Election Result 2023: ಮನೆಯಲ್ಲಿ ಸಾವು; ದುಃಖದ ನಡುವೆಯೂ ಮತ ಎಣಿಕಾ ಕೇಂದ್ರಕ್ಕೆ ಬಂದ ಕಾಂಗ್ರೆಸ್ ಅಭ್ಯರ್ಥಿ
ಮನೆಯಲ್ಲಿ ಸಾವು ಆಗಿದ್ದರೂ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ್ ಇಂದು ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದಾರೆ.
1/ 7
ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ರಾಜಾ ವೆಂಕಟಪ್ಪ ನಾಯಕ್ ಅವರ ಸೋದರ ಪುತ್ರ ಶುಕ್ರವಾರ ನಿಧನರಾಗಿದ್ದಾರೆ.
2/ 7
ಇಂದು ಸಂಜೆ ಸೋದರ ಪುತ್ರ ರೂಪಕುಮಾರ್ ಅಂತ್ಯಕ್ರಿಯೆ ನಡೆಯಲಿದೆ. ಮನೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ.
3/ 7
ದುಃಖದ ನಡುವೆಯೂ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿ ಕಾರ್ಯಕರ್ತರನ್ನು ಹುರಿದುಂಬಿಸುತ್ತಿದ್ದಾರೆ.
4/ 7
ಸುರಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಹಾಲಿ ಶಾಸಕ ರಾಜುಗೌಡ ಕಣದಲ್ಲಿದ್ದಾರೆ. ರಾಜುಗೌಡ ಪರವಾಗಿ ನಟ ಸುದೀಪ್ ಪ್ರಚಾರ ನಡೆಸಿದ್ದರು.
5/ 7
ಇನ್ನು ಚುನಾವಣೆ ಘೋಷಣೆಯಾದ ದಿನದಿಂದಲೂ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
6/ 7
ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಕಲ್ಲು ತೂರಾಟ ಸಹ ನಡೆದಿತ್ತು. ಈ ಸಂಬಂಧ ಪ್ರಕರಣ ಸಹ ದಾಖಲಾಗಿತ್ತು.
7/ 7
ಸದ್ಯ ಮತ ಎಣಿಕೆ ಆರಂಭಗೊಂಡಿದ್ದು, ರಾಜಾ ವೆಂಕಟಪ್ಪ ನಾಯಕ್ ಮುನ್ನಡೆ ಕಾಯ್ದು ಕೊಂಡಿದ್ದಾರೆ.
First published: