16-12-2021ರಂದು ನಡೆಯುವ ಹನುಮ ಮಾಲಾ ವಿಸರ್ಜನಾ ಕಾರ್ಯಕ್ರಮ ನಡೆಯಲಿದ್ದು, ಸದರಿ ಕಾರ್ಯಕ್ರಮದಲ್ಲಿ ಬೇರೆ ಬೇರೆ ಜಿಲ್ಲೆಗಳಿಂದ ಸುಮಾರು 30 ರಿಂದ 40 ಸಾವಿರ ವರೆಗೆ ಮಾಲಾಧಾರಿಗಳು ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆ ಅಂಜನಾದ್ರಿ ಬೆಟ್ಟದಲ್ಲಿ ಪವಮಾನ ಹೋಮಕ್ಕೆ ಅರ್ಚಕರ ವ್ಯವಸ್ಥೆ ಹಾಗೂ ಇತರೆ ಮೂಲಭೂತ ಸೌಕರ್ಯ, ಪಾರ್ಕಿಂಗ್ ಹಾಗೂ ಗಂಗಾವತಿ ನಗರದಿಂದ ಹೊರಡುವ ಸಂಕೀರ್ತನಾ ಯಾತ್ರೆಗೆ ಭದ್ರತೆ ನೀಡುವಂತೆ ಕೋರಿ ಜಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಲಾಗಿತ್ತು.