Karnataka Election 2023: ಅಸಲಿ ಆಟ ಶುರು; ಇಂದು ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ

ಚುನಾವಣೆ ನಾಮಪತ್ರ ಸಲ್ಲಿಕೆಗೆ ಇನ್ನೊಂದೇ ದಿನ ಬಾಕಿ ಇದೆ. ಹೀಗಾಗಿ ಇಂದೇ ಮೂರೂ ಪಕ್ಷಗಳ ಘಟನಾನುಘಟಿ ನಾಯಕರುಗಳು ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.

First published:

  • 17

    Karnataka Election 2023: ಅಸಲಿ ಆಟ ಶುರು; ಇಂದು ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ

    ಬೆಂಗಳೂರು: ಇವತ್ತು ರಾಜ್ಯದ ಎಲೆಕ್ಷನ್ ಅಖಾಡದಲ್ಲಿ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿತ್ತು.ಮುಖ್ಯಮಂತ್ರಿಗಳ ಹಾದಿಯಾಗಿ ಘಟಾನುಘಟಿಗಳ ಉಮೇದುವಾರಿಕೆ ಭರ್ಜರಿಯಾಗಿತ್ತು.

    MORE
    GALLERIES

  • 27

    Karnataka Election 2023: ಅಸಲಿ ಆಟ ಶುರು; ಇಂದು ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ

    ಹಾವೇರಿಯ ಶಿಗ್ಗಾಂವಿ ಕ್ಷೇತ್ರ ಇವತ್ತು ರಂಗೇರಿತ್ತು. ಸಿಎಂ ಬಸವರಾಜ ಬೊಮ್ಮಾಯಿ ಬೃಹತ್ ರ್ಯಾಲಿಯಲ್ಲಿ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬೊಮ್ಮಾಯಿ ನಾಮಿನೇಷನ್​​ ಸಲ್ಲಿಸುವ ವೇಳೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ. ನಡ್ಡಾ ಸಾಥ್ ಕೊಟ್ಟಿದ್ದರು. ಸಮಾವೇಶದಲ್ಲಿ ಮಾತಾಡಿದ ಕಿಚ್ಚ ಸುದೀಪ್, ಬೊಮ್ಮಾಯಿ ಅವರಿಗೆ ಮತ್ತೊಂದು ಅವಕಾಶ ಕೊಡಿ ಅಂತ ಮನವಿ ಮಾಡಿದರು. ಅಲ್ಲದೇ ಮೋದಿ ಕೆಲಸಗಳನ್ನೂ ಹಾಡಿ ಹೊಗಳಿದ್ದಾರೆ.

    MORE
    GALLERIES

  • 37

    Karnataka Election 2023: ಅಸಲಿ ಆಟ ಶುರು; ಇಂದು ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ

    ರಾಜ್ಯದಲ್ಲೇ ಕುತೂಹಲ ಮೂಡಿಸಿರುವ ಕ್ಷೇತ್ರ ವರುಣಾ. ಕೋಲಾರ ಬದಲು ವರುಣಾ ಒಂದರಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸುತ್ತಿದ್ದಾರೆ. ಇವತ್ತು ಸಿದ್ದರಾಮಯ್ಯ ಕೂಡ ಭರ್ಜರಿ ರೋಡ್​​ ಶೋ ಮೂಲಕ ಬಂದು ನಂಜನಗೂಡಿನ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ ವೇಳೆ ಮೊಮ್ಮಗ ಧವನ್ ರಾಕೇಶ್ ಕೂಡ ಸಾಥ್ ನೀಡಿದ್ದು ವಿಶೇಷವಾಗಿತ್ತು.

    MORE
    GALLERIES

  • 47

    Karnataka Election 2023: ಅಸಲಿ ಆಟ ಶುರು; ಇಂದು ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ

    ಶಿಕಾರಿಪುರದಲ್ಲೂ ಬಿಎಸ್​ವೈ ಪುತ್ರ ವಿಜಯೇಂದ್ರ ಅಬ್ಬರ ಜೋರಾಗಿತ್ತು. ತಂದೆ ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಱಲಿಯಲ್ಲಿ ಬಂದ ವಿಜಯೇಂದ್ರ ಉಮೇದುವಾರಿಕೆ ಸಲ್ಲಿಸಿದ್ದರು. ಇದೇ ವೇಳೆ ಮಾತಾಡಿದ ವಿಜಯೇಂದ್ರ, ಎಲ್ಲಾ ಸಮುದಾಯಗಳನ್ನೂ ಪ್ರೀತಿಯಿಂದ ನೋಡಿಕೊಳ್ತೀನಿ ಎಂದರು.

    MORE
    GALLERIES

  • 57

    Karnataka Election 2023: ಅಸಲಿ ಆಟ ಶುರು; ಇಂದು ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ

    ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಹುಬ್ಬಳ್ಳಿ ಧಾರವಾಡ ಸೆಂಟ್ರಲ್​​​ನಿಂದ ಉಮೇದುವಾರಿಕೆ ಸಲ್ಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಕೂಡ ನಾಮಪತ್ರ ಸಲ್ಲಿಸಿದ್ದಾರೆ.

    MORE
    GALLERIES

  • 67

    Karnataka Election 2023: ಅಸಲಿ ಆಟ ಶುರು; ಇಂದು ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ

    ಉಳಿದಂತೆ ರಾಜ್ಯದ ನಾನಾ ಕ್ಷೇತ್ರಗಳಲ್ಲೂ ಘಟಾನುಘಟಿಗಳು ನಾಮಪತ್ರ ಸಲ್ಲಿಸಿದ್ದಾರೆ. ಚಾಮರಾಜನಗರದಲ್ಲಿ ಎನ್.ಮಹೇಶ್, ಪುಲಿಕೇಶಿನಗರದಲ್ಲಿ ಅಖಂಡ ಶ್ರೀನಿವಾಸಮೂರ್ತಿ ಸೇರಿ ಹಲವು ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ.

    MORE
    GALLERIES

  • 77

    Karnataka Election 2023: ಅಸಲಿ ಆಟ ಶುರು; ಇಂದು ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ

    ದೇವನಹಳ್ಳಿಯಲ್ಲಿ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿ ಬಿ.ಕೆ. ಶಿವಪ್ಪ ಕುದುರೆ ಏರಿ ಬಂದು ನಾಮ ಪತ್ರ ಸಲ್ಲಿಸಿದ್ದು ವಿಶೇಷ. ಕೊರಟಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಪರಮೇಶ್ವರ್ ನಾಮಪತ್ರ ಸಲ್ಲಿಸಿದ್ದಾರೆ. ಬೃಹತ್ ಮೆರವಣಿಗೆಯಲ್ಲಿ ಬಂದು ಉಮೇದುವಾರಿಕೆ ಸಲ್ಲಿಸಿದ್ದಾರೆ.

    MORE
    GALLERIES