Karnataka Rains: ಇಂದಿನಿಂದ ಮತ್ತೆ ನಾಲ್ಕು ದಿನ ಮಳೆ; ನಿಮ್ಮ ಭಾಗದಲ್ಲಿ ಮಳೆಯಾಗುತ್ತಾ? ಇಲ್ಲಿದೆ ಮಾಹಿತಿ

ಇಂದು ಸಂಜೆ ವೇಳೆಗೆ ಚಿಕ್ಕಮಗಳೂರು, ಹಾವೇರಿ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದ್ದು, ಸಿಎಂ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಾರ್ವಜನಿಕರು ಅಕಾಲಿಕ ಮಳೆಯಿಂದ ಪರದಾಡಿದರು.

First published:

  • 17

    Karnataka Rains: ಇಂದಿನಿಂದ ಮತ್ತೆ ನಾಲ್ಕು ದಿನ ಮಳೆ; ನಿಮ್ಮ ಭಾಗದಲ್ಲಿ ಮಳೆಯಾಗುತ್ತಾ? ಇಲ್ಲಿದೆ ಮಾಹಿತಿ

    ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಚಾಮರಾಜನಗರ, ಯಾದಗಿರಿ, ಕೊಪ್ಪಳ ಸೇರಿದಂತೆ ಬೆಳಗಾವಿ ಹಾಗೂ ಬಾಗಲಕೋಟೆಯಲ್ಲಿ ಮಳೆಯಾಗುವ ನಿರೀಕ್ಷೆ ಇದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Karnataka Rains: ಇಂದಿನಿಂದ ಮತ್ತೆ ನಾಲ್ಕು ದಿನ ಮಳೆ; ನಿಮ್ಮ ಭಾಗದಲ್ಲಿ ಮಳೆಯಾಗುತ್ತಾ? ಇಲ್ಲಿದೆ ಮಾಹಿತಿ

    ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಭಾಗ, ಕಡೂರು ತಾಲೂಕಿನ ಸುತ್ತಮುತ್ತ ಇಂದು ಮಧ್ಯಾಹ್ನದ ವೇಳೆಗೆ ಧಾರಾಕಾರ ಮಳೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ, ಉದ್ದೇಬೋರನಹಳ್ಳಿಯಲ್ಲೂ ಮಳೆ ಅಬ್ಬರ ಜೋರಾಗಿದ್ದು, ಭಾರೀ ಮಳೆ ಕಂಡು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Karnataka Rains: ಇಂದಿನಿಂದ ಮತ್ತೆ ನಾಲ್ಕು ದಿನ ಮಳೆ; ನಿಮ್ಮ ಭಾಗದಲ್ಲಿ ಮಳೆಯಾಗುತ್ತಾ? ಇಲ್ಲಿದೆ ಮಾಹಿತಿ

    ಸಂಜೆ ವೇಳೆಗೆ ಹಾವೇರಿ ಜಿಲ್ಲೆಯ ಶಿಗ್ಗಾವಿಯ ತಾಲೂಕಿನಲ್ಲೂ ಮಳೆಯಾಗಿದ್ದು, ಶಿಗ್ಗಾವಿಯ ತಾಲೂಕಿನ ತಡಸ ಗ್ರಾಮದಲ್ಲಿ ನಡೆದ ಶಂಕುಸ್ಥಾಪನಾ ಕಾರ್ಯಕ್ರಮಕ್ಕೆ ಆಗಮಿದ್ದ ಜನರು ಮಳೆಯಿಂದ ಪರದಾಡಿದರು. ಸಭೆಗೆ ಹಾಕಿದ್ದ ಚೇರ್​​ಗಳನ್ನೇ ಮಳೆಯಿಂದ ರಕ್ಷಣೆ ಮಾಡಿಕೊಳ್ಳಲು ಬಳಸಿದರು. ಆದರೆ ಗಾಳಿ ಮಳೆಗೆ ಕಾರ್ಯಕ್ರಮಕ್ಕೆ ಹಾಕಿದ್ದ ಶಾಮಿಯಾನ ಹಾರಿ ಹೋಗಿ ಸಾಕಷ್ಟು ಸಮಸ್ಯೆಯಾಗಿದೆ. ಇತ್ತ ವಿಧಿ ಇಲ್ಲದೆ ಗಣ್ಯರು, ಪೋಲಿಸರು ಹಾಗೂ ಅಧಿಕಾರಿಗಳು ಮಳೆಗೆ ಮೈಯೊಡ್ಡಿದ್ದರು.

    MORE
    GALLERIES

  • 47

    Karnataka Rains: ಇಂದಿನಿಂದ ಮತ್ತೆ ನಾಲ್ಕು ದಿನ ಮಳೆ; ನಿಮ್ಮ ಭಾಗದಲ್ಲಿ ಮಳೆಯಾಗುತ್ತಾ? ಇಲ್ಲಿದೆ ಮಾಹಿತಿ

    ರಾಜ್ಯದಲ್ಲಿ ಈಗಾಗಲೇ ಬಿಸಿಲಿನ ತಾಪ ಜೋರಾಗಿದ್ದು, ಈ ನಡುವೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾಕರಣ ಮಳೆಯಾಗಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಭಾಗದಲ್ಲಿ ವರುಣದೇವ ತಂಪೆರೆದಿದ್ದಾನೆ. ಇಂದು ಕೂಡ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

    MORE
    GALLERIES

  • 57

    Karnataka Rains: ಇಂದಿನಿಂದ ಮತ್ತೆ ನಾಲ್ಕು ದಿನ ಮಳೆ; ನಿಮ್ಮ ಭಾಗದಲ್ಲಿ ಮಳೆಯಾಗುತ್ತಾ? ಇಲ್ಲಿದೆ ಮಾಹಿತಿ

    ಇಂದಿನಿಂದ ಮಾರ್ಚ್​ 18ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಮಳೆಯಾಗಲಿದೆ. ಮಾ.16 ರಿಂದ 18ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.

    MORE
    GALLERIES

  • 67

    Karnataka Rains: ಇಂದಿನಿಂದ ಮತ್ತೆ ನಾಲ್ಕು ದಿನ ಮಳೆ; ನಿಮ್ಮ ಭಾಗದಲ್ಲಿ ಮಳೆಯಾಗುತ್ತಾ? ಇಲ್ಲಿದೆ ಮಾಹಿತಿ

    ಉತ್ತರ ಒಳನಾಡಿನ ಬಾಗಲಕೋಟೆ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯ ಪುರ ಮತ್ತು ಕೊಪ್ಪಳ ಜಿಲ್ಲೆಯ ಕೆಲವು ಕಡೆ ಮಾ.16 ರಿಂದ ಮಾ.18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Karnataka Rains: ಇಂದಿನಿಂದ ಮತ್ತೆ ನಾಲ್ಕು ದಿನ ಮಳೆ; ನಿಮ್ಮ ಭಾಗದಲ್ಲಿ ಮಳೆಯಾಗುತ್ತಾ? ಇಲ್ಲಿದೆ ಮಾಹಿತಿ

    ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಮಾ.17 ಮತ್ತು 18ರಂದು ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES