE
    GALLERIES