ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲ ಸಮಯಷ್ಟೇ ಬಾಕಿ ಉಳಿದಿದೆ. ಹೀಗಿರುವಾಗ ಜೆಡಿಸೆ್ನಲ್ಲಿ ಹಾಸನ ಕ್ಷೇತ್ರ ವಿಚಾರವಾಗಿ ಗೊಂದಲ ಮತ್ತಷ್ಟು ಮುಂದುವರೆದಿದೆ. ಒಂದೆಡೆ ರೇವಣ್ಣ ಫ್ಯಾಮಿಲಿ ಹಠಕ್ಕೆ ಬಿದ್ದು ಇಲ್ಲಿ ಪ್ರಚಾರ ನಡೆಸುತ್ತಿದ್ದರೆ, ಅತ್ತ ಕುಮಾರಸ್ವಾಮಿ ಈ ಗೊಂದಲಕ್ಕೆ ಪರಿಹಾರ ಹುಡುಕುತ್ತದ್ದಾರೆ. ಸದ್ಯ ಕುಮಾರಸ್ವಾಮಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ.
ಹೌದು ಹಾಸನ ಕ್ಷೇತ್ರದ ಜೆಡಿಎಸ್ ಟಿಕೆ ಟ್ ಗೊಂದಲ ಗೊಂದಲಕ್ಕೆ ತೆರೆ ಎಳೆಯಲು ಕುಮಾರಸ್ವಾಮಿ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಈ ನಿಟ್ಟಿನಲ್ಲಿ ಕುಮಾರಸ್ವಾಮಿ ಹಾಸನ ಕ್ಷೇತ್ರದ ಪ್ರಮುಖ ಕಾರ್ಯಕರ್ತರು,ಮುಖಂಡರ ಸಭೆ ಕರೆದಿದ್ದಾರೆ.
2/ 9
ಭಾನುವಾರ ಬೆಂಗಳೂರಿನಲ್ಲಿ ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆ ಬಗ್ಗೆ ಅಭಿಪ್ರಾಯ ಸಂಗ್ರಹ ನಡೆಯಲಿದೆ. ಹೀಗಿರುವಾಗ ಮಾಜಿ ಜಿಪಂ ಸದಸ್ಯರು, ತಾಪಂ ಮಾಜಿ ಸದಸ್ಯರು, ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ರಮುಖರ ಸಭೆ ಕರೆಯಲಾಗಿದೆ.
3/ 9
ಕುಮಾರಸ್ವಾಮಿ ಕಚೇರಿಯಿಂದಲೇ ಹಾಸನದ ಪ್ರಮುಖ ಕಾರ್ಯಕರ್ತರಿಗೆ ಬುಲಾವ್ ನೀಡಲಾಗಿದ್ದು, ಖುದ್ದು ಕುಮಾರಸ್ವಾಮಿ ಕಛೇರಿಯಿಂದ ಫೋನ್ ಮಾಡಿ ಸಭೆಗೆ ಆಹ್ವಾನ ನೀಡಲಾರಂಭಿಸಿದ್ದಾರೆ.
4/ 9
ಕುಮಾರಸ್ವಾಮಿ ಸುಮಾರು 300 ಜನ ಪ್ರಮುಖರ ಸಭೆ ಕರೆದಿದ್ದಾರೆ ಎನ್ನಲಾಗಿದೆ. ಇನ್ನು ಕುಮಾರಸ್ವಾಮಿ ಸದ್ಯ ಚಿಕ್ಕಮಗಳೂರಿನಲ್ಲಿ ನಡೆಯುತ್ತಿರೊ ಪಂಚರತ್ನ ಯಾತ್ರೆಯಲ್ಲಿದ್ದು, ಬಳಿಕ ಬೆಂಗಳೂರಿನ ಸಭೆಗೆ ಹಾಜರಾಲಿದ್ದಾರೆ.
5/ 9
ಸಭೆಯಲ್ಲಿ ಅಭ್ಯರ್ಥಿ ಯಾರಾದರೆ ಗೆಲುವು ಸುಲಭವಾಗಲಿದೆ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹ ನಡೆಯಲಿದೆ. ಎಲ್ಲಾ ಪ್ರಮುಖರ ಅಭಿಪ್ರಾಯ ಸಂಗ್ರಹಿಸಿ ಹಾಸನ ಟಿಕೆಟ್ ಬಗ್ಗೆ ತೀರ್ಮಾನ ಮಾಡಲು ತಂತ್ರ ರೂಪಿಸಿದ್ದಾರೆ ಕುಮಾರಸ್ವಾಮಿ.
6/ 9
ಇನ್ನೊಂದೆಡೆ ಕುಮಾರಸ್ವಾಮಿ ಹಾಸನ ಕ್ಷೇತ್ರದ ಬಗ್ಗೆ ಗೌಪ್ಯ ಸರ್ವೆ ಮಾಡಿಸಿ ವರದಿ ತರಿಸಿಕೊಂಡಿದ್ದಾರೆ. ಗೌಪ್ಯ ವರದಿ ಫಲಿತಾಂಶ ಹಾಗೂ ಪ್ರಮುಖರ ಅಭಿಪ್ರಾಯ ಎರಡನ್ನೂ ಆಧರಿಸಿ ಕುಮಾರಸ್ವಾಮಿ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ.
7/ 9
ಈವರೆಗೆ ಭವಾನಿ ರೇವಣ್ಣಗೆ ಟಿಕೆಟ್ ಬೇಡ ಎಂದೇ ಕುಮಾರಸ್ವಾಮಿ ಪಟ್ಟು ಹಿಡಿದಿದ್ದಾರೆ. ಆದರೂ ಅತ್ತ ರೇವಣ್ಣ ಹಾಗೂ ಫ್ಯಾಮಿಲಿ ಮಾತ್ರ ಇದೆಲ್ಲವನ್ನೂ ಗಣನೆಗೆ ತೆಗೆದುಕೊಳ್ಳದೇ ಕ್ಷೇತ್ರದಲ್ಲಿ ಪ್ರಚಾರ ಮುಂದುವರೆಸಿದ್ದಾರೆ.
8/ 9
ಅತ್ತ ಸ್ವರೂಪ್ ಕೂಡಾ ಹಾಸನ ಕ್ಷೇತ್ರದಲ್ಲಿ ತಾವೇ ಆಕಾಂಕ್ಷಿ ಎಂದು ಕ್ಷೇತ್ರದಲ್ಲಿ ಒಂದು ಸುತ್ತಿನ ಪ್ರಚಾರ ಮುಗಿಸಿದ್ದಾರೆ. ಅಲ್ಲದೇ ಖುದ್ದು ಕುಮಾರಸ್ವಾಮಿ ಸ್ವರೂಪ್ ಬೆನ್ನಿಗೆ ನಿಂತಿದ್ದಾರೆ ಎಂಬುವುದು ಗಮನಿಸಬೇಕಾದ ವಿಚಾರ.
9/ 9
ಸದ್ಯ ಭಾನುವಾರದಂದು ನಡೆಯಲಿರುವ ಜೆಡಿಎಸ್ ಗಣ್ಯರ ಸಭೆಯಲ್ಲಿ ಈ ಗೊಂದಲಕ್ಕೆ ಒಂದು ಕೊನೆ ಸಿಗುವ ಸಾಧ್ಯತೆ ಇದೆ. ಈ ಸಭೆಯಲ್ಲೇ ಹಾಸನ ಕ್ಷೇತ್ರದಲ್ಲಿ ಟಿಕೆಟ್ ಯಾರಿಗೆ ಸಿಗಲಿದೆ ಎಂಬುವುದು ಅಂತಿಮಗೊಳ್ಳಲಿದೆ.
ಹೌದು ಹಾಸನ ಕ್ಷೇತ್ರದ ಜೆಡಿಎಸ್ ಟಿಕೆ ಟ್ ಗೊಂದಲ ಗೊಂದಲಕ್ಕೆ ತೆರೆ ಎಳೆಯಲು ಕುಮಾರಸ್ವಾಮಿ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಈ ನಿಟ್ಟಿನಲ್ಲಿ ಕುಮಾರಸ್ವಾಮಿ ಹಾಸನ ಕ್ಷೇತ್ರದ ಪ್ರಮುಖ ಕಾರ್ಯಕರ್ತರು,ಮುಖಂಡರ ಸಭೆ ಕರೆದಿದ್ದಾರೆ.
ಭಾನುವಾರ ಬೆಂಗಳೂರಿನಲ್ಲಿ ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆ ಬಗ್ಗೆ ಅಭಿಪ್ರಾಯ ಸಂಗ್ರಹ ನಡೆಯಲಿದೆ. ಹೀಗಿರುವಾಗ ಮಾಜಿ ಜಿಪಂ ಸದಸ್ಯರು, ತಾಪಂ ಮಾಜಿ ಸದಸ್ಯರು, ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ರಮುಖರ ಸಭೆ ಕರೆಯಲಾಗಿದೆ.
ಕುಮಾರಸ್ವಾಮಿ ಸುಮಾರು 300 ಜನ ಪ್ರಮುಖರ ಸಭೆ ಕರೆದಿದ್ದಾರೆ ಎನ್ನಲಾಗಿದೆ. ಇನ್ನು ಕುಮಾರಸ್ವಾಮಿ ಸದ್ಯ ಚಿಕ್ಕಮಗಳೂರಿನಲ್ಲಿ ನಡೆಯುತ್ತಿರೊ ಪಂಚರತ್ನ ಯಾತ್ರೆಯಲ್ಲಿದ್ದು, ಬಳಿಕ ಬೆಂಗಳೂರಿನ ಸಭೆಗೆ ಹಾಜರಾಲಿದ್ದಾರೆ.
ಸಭೆಯಲ್ಲಿ ಅಭ್ಯರ್ಥಿ ಯಾರಾದರೆ ಗೆಲುವು ಸುಲಭವಾಗಲಿದೆ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹ ನಡೆಯಲಿದೆ. ಎಲ್ಲಾ ಪ್ರಮುಖರ ಅಭಿಪ್ರಾಯ ಸಂಗ್ರಹಿಸಿ ಹಾಸನ ಟಿಕೆಟ್ ಬಗ್ಗೆ ತೀರ್ಮಾನ ಮಾಡಲು ತಂತ್ರ ರೂಪಿಸಿದ್ದಾರೆ ಕುಮಾರಸ್ವಾಮಿ.
ಇನ್ನೊಂದೆಡೆ ಕುಮಾರಸ್ವಾಮಿ ಹಾಸನ ಕ್ಷೇತ್ರದ ಬಗ್ಗೆ ಗೌಪ್ಯ ಸರ್ವೆ ಮಾಡಿಸಿ ವರದಿ ತರಿಸಿಕೊಂಡಿದ್ದಾರೆ. ಗೌಪ್ಯ ವರದಿ ಫಲಿತಾಂಶ ಹಾಗೂ ಪ್ರಮುಖರ ಅಭಿಪ್ರಾಯ ಎರಡನ್ನೂ ಆಧರಿಸಿ ಕುಮಾರಸ್ವಾಮಿ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ.
ಈವರೆಗೆ ಭವಾನಿ ರೇವಣ್ಣಗೆ ಟಿಕೆಟ್ ಬೇಡ ಎಂದೇ ಕುಮಾರಸ್ವಾಮಿ ಪಟ್ಟು ಹಿಡಿದಿದ್ದಾರೆ. ಆದರೂ ಅತ್ತ ರೇವಣ್ಣ ಹಾಗೂ ಫ್ಯಾಮಿಲಿ ಮಾತ್ರ ಇದೆಲ್ಲವನ್ನೂ ಗಣನೆಗೆ ತೆಗೆದುಕೊಳ್ಳದೇ ಕ್ಷೇತ್ರದಲ್ಲಿ ಪ್ರಚಾರ ಮುಂದುವರೆಸಿದ್ದಾರೆ.
ಅತ್ತ ಸ್ವರೂಪ್ ಕೂಡಾ ಹಾಸನ ಕ್ಷೇತ್ರದಲ್ಲಿ ತಾವೇ ಆಕಾಂಕ್ಷಿ ಎಂದು ಕ್ಷೇತ್ರದಲ್ಲಿ ಒಂದು ಸುತ್ತಿನ ಪ್ರಚಾರ ಮುಗಿಸಿದ್ದಾರೆ. ಅಲ್ಲದೇ ಖುದ್ದು ಕುಮಾರಸ್ವಾಮಿ ಸ್ವರೂಪ್ ಬೆನ್ನಿಗೆ ನಿಂತಿದ್ದಾರೆ ಎಂಬುವುದು ಗಮನಿಸಬೇಕಾದ ವಿಚಾರ.
ಸದ್ಯ ಭಾನುವಾರದಂದು ನಡೆಯಲಿರುವ ಜೆಡಿಎಸ್ ಗಣ್ಯರ ಸಭೆಯಲ್ಲಿ ಈ ಗೊಂದಲಕ್ಕೆ ಒಂದು ಕೊನೆ ಸಿಗುವ ಸಾಧ್ಯತೆ ಇದೆ. ಈ ಸಭೆಯಲ್ಲೇ ಹಾಸನ ಕ್ಷೇತ್ರದಲ್ಲಿ ಟಿಕೆಟ್ ಯಾರಿಗೆ ಸಿಗಲಿದೆ ಎಂಬುವುದು ಅಂತಿಮಗೊಳ್ಳಲಿದೆ.