Karnataka Rains: ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ; ಏಕಾಏಕಿ ಸುರಿದ ಆಲಿಕಲ್ಲು ಮಳೆಗೆ ಜನಜೀವನ ಅಸ್ತವ್ಯಸ್ತ!

ಆಲ್ಲಿಕಲ್ಲು ಮಳೆಯಿಂದ ವಿವಿಧ ಜಿಲ್ಲೆಯ ರೈತರು ಸಮಸ್ಯೆ ಎದುರಿಸಿದ್ದು, ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟ ಎದುರಾಗಿದೆ.

  • News18 Kannada
  • |
  •   | Bangalore [Bangalore], India
First published:

  • 17

    Karnataka Rains: ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ; ಏಕಾಏಕಿ ಸುರಿದ ಆಲಿಕಲ್ಲು ಮಳೆಗೆ ಜನಜೀವನ ಅಸ್ತವ್ಯಸ್ತ!

    ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೇಸಿಗೆ ಮಳೆ ಮುಂದುವರೆದಿದ್ದು, ಇಂದು ಕಲಬುರಗಿಯಲ್ಲಿ ಗುಡುಗು-ಸಿಡಿಲು ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ.

    MORE
    GALLERIES

  • 27

    Karnataka Rains: ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ; ಏಕಾಏಕಿ ಸುರಿದ ಆಲಿಕಲ್ಲು ಮಳೆಗೆ ಜನಜೀವನ ಅಸ್ತವ್ಯಸ್ತ!

    ಕಲಬುರಗಿ ನಗರದ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಭರ್ಜರಿ ಮಳೆಯಾಗಿದ್ದು, ಏಕಾಏಕಿ ಸುರಿದ ಆಲಿಕಲ್ಲು ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಬಿಸಿಲಿನ ಬೇಗೆಯಿಂದ ಕಾದ ಹೆಂಚಿನಂತೆ ಆಗಿದ್ದ ಭೂಮಿಗೆ ವರುಣ ದೇವ ತಂಪೆರೆದಿದ್ದಾನೆ.

    MORE
    GALLERIES

  • 37

    Karnataka Rains: ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ; ಏಕಾಏಕಿ ಸುರಿದ ಆಲಿಕಲ್ಲು ಮಳೆಗೆ ಜನಜೀವನ ಅಸ್ತವ್ಯಸ್ತ!

    ರಾಯಚೂರು ಜಿಲ್ಲೆಯಲ್ಲಿ ಕೆಲವೆಡೆ ವರುಣಾಘಾತ ಎದುರಾಗಿದ್ದು, ದೇವದುರ್ಗ ತಾಲ್ಲೂಕಿನ ಅಗ್ರಹಾರ ಗ್ರಾಮದಲ್ಲಿ ಮಳೆಗೆ ಸಾವಿರಾರು ಕ್ವಿಂಟಲ್ ಭತ್ತ ಕೊಚ್ಚಿ ಹೋಗಿದೆ. ಅಲ್ಲದೆ, ಆಲಿಕಲ್ಲು ಮಳೆಗೆ ರಾಶಿ ಹಾಕಲಾಗಿದ್ದ ಭತ್ತ ನಾಶವಾಗಿದ್ದು, ಸುಮಾರು‌ 3 ಸಾವಿರಕ್ಕೂ ಹೆಚ್ಚು ಕ್ವಿಂಟಲ್ ಭತ್ತ ನಾಶವಾಗಿದೆ.

    MORE
    GALLERIES

  • 47

    Karnataka Rains: ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ; ಏಕಾಏಕಿ ಸುರಿದ ಆಲಿಕಲ್ಲು ಮಳೆಗೆ ಜನಜೀವನ ಅಸ್ತವ್ಯಸ್ತ!

    ಅಗ್ರಹಾರ ಗ್ರಾಮದ ರಾಜಾಸಾಬ್, ಅಜಿಸಾಬ್, ಹನುಮಂತ ರಾಯ, ಹುಸೇನಸಾಬ್ ಎಂಬ ರೈತರಿಗೆ ಸೇರಿದ ಭತ್ತ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಭತ್ತ ಕಟಾವು ಮಾಡಿ ಒಂದೇ ಕಡೆ ರಾಶಿ ಹಾಕಿದ್ದ ರೈತರಿಗೆ ಕೈಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಭಾರೀ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಿಂದ ಅಪಾರ ನಷ್ಟ ಎದುರಾಗಿದ್ದು, ಭತ್ತ ನಾಶವಾದರೂ ಇದುವರೆಗೂ ಅಧಿಕಾರಿಗಳು ಯಾರು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ.

    MORE
    GALLERIES

  • 57

    Karnataka Rains: ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ; ಏಕಾಏಕಿ ಸುರಿದ ಆಲಿಕಲ್ಲು ಮಳೆಗೆ ಜನಜೀವನ ಅಸ್ತವ್ಯಸ್ತ!

    ಇನ್ನು, ಇಂದು ಕಲಬುರ್ಗಿ ಜಿಲ್ಲೆಯಾದ್ಯಂತ ಭಾರೀ ಆಲಿಕಲ್ಲು ಮಳೆ ಹಿನ್ನೆಲೆಯಲ್ಲಿ ಕಲಬುರಗಿಗೆ ಪ್ರಯಾಣ ಬೆಳೆಸಿದ್ದ ಮಾಜಿ ಸಿಎಂ ಯಡಿಯೂರಪ್ಪ ಅವರು ಮರಳಿ ತಾಳಿಕೋಟೆಗೆ ವಾಪಸ್​ ಆಗಿದ್ದು, ರಸ್ತೆ ಮಾರ್ಗವಾಗಿ ಕಲಬುರಗಿಗೆ ಪ್ರಯಾಣ ಬೆಳೆಸಿದ್ದಾರೆ. ಬಿಜೆಪಿ ಅಭ್ಯರ್ಥಿ ಎ ಎಸ್ ಪಾಟೀಲ ನಡಹಳ್ಳಿ ಪರ ಬಿಎಸ್ ವೈ ಮತಯಾಚನೆ ತೆರಳಿದ್ದಾರೆ.

    MORE
    GALLERIES

  • 67

    Karnataka Rains: ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ; ಏಕಾಏಕಿ ಸುರಿದ ಆಲಿಕಲ್ಲು ಮಳೆಗೆ ಜನಜೀವನ ಅಸ್ತವ್ಯಸ್ತ!

    ಕಳೆದ 24 ಗಂಟೆ ಅವಧಿಯಲ್ಲಿ ಕಲಬುರಗಿ, ಯಾದಗಿರಿ, ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ನಾಳೆಯೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ತುಮಕೂರು, ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕರಾವಳಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

    MORE
    GALLERIES

  • 77

    Karnataka Rains: ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ; ಏಕಾಏಕಿ ಸುರಿದ ಆಲಿಕಲ್ಲು ಮಳೆಗೆ ಜನಜೀವನ ಅಸ್ತವ್ಯಸ್ತ!

    ಆಲ್ಲಿಕಲ್ಲು ಮಳೆಯಿಂದ ವಿವಿಧ ಜಿಲ್ಲೆಯ ರೈತರು ಸಮಸ್ಯೆ ಎದುರಿಸಿದ್ದು, ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟ ಎದುರಾಗಿದೆ. ಅಧಿಕಾರಿಗಳು ರೈತರ ಹೊಲಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದಿಂದ ಲಭ್ಯವಿರುವ ಪರಿಹಾರವನ್ನು ಕೊಡಿಸಬೇಕು ಎಂದು ಹಲವು ರೈತರು ಮನವಿ ಮಾಡಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES