KS Eshwarappa ಬಂಧನಕ್ಕೆ ಆಗ್ರಹಿಸಿ ರಾಜ್ಯಾದ್ಯಂತ 5 ದಿನ Congress ಪ್ರತಿಭಟನೆ; ಎಲ್ಲಿ, ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿರುವ ಕಾಂಗ್ರೆಸ್ ಅವರ ಬಂಧನಕ್ಕೆ ಆಗ್ರಹಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಲವು ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಸುವ ಮೂಲಕ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಸಜ್ಜಾಗಿದೆ.
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ರಾಜಕೀಯವಾಗಿ ಪ್ರಬಲ ಅಸ್ತ್ರ ಮಾಡಿಕೊಂಡಿರುವ ಕಾಂಗ್ರೆಸ್ ಇದೀಗ ಅದೇ ವಿಚಾರವಾಗಿ ರಾಜ್ಯಾದ್ಯಾಂತ ಪ್ರತಿಭಟನೆ ಸಜ್ಜಾಗಿದೆ. (ಸಾಂದರ್ಭಿಕ ಚಿತ್ರ)
2/ 11
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿರುವ ಕಾಂಗ್ರೆಸ್ ಅವರ ಬಂಧನಕ್ಕೆ ಆಗ್ರಹಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಲವು ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಸುವ ಮೂಲಕ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಸಜ್ಜಾಗಿದೆ.
3/ 11
ಸಂತೋಷ್ ಪಾಟೀಲ್ ಕುಟುಂಬಕ್ಕೆ ನ್ಯಾಯ ನೀಡಬೇಕು. ಅವರ ಕುಟುಂಬಕ್ಕೆ ಕೋಟಿ ಪರಿಹಾರ ಜೊತೆಗೆ ಸರ್ಕಾರಿ ಕೆಲಸಕ್ಕೆ ಆಗ್ರಹಿಸಿರುವ 8 ತಂಡಗಳಲ್ಲಿ 5 ದಿನ ಕೈ ನಾಯಕರ ಮೂಲಕ ರಾಜ್ಯದಲ್ಲಿ ಪ್ರತಿಭಟನೆ ನಡೆಸಲಿದೆ
4/ 11
ಮೊದಲ ತಂಡ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಏ. 15 ರಂದು ಹಾವೇರಿ, ಏ. 16 ರಂದು ಗದಗ ಜಿಲ್ಲೆ, ಏ. 17, ಬಾಗಲಕೋಟೆ, 18ರಂದು ಹುಬ್ಬಳ್ಳಿ ಧಾರವಾಡ. ಏ. 19 ರಂದು ಧಾರವಾಡ ಗ್ರಾಮೀಣ ಭಾಗದಲ್ಲಿ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಧರಣಿ ನಡೆಸಲಿದ್ದಾರೆ.
5/ 11
ಎರಡನೇ ತಂಡ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಏ. 15 ರಂದು ಚಾಮರಾಜನಗ ಜಿಲ್ಲೆಯಲ್ಲಿ ಪ್ರತಿಭಟನೆ, 16ರಂದು ಮೈಸೂರು ನಗರ ಹಾಗೂ ಗ್ರಾಮೀಣ ಜಿಲ್ಲೆ, 17ರಂದು ಮಂಡ್ಯ ಜಿಲ್ಲೆಯಲ್ಲಿ, 18ರಂದು ಕೊಡಗು ಜಿಲ್ಲೆ, 19ರಂದು ಹಾಸನ ಜಿಲ್ಲೆ, 20ರಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲಿದೆ.
6/ 11
ಮೂರನೇ ತಂಡ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ನೇತೃತ್ವ ಏ. 15 ಬೀದರ್ ಜಿಲ್ಲೆ, ಏ. 16 ಕಲಬುರಗಿ ಜಿಲ್ಲೆ, ಏ. 17 ಯಾದಗಿರಿ ಜಿಲ್ಲೆ, ಏ. 18 ರಾಯಚೂರು ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲಿದೆ.
7/ 11
ನಾಲ್ಕನೇ ತಂಡ: ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಏ. 15 ರಂದು ಬಳ್ಳಾರಿ ಜಿಲ್ಲೆ, ಏ. 16 ರಂದು ರಾಮನಗರ ಜಿಲ್ಲೆ, ಏ. 17 ರಂದು ಕೋಲಾರ ಜಿಲ್ಲೆ, ಏ. 18 ರಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲು ಸಜ್ಜಾಗಿದೆ
8/ 11
ಐದನೇ ತಂಡ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ನೇತೃತ್ವದಲ್ಲಿ ಏ. 15 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏ. 16 ರಂದು ಚಿತ್ರದುರ್ಗ ಜಿಲ್ಲೆ, ಏ. 17 ರಂದು ತುಮಕೂರು ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
9/ 11
ಆರನೇ ತಂಡ: ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನೇತೃತ್ವದಲ್ಲಿ ಏ. 15 ರಂದು ಉತ್ತರ ಕನ್ನಡ ಜಿಲ್ಲೆ, ಏ. 16 ರಂದು ಉಡುಪಿ ಜಿಲ್ಲೆ, ಏ. 17 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
10/ 11
ಏಳನೇ ತಂಡ: ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಆರ್ ದೃವನಾರಾಯಣ್ ನೇತೃತ್ವದಲ್ಲಿ ನೇತೃತ್ವದಲ್ಲಿ ಏ. 15 ರಂದು ಕೊಪ್ಪಳ ಜಿಲ್ಲೆ, ಏ. 16 ರಂದು ದಾವಣಗೆರೆ ಜಿಲ್ಲೆ, ಏ. 17 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ
11/ 11
ಏಳನೇ ತಂಡ: ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ನೇತೃತ್ವದಲ್ಲಿ ಏ. 15 ರಂದು ಬೆಳವಾಗಿ ನಗರ ಮತ್ತು ಗ್ರಾಮಾಂತರ ಜಿಲ್ಲೆ, ಏ. 16 ರಂದು ಚಿಕ್ಕೋಡಿ ಜಿಲ್ಲೆ, ಏ. 17 ರಂದು ವಿಜಯಪುರ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ