ಮೈಸೂರು ಯುವ ದಸರಾ ಉದ್ಘಾಟನೆ ಬ್ಯಾಡ್ಮಿಂಟನ್ ತಾರೆ ಪಿ ವಿ ಸಿಂಧುಗೆ ಅಧಿಕೃತ ಆಹ್ವಾನ
ಈ ಬಾರಿಯ ಮೈಸೂರು ಯುವ ದಸರಾ ಮಹೋತ್ಸವಕ್ಕೆ ಬ್ಯಾಡ್ಮಿಂಟನ್ ತಾರೆ ವಿಶ್ವಚಾಂಪಿಯನ್ ಪಿ.ವಿ. ಸಿಂಧು ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಹೈದರಾಬಾದ್ ನಲ್ಲಿರುವ ಅವರ ನಿವಾಸದಲ್ಲಿ ಸದಸ್ಯ ಪ್ರತಾಪ್ ಸಿಂಹ ಕಾರ್ಯಕ್ರಮ ಉದ್ಘಾಟಿಸಲು ಆಗಮಿಸುವಂತೆ ಸಿಂಧು ಅವರನ್ನು ಅಧಿಕೃತವಾಗಿ ಆಹ್ವಾನಿಸಿದರು. ಅಕ್ಟೋಬರ್ 1ರಂದು ಯುವ ದಸರಾ ಪ್ರಾರಂಭಗೊಳ್ಳಲಿದೆ. ಇದನ್ನು ಉದ್ಘಾಟಿಸಲು ಬರುವಂತೆ ಕೋರಿ ಸಿಎಂ ಬಿ.ಎಸ್. ಯಡಿಯೂರಪ್ಪ ನಾಲ್ಕು ದಿನಗಳ ಹಿಂದೆ ಪತ್ರ ಬರೆದಿದ್ದರು. ಸಂಸದ ಪ್ರತಾಪ್ ಸಿಂಹ ಹಾಗೂ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಷ್ಯಂತ್ ಒಟ್ಟಾಗಿ ಸಿಂಧು ಅವರನ್ನು ಭೇಟಿಯಾಗಿ ಹೂಗುಚ್ಛ ನೀಡಿ ಆಹ್ವಾನಿಸಿದ್ದಾರೆ.