Karnataka Rains: ಭಾರೀ ಮಳೆಗೆ ಆಟೋ ಮೇಲೆ ಉರುಳಿ ಬಿದ್ದ ಮರ; ಸ್ಥಳದಲ್ಲೇ ದಂಪತಿ ಸಾವು

ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗಿದ್ದು, ಇಂದು ರಾತ್ರಿ ಕೆಲ ಪ್ರದೇಶಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಮೇ 15ರವರೆಗೆ ಸಾಮಾನ್ಯ ಮಳೆಯ ನಿರೀಕ್ಷೆ ಇದೆ.

  • News18 Kannada
  • |
  •   | Bangalore [Bangalore], India
First published:

  • 17

    Karnataka Rains: ಭಾರೀ ಮಳೆಗೆ ಆಟೋ ಮೇಲೆ ಉರುಳಿ ಬಿದ್ದ ಮರ; ಸ್ಥಳದಲ್ಲೇ ದಂಪತಿ ಸಾವು

    ಉಡುಪಿ: ಜಿಲ್ಲೆಯಲ್ಲಿ ಏಕಾಏಕಿ ಆರಂಭವಾದ ಬಿರುಗಾಳಿ ಮಳೆಗೆ ಇಬ್ಬರು ಸಾವನ್ನಪ್ಪಿದ್ದಾರೆ. ಉಡುಪಿ ಜಿಲ್ಲೆ ಕಾಪು ತಾಲೂಕಿನ‌ ಮಜೂರು ಮಸೀದಿ ಬಳಿ ನಡೆದ ಘಟನೆ ನಡೆದಿದ್ದು, ಚಲಿಸುತ್ತಿದ್ದ ರಿಕ್ಷಾ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ ಅಡಿ ಸಿಲುಕಿ ಸಾವು ಸಂಭವಿಸಿದೆ.

    MORE
    GALLERIES

  • 27

    Karnataka Rains: ಭಾರೀ ಮಳೆಗೆ ಆಟೋ ಮೇಲೆ ಉರುಳಿ ಬಿದ್ದ ಮರ; ಸ್ಥಳದಲ್ಲೇ ದಂಪತಿ ಸಾವು

    ರಿಕ್ಷಾದೊಳಗಿದ್ದ ದಂಪತಿಗಳು ಸಾವನ್ನಪ್ಪಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಶಿರ್ವದಿಂದ ಕಾಪು ಕಡೆ ಸಂಚರಿಸುತ್ತಿದ್ದ ರಿಕ್ಷಾ ಮೇಲೆ ಮರ ಉರುಳಿ ಬಿದ್ದಿದ್ದು, ಪೊಲೀಸರ ನೆರವಿನೊಂದಿಗೆ ಸ್ಥಳೀಯರು ಮರ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ಮೃತರ ವಿವರ ಸಂಗ್ರಹಿಸುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Karnataka Rains: ಭಾರೀ ಮಳೆಗೆ ಆಟೋ ಮೇಲೆ ಉರುಳಿ ಬಿದ್ದ ಮರ; ಸ್ಥಳದಲ್ಲೇ ದಂಪತಿ ಸಾವು

    ದಾವಣಗೆರೆ ಸುರಿದ ಬಿರುಗಾಳಿ ಸಹಿತ ಸುರಿದ ಮಳೆಗೆ ಭತ್ತದ ಬೆಳೆ ಸಂಪೂರ್ಣ ನೆಲ ಕಚ್ಚಿದೆ. ದಾವಣಗೆರೆಯ ಜಿಲ್ಲೆಯ ಕಕ್ಕರಗೋಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಬೇಸಿಗೆ ಬೆಳೆಯಾಗಿ ಭತ್ತ ಬೆಳೆದಿದ್ದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

    MORE
    GALLERIES

  • 47

    Karnataka Rains: ಭಾರೀ ಮಳೆಗೆ ಆಟೋ ಮೇಲೆ ಉರುಳಿ ಬಿದ್ದ ಮರ; ಸ್ಥಳದಲ್ಲೇ ದಂಪತಿ ಸಾವು

    ಗ್ರಾಮದಲ್ಲಿ ಸುಮಾರು 10 ಸಾವಿರ ಎರಕೆಗೂ ಅಧಿಕ ಎಕರೆ ಭತ್ತ ನೆಲಕಚ್ಚಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ರೈತರು ಕಂಗಾಲಾಗಿದ್ದಾರೆ. ಪ್ರತಿ ಎಕ್ಕರೆಗೆ ಸುಮಾರು 25 ರಿಂದ 30 ಸಾವಿರ ಖರ್ಚು ಮಾಡಿದ್ದ ರೈತರಿಗೆ ಭಾರೀ ನಷ್ಟ ಎದುರಾಗಿದೆ.

    MORE
    GALLERIES

  • 57

    Karnataka Rains: ಭಾರೀ ಮಳೆಗೆ ಆಟೋ ಮೇಲೆ ಉರುಳಿ ಬಿದ್ದ ಮರ; ಸ್ಥಳದಲ್ಲೇ ದಂಪತಿ ಸಾವು

    ಇನ್ನೂ, ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗಿದ್ದು, ಇಂದು ರಾತ್ರಿ ಕೆಲ ಪ್ರದೇಶಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಮೇ 15ರವರೆಗೆ ಸಾಮಾನ್ಯ ಮಳೆಯ ನಿರೀಕ್ಷೆ ಇದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Karnataka Rains: ಭಾರೀ ಮಳೆಗೆ ಆಟೋ ಮೇಲೆ ಉರುಳಿ ಬಿದ್ದ ಮರ; ಸ್ಥಳದಲ್ಲೇ ದಂಪತಿ ಸಾವು

    ಉಳಿದಂತೆ ಶುಕ್ರವಾರದಿಂದ ಮೇ 15ರವರೆಗೆ ಮಳೆ ಪ್ರಮಾಣ ಕಡಿಮೆ ಇದ್ದು, ಕೇವಲ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆ ಸಾಧ್ಯತೆ ಇದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Karnataka Rains: ಭಾರೀ ಮಳೆಗೆ ಆಟೋ ಮೇಲೆ ಉರುಳಿ ಬಿದ್ದ ಮರ; ಸ್ಥಳದಲ್ಲೇ ದಂಪತಿ ಸಾವು

    ಮೇ 16ರಿಂದ ಮತ್ತೆ ನಗರದಲ್ಲಿ ಹೆಚ್ಚು ಬಿಸಿಲಿನ ವಾತಾವರಣ ಕಂಡು ಬರುವ ಸಾಧ್ಯತೆ ಇದೆ. ನಗರದಲ್ಲಿ ಇಂದು ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES