ಕರ್ನಾಟಕ ವಿಧಾನಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ತೆಗೆದುಕೊಂಡಿರುವ ನಳಿನ್ ಕುಮಾರ್ ಕಟೀಲ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
2/ 8
ನಿನ್ನೆ ಫಲಿತಾಂಶದ ಬಳಿಕ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಪಕ್ಷದ ರಾಜ್ಯಾಧ್ಯಕ್ಷನಾಗಿ ನಾನೇ ಸೋಲಿನ ಹೊಣೆಯನ್ನು ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದರು.
3/ 8
ಸೋಲಿನ ಹೊಣೆ ಹೊತ್ತು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ನಾಳೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳಿವೆ.
4/ 8
ಇನ್ನು ಚುನಾವಣೆಯಲ್ಲಿ ಬಹುಮತ ಸಿಗದೇ ಹಿನ್ನೆಲೆ ಶನಿವಾರವೇ ರಾಜ್ಯಪಾಲರನ್ನು ಭೇಟಿಯಾದ ಬಸವರಾಜ ಬೊಮ್ಮಾಯಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
5/ 8
ಮತದಾರರು ನೀಡಿರುವ ತೀರ್ಪನ್ನು ಒಪ್ಪಿಕೊಳ್ಳುವೆ. ಇದರ ಸಂಪೂರ್ಣ ಸೋಲನ್ನು ನಾನೇ ಹೊರುತ್ತೇನೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದರು.
6/ 8
ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸೋಲು ಗೆಲುವು ಬಿಜೆಪಿಗೆ ಹೊಸದೇನು ಅಲ್ಲ. ಲೋಕಸಭೆ ಚುನಾವಣೆಗೂ ಈ ಚುನಾವಣೆ ಫಲಿತಾಂಶಕ್ಕೆ ಏನು ಸಂಬಂಧ ಇಲ್ಲ ಎಂದು ಹೇಳಿದ್ದರು.
7/ 8
224 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135, ಬಿಜೆಪಿ 65, ಜೆಡಿಎಸ್ 19 ಮತ್ತು ಇತರರು 4 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದಾರೆ.
8/ 8
ಬಿಜೆಪಿ ಸರ್ಕಾರದ ಸಂಪುಟದಲ್ಲಿದ್ದ 12 ಸಚಿವರು ಈ ಚುನಾವಣೆಯಲ್ಲಿ ಸೋತಿದ್ದಾರೆ. ಸಿಎಂ ತವರು ಜಿಲ್ಲೆಯಲ್ಲಿ ಕಾಂಗ್ರೆಸ್ ಅಬ್ಬರಿಸಿದೆ.
First published:
18
Karnataka Election Results 2023: ಸೋಲಿನ ನೈತಿಕ ಹೊಣೆ; ರಾಜೀನಾಮೆಗೆ ಮುಂದಾದ ಕಟೀಲ್
ಕರ್ನಾಟಕ ವಿಧಾನಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ತೆಗೆದುಕೊಂಡಿರುವ ನಳಿನ್ ಕುಮಾರ್ ಕಟೀಲ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
Karnataka Election Results 2023: ಸೋಲಿನ ನೈತಿಕ ಹೊಣೆ; ರಾಜೀನಾಮೆಗೆ ಮುಂದಾದ ಕಟೀಲ್
ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸೋಲು ಗೆಲುವು ಬಿಜೆಪಿಗೆ ಹೊಸದೇನು ಅಲ್ಲ. ಲೋಕಸಭೆ ಚುನಾವಣೆಗೂ ಈ ಚುನಾವಣೆ ಫಲಿತಾಂಶಕ್ಕೆ ಏನು ಸಂಬಂಧ ಇಲ್ಲ ಎಂದು ಹೇಳಿದ್ದರು.