Honnali: ಆಂಬುಲೆನ್ಸ್ನಲ್ಲಿ ಆಕ್ಸಿಜನ್ ಕೊರತೆ: ನವಜಾತ ಗಂಡು ಶಿಶು ಸಾವು
ಘಟನೆಗೆ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸಂಬಂಧಿಕರು ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ಮಾಡಿದರು. ಸ್ಥಳಕ್ಕೆ ಬಸವಪಟ್ಟಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಂಬುಲೆನ್ಸ್ ನಲ್ಲಿ ಅಕ್ಸಿಜನ್ ಇಲ್ಲದ ಹಿನ್ನಲೆ ನವಜಾತ ಗಂಡು ಶಿಶುವೊಂದು ಉಸಿರಾಟ ಸಮಸ್ಯೆಗೆ ಒಳಗಾಗಿ ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಪಟ್ಟಣ ಗ್ರಾಮದಲ್ಲಿ ನಡೆದಿದೆ. (ಸಾಂದರ್ಭಿಕ ಚಿತ್ರ)
2/ 8
ಶೃಂಗಾರಬಾಬು ತಾಂಡ ದ ಹಾಲೇಶ್ ನಾಯ್ಕ್, ಸ್ವಾತಿ ದಂಪತಿಗಳ ಮೊದಲನೇ ಮಗು ಹುಟ್ಟಿದ ಕೆಲವೇ ಗಂಟೆಗಳಲ್ಲಿ ಆಮ್ಲಜನಕ ಕೊರತೆಯಿಂದಾಗಿ ಅಸುನೀಗಿದೆ. (ಸಾಂದರ್ಭಿಕ ಚಿತ್ರ)
3/ 8
ತುಂಬು ಗರ್ಭಿಣಿ ಸ್ವಾತಿಗೆ ಕಳೆದ ರಾತ್ರಿ 2 ಗಂಟೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನಲೆ ಬಸವಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. (ಸಾಂದರ್ಭಿಕ ಚಿತ್ರ)
4/ 8
ಇಂದು ಬೆಳಗ್ಗೆ 7 ಗಂಟೆಗೆ ಸ್ವಾತಿಗೆ ಹೆರಿಗೆಯಾಗಿದ್ದು, ಗಂಡು ಮಗು ಜನಿಸಿತು. ಈ ವೇಳೆ ಮಗುವಿಗೆ ಉಸಿರಾಟದ ತೊಂದರೆ ಇದೆ. ಹೆಚ್ಚಿನ ಚಿಕಿತ್ಸೆ ಗೆ ಹೊನ್ನಾಳಿ ಗೆ ಕರೆದೊಯ್ಯಲು ವೈದ್ಯರು ಸೂಚಿಸಿದ್ದರು. (ಸಾಂದರ್ಭಿಕ ಚಿತ್ರ)
5/ 8
ಈ ವೇಳೆ ಅಂಬುಲೆನ್ಸ್ ನಲ್ಲಿ ಅಕ್ಸಿಜನ್ ಇಲ್ಲ, ಬೇರೊಂದು ಅಂಬುಲೆನ್ಸ್ ದಾರಿ ಮಧ್ಯೆ ಬರುತ್ತದೆ ಎಂದು ಕರೆದೊಯ್ದು ಅಂಬುಲೆನ್ಸ್ ಚಾಲಕ ಮಗುವನ್ನು ಕರೆದುಕೊಂಡು ಹೋಗಿದ್ದಾರೆ. (ಸಾಂದರ್ಭಿಕ ಚಿತ್ರ)
6/ 8
ಆದರೆ, ಮಗು ಉಸಿರಾಟ ತೊಂದರೆಯಿಂದಾಗಿ ಆಕ್ಸಿಜನ್ ಸಿಗದೇ ಹೊನ್ನಾಳಿ ಗೆ ಹೋಗುವುದರೊಳಗೆ ಸಾವನ್ನಪ್ಪಿದೆ. (ಸಾಂದರ್ಭಿಕ ಚಿತ್ರ)
7/ 8
ಘಟನೆಗೆ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸಂಬಂಧಿಕರು ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ಮಾಡಿದರು. ಸ್ಥಳಕ್ಕೆ ಬಸವಪಟ್ಟಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ಸಾಂದರ್ಭಿಕ ಚಿತ್ರ)
8/ 8
ಮೊದಲ ಮಗುವನ್ನು ಕಳೆದುಕೊಂಡ ಪೋಷಕರ ದುಃಖ ಮುಗಿಲು ಮಟ್ಟಿದ್ದು, ಘಟನೆ ಸಂಬಂಧ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ (ಸಾಂದರ್ಭಿಕ ಚಿತ್ರ)