ನಗರದ ವೈಟ್ ಫೀಲ್ಡ್, ಮಾರತ್ ಹಳ್ಳಿ, HAL, ರಾಮಮೂರ್ತಿ ನಗರ, ಕೃಷ್ಣರಾಜಪುರ ಸೇರಿದಂತೆ ಹಲವು ಭಾಗಗಳಲ್ಲಿ ಅರ್ಧ ಗಂಟೆ ಕಾಲ ಭರ್ಜರಿ ಮಳೆಯಾಗಿದ್ದು, ಏಕಾಏಕಿ ಮಳೆ ಆಗಮಿಸಿದ ಹಿನ್ನೆಲೆಯಲ್ಲಿ ಕೆಲಸ ಮುಗಿಸಿ ಮನೆಗೆ ಹೊರಟ್ಟಿದ್ದ ವಾಹನ ಸವಾರರು ಪರದಾಟ ನಡೆಸಿದರು. ಅಲ್ಲದೆ, ಮಳೆಯ ಕಾರಣ ನಗರದ ಹಲವು ಕಡೆ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿತ್ತು.