PHOTOS: ಬಿಎಸ್​ವೈ, ಎಸ್​ಎಂ ಕೃಷ್ಣ ಭೇಟಿ ಮಾಡಿದ ಸುಮಲತಾ; ಬಿಜೆಪಿ ಸೇರಲ್ಲ ಎಂದು ಸ್ಪಷ್ಟನೆ

  • News18
  • |
First published:

  • 15

    PHOTOS: ಬಿಎಸ್​ವೈ, ಎಸ್​ಎಂ ಕೃಷ್ಣ ಭೇಟಿ ಮಾಡಿದ ಸುಮಲತಾ; ಬಿಜೆಪಿ ಸೇರಲ್ಲ ಎಂದು ಸ್ಪಷ್ಟನೆ

    ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಬಳಿಕ ಸುಮಲತಾ ಅಂಬರೀಶ್​ ಇದೇ ಮೊದಲ ಬಾರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್​ ಯಡಿಯೂರಪ್ಪ ಹಾಗೂ ಹಿರಿಯ ನಾಯಕ ಎಸ್​ಎಂ ಕೃಷ್ಣ ಅವರನ್ನು ಭೇಟಿ ಮಾಡಿದ್ದಾರೆ.

    MORE
    GALLERIES

  • 25

    PHOTOS: ಬಿಎಸ್​ವೈ, ಎಸ್​ಎಂ ಕೃಷ್ಣ ಭೇಟಿ ಮಾಡಿದ ಸುಮಲತಾ; ಬಿಜೆಪಿ ಸೇರಲ್ಲ ಎಂದು ಸ್ಪಷ್ಟನೆ

    ಈ ವೇಳೆ ಬಿಜೆಪಿ ಸೇರುವುದಿಲ್ಲ ಎನ್ನುವ ಸ್ಪಷ್ಟನೆಯನ್ನು ನೀಡಿದ ಸುಮಲತಾ, “ಪಕ್ಷೇತರ ಅಭ್ಯರ್ಥಿ ಯಾವುದೇ ಪಕ್ಷ ಸೇರುವ ಅವಕಾಶ ನಮ್ಮ ಕಾನೂನಿನಲ್ಲಿ ಇಲ್ಲ. ಹಾಗಾಗಿ ನಾನು ಯಾವುದಾದರೂ ಒಂದು ಪಕ್ಷಕ್ಕೆ ಬೆಂಬಲ ನೀಡಬಹುದಷ್ಟೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ನನ್ನ ಪರ ನಿಂತಿತ್ತು. ಅವರಿಗೆ ಧನ್ಯವಾದ" ಎಂದರು.

    MORE
    GALLERIES

  • 35

    PHOTOS: ಬಿಎಸ್​ವೈ, ಎಸ್​ಎಂ ಕೃಷ್ಣ ಭೇಟಿ ಮಾಡಿದ ಸುಮಲತಾ; ಬಿಜೆಪಿ ಸೇರಲ್ಲ ಎಂದು ಸ್ಪಷ್ಟನೆ

    "ಮಂಡ್ಯ ಜನರ ಅಭಿಪ್ರಾಯ ಸಂಗ್ರಹ ಮಾಡುತ್ತೇನೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ" ಎಂದು ಸುಮಲತಾ ಹೇಳಿದ್ದಾರೆ. ಈ ಮೂಲಕ ಸುಮಲತಾ ಬಿಜೆಪಿ ಸೇರಲಿದ್ದಾರೆ ಎನ್ನುವ  ಊಹಾಪೋಹಗಳಿಗೆ ಅವರು ತೆರೆ ಎಳೆದಿದ್ದಾರೆ.

    MORE
    GALLERIES

  • 45

    PHOTOS: ಬಿಎಸ್​ವೈ, ಎಸ್​ಎಂ ಕೃಷ್ಣ ಭೇಟಿ ಮಾಡಿದ ಸುಮಲತಾ; ಬಿಜೆಪಿ ಸೇರಲ್ಲ ಎಂದು ಸ್ಪಷ್ಟನೆ

    ಇದೇ ವೇಳೆ ಸುಮಲತಾ ಬಿಜೆಪಿಗೆ ಧನ್ಯವಾದ ಹೇಳಿದ್ದಾರೆ. "ಸುನಾಮಿ ರೀತಿ ರಾಷ್ಟ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ನಾನು ವೈಯಕ್ತಿಕವಾಗಿ ಬಿಜೆಪಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ" ಎಂದರು.

    MORE
    GALLERIES

  • 55

    PHOTOS: ಬಿಎಸ್​ವೈ, ಎಸ್​ಎಂ ಕೃಷ್ಣ ಭೇಟಿ ಮಾಡಿದ ಸುಮಲತಾ; ಬಿಜೆಪಿ ಸೇರಲ್ಲ ಎಂದು ಸ್ಪಷ್ಟನೆ

    "ನನ್ನ ಗೆಲುವು ಒಂದು ರೀತಿ ಇತಿಹಾಸ. ಮಂಡ್ಯದ ಜನ ಇತಿಹಾಸ ಸೃಷ್ಟಿಸಿದ್ದಾರೆ. ಎಲ್ಲಾ ಪಕ್ಷದವರು ನನ್ನ ಕೈಜೋಡಿಸಿದ್ದಾರೆ. ಅವರೆಲ್ಲರಿಗೂ ಧನ್ಯವಾದ," ಎಂದು ಸುಮಲತಾ ಹೇಳಿದರು.

    MORE
    GALLERIES