ಅತಿಯಾದ ಓಲೈಕೆ ಒಳ್ಳೆದಲ್ಲ; ಸಿದ್ದರಾಮಯ್ಯ ವಿರುದ್ಧ MP Renukacharya ಕಿಡಿ
ಕಾಮಾಲೆ ಕಣ್ಣಿಗೆ ಕಾಣುವುದೆಲ್ಲವೂ ಹಳದಿ ಎಂಬಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಆಲ್ ಖೈದಾ ಉಗ್ರಗಾಮಿ ಸಂಘಟನೆ ಹಾಗೂ ಮುಖ್ಯಸ್ಥ ಆಯ್ಯನ್ ಜವಾಹಾರಿ ಮುಂದೊಂದು ದಿನ ವೀರ ಸ್ವತಂತ್ರ ಹೋರಾಟಗಾರರಾಗಿ ಕಂಡರೂ ಅಚ್ಚರಿಯಿಲ್ಲ ಎಂದು ಹರಿಹಾಯ್ದಿದ್ದಾರೆ.
ಮುಸ್ಕಾನ್ ಹೊಗಳಿ ಅಲ್ಖೈದಾ ಉಗ್ರನ ಕುರಿತು ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಇಂತಹದ್ದನ್ನೆಲ್ಲಾ ಬಿಜೆಪಿಯವರೇ ಹುಟ್ಟುಹಾಕುವುದು. ಎಲ್ರೀ ಉಗ್ರ? ಆರ್ಎಸ್ಎಸ್ನವರೇ ಇಂತಹ ವಿಡಿಯೋಗಳನ್ನುಕಳುಹಿಸುವುದು. ಈ ಬಗ್ಗೆ ತನಿಖೆ ಆಗಬೇಕು. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ ಎಂದು ಆಗ್ರಹಿಸಿದ್ದರು.
2/ 8
ಕಾಂಗ್ರೆಸ್ ನಾಯಕ ಮಾತಿಗೆ ಇಂದು ಟ್ವೀಟ್ ಮೂಲಕ ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ.
3/ 8
ಕಾಮಾಲೆ ಕಣ್ಣಿಗೆ ಕಾಣುವುದೆಲ್ಲವೂ ಹಳದಿ ಎಂಬಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಆಲ್ ಖೈದಾ ಉಗ್ರಗಾಮಿ ಸಂಘಟನೆ ಹಾಗೂ ಮುಖ್ಯಸ್ಥ ಆಯ್ಯನ್ ಜವಾಹಾರಿ ಮುಂದೊಂದು ದಿನ ವೀರ ಸ್ವತಂತ್ರ ಹೋರಾಟಗಾರರಾಗಿ ಕಂಡರೂ ಅಚ್ಚರಿಯಿಲ್ಲ ಎಂದು ಹರಿಹಾಯ್ದಿದ್ದಾರೆ.
4/ 8
ಕಾಂಗ್ರೆಸ್ ಪಕ್ಷ ಇಂತಹ ಸೈತನಾರನ್ನೇ ಪೋಷಿಸಿಕೊಂಡು ಬಂದಿರುವುದಕ್ಕೆ ಇತಿಹಾಸವೇ ಸಾಕ್ಷಿಯಾಗಿದೆ. ನಿಮ್ಮ ಇಂತಹ ಹೇಳಿಕೆಯಲ್ಲಿ ನಮಗೆ ಹೊಸದೇನು ಕಾಣುತ್ತಿಲ್ಲ.
5/ 8
ಅತಿಯಾದ ಓಲೈಕೆಯ ಪರಿಣಾಮ 2018 ರ ಚುನಾವಣೆಯಲ್ಲಿ ನಿಮ್ಮ ಪಕ್ಷದ ಸ್ಥಿತಿ ಏನಾಯಿತು ಎಂಬುದನ್ನು ಆತ್ಮವಲೋಕನ ಮಾಡಿಕೊಳ್ಳಿ ಎಂದು ತಿರುಗೇಟು ನೀಡಿದ್ದಾರೆ.
6/ 8
ಅಲ್ಲದೇ, ಇದು ಆರ್ ಎಸ್ ಎಸ್ ಸೃಷ್ಟಿ ಎನ್ನುವ ನಿಮಗೆ ಆತ್ಮಸಾಕ್ಷಿ ಎಂಬುದಿದ್ದರೆ. ಅಲ್ಖೈದಾದ ಮುಖವಾಣಿ ಅಸ್-ಸಾಹಬ್ ಎಂಬ ಸಾಮಾಜಿಕ ಜಾಲತಾಣದಲ್ಲಿ ಅಮನ್-ಅಲ್-ಜವಾಹಿರಿಯ ಮಾತನಾಡಿರುವ ವಿಡಿಯೋ ಒಂದು ಬಾರಿ ನೋಡಿ ನಂತರ ಸಂಘಪರಿವಾರದ ಬಗ್ಗೆ ಮಾತನಾಡಿ ಎಂದು ಸವಾಲ್ ಹಾಕಿದ್ದಾರೆ.
7/ 8
ಅಲ್ಪಸಂಖ್ಯಾತರ ಓಲೈಕೆಗಾಗಿ ಇನ್ನು ಎಷ್ಟು ದಿನ ಇಂತಹ ಹಸಿ-ಬಿಸಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತೀರಿ? ನೀವು ಹೇಳಿದ್ದನ್ನೆಲ್ಲಾ ಒಪ್ಪಲು ಕರ್ನಾಟಕದ ಜನ ಕಿವಿಮೇಲೆ ಲಾಲ್ ಬಾಗ್ ಹೂವು ಇಟ್ಟುಕೊಂಡಿದ್ದಾರೆ ಎಂದು ಭಾವಿಸಿದ್ದೀರಾ ಎಂದು ಪ್ರಶ್ನಿಸಿದ್ದಾರೆ.
8/ 8
ಇದೇ ವೇಳೆ ಎಷ್ಟೇ ಆಗಲಿ ಮೀನು ತಿಂದು ಧರ್ಮಸ್ಥಳಕ್ಕೆ ಹೋಗಿ ಬಂದವರು ನೀವು. 2018 ರ ಚುನಾವಣೆಯಲ್ಲಿ ಆದ ಗತಿಯೇ 2023 ರ ಚುನಾವಣೆ ಯಲ್ಲಿ ಆಗುತ್ತದೆ. ನಿಮ್ಮ ತುಷ್ಟೀಕರಣಕ್ಕೆ ಜನತೆ ತಕ್ಕ ಪಾಠ ಕಲಿಸುವುದರಲ್ಲಿ ಸಂದೇಹವೇ ಬೇಡ. ಕಾದು ನೋಡಿ ಎಂದರು.