SR Srinivas: ಶಾಸಕ ಸ್ಥಾನಕ್ಕೆ ರಾಜೀನಾಮೆ; ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ
ಜೆಡಿಎಸ್ನಿಂದ ಉಚ್ಛಾಟಿತಗೊಂಡಿರುವ ಎಸ್.ಆರ್.ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸಲ್ಲಿಸಲಿದ್ದಾರೆ.
ಶ್ರೀನಿವಾಸ್ ಅವರ ರಾಜೀನಾಮೆ ಪತ್ರ ನ್ಯೂಸ್ 18 ಕನ್ನಡಕ್ಕೆ ಲಭ್ಯವಾಗಿದೆ. ರಾಜೀನಾಮೆ ಬಳಿಕ ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ಕಾಗೇರಿಯವರನ್ನು ಭೇಟಿಯಾಗಿ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ
2/ 7
ನಾನು ಸ್ವಯಿಚ್ಛೆಯಿಂದ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ತಾವುಗಳು ದಯಮಾಡಿ ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ಕರ್ನಾಟಕ ವಿಧಾಸಭೆ ಸಭಾಧ್ಯಕ್ಷರಲ್ಲಿ ಮನವಿ ಮಾಡಿಕೊಂಡಿದ್ದಾರೆ.
3/ 7
ಬೆಂಗಳೂರಿಗೆ ಹೊರಡುವ ಮುನ್ನ ತುಮಕೂರಿನ ವಿದ್ಯಾನಗರದ ನಿವಾಸದ ಬಳಿ ಮಾತನಾಡಿದ ಎಸ್.ಆರ್.ಶ್ರೀನಿವಾಸ್ ಭಾವುಕರಾದರು.
4/ 7
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರ ಜೊತೆಗಿನ ಒಡನಾಟವನ್ನು ನೆನಪು ಮಾಡಿಕೊಂಡರು.
5/ 7
ದೇವೇಗೌಡರು ನನ್ನನ್ನು ಮಗನಂತೆ ನೋಡಿಕೊಳ್ತಿದ್ದರು. ದೇವೇಗೌಡರು, ಕುಮಾರಸ್ವಾಮಿ ನಾಯಕತ್ವದಲ್ಲಿ ಕೆಲಸ ಮಾಡಿದ್ದೇನೆ. ಇವತ್ತು ಭಾರವಾದ ಹೃದಯದಿಂದ, ನೋವಿನಿಂದ ಆ ಪಕ್ಷಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ ಎಂದು ಭಾವುಕರಾದರು.
6/ 7
ದೇವೇಗೌಡರು ಹೆಚ್ಚಿನ ಪ್ರೋತ್ಸಾಹ ಕೊಟ್ಟು ಮಗನಂತೆ ನೋಡಿಕೊಂಡರು. ಹೆಚ್ಚು ಅವಕಾಶಗಳನ್ನು ಕಲ್ಪಿಸಿಕೊಟ್ಟ ಅವರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ಕೈ ಮುಗಿದರು.
7/ 7
ಕುಮಾರಸ್ವಾಮಿಯವರು ಕೂಡ ಒಡಹುಟ್ಟಿದ ತಮ್ಮನ ಹಾಗೆ ನನ್ನನ್ನು ನೋಡಿಕೊಂಡಿದ್ದಾರೆ. ಅದ್ಯಾವ ಸಂದರ್ಭಕ್ಕಾಗಿ ನನ್ನನ್ನು ಪಕ್ಷದಿಂದ ಹೊರಹಾಕಿದ್ರೋ ಗೊತ್ತಿಲ್ಲ. ಆದರೂ ಅತ್ಯಂತ ನೋವಿನಿಂದ ಜೆಡಿಎಸ್ ತೊರೆಯುತ್ತಿದ್ದೇನೆ ಎಂದರು.
First published:
17
SR Srinivas: ಶಾಸಕ ಸ್ಥಾನಕ್ಕೆ ರಾಜೀನಾಮೆ; ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ
ಶ್ರೀನಿವಾಸ್ ಅವರ ರಾಜೀನಾಮೆ ಪತ್ರ ನ್ಯೂಸ್ 18 ಕನ್ನಡಕ್ಕೆ ಲಭ್ಯವಾಗಿದೆ. ರಾಜೀನಾಮೆ ಬಳಿಕ ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ಕಾಗೇರಿಯವರನ್ನು ಭೇಟಿಯಾಗಿ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ
SR Srinivas: ಶಾಸಕ ಸ್ಥಾನಕ್ಕೆ ರಾಜೀನಾಮೆ; ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ
ನಾನು ಸ್ವಯಿಚ್ಛೆಯಿಂದ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ತಾವುಗಳು ದಯಮಾಡಿ ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ಕರ್ನಾಟಕ ವಿಧಾಸಭೆ ಸಭಾಧ್ಯಕ್ಷರಲ್ಲಿ ಮನವಿ ಮಾಡಿಕೊಂಡಿದ್ದಾರೆ.
SR Srinivas: ಶಾಸಕ ಸ್ಥಾನಕ್ಕೆ ರಾಜೀನಾಮೆ; ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ
ದೇವೇಗೌಡರು ನನ್ನನ್ನು ಮಗನಂತೆ ನೋಡಿಕೊಳ್ತಿದ್ದರು. ದೇವೇಗೌಡರು, ಕುಮಾರಸ್ವಾಮಿ ನಾಯಕತ್ವದಲ್ಲಿ ಕೆಲಸ ಮಾಡಿದ್ದೇನೆ. ಇವತ್ತು ಭಾರವಾದ ಹೃದಯದಿಂದ, ನೋವಿನಿಂದ ಆ ಪಕ್ಷಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ ಎಂದು ಭಾವುಕರಾದರು.
SR Srinivas: ಶಾಸಕ ಸ್ಥಾನಕ್ಕೆ ರಾಜೀನಾಮೆ; ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ
ಕುಮಾರಸ್ವಾಮಿಯವರು ಕೂಡ ಒಡಹುಟ್ಟಿದ ತಮ್ಮನ ಹಾಗೆ ನನ್ನನ್ನು ನೋಡಿಕೊಂಡಿದ್ದಾರೆ. ಅದ್ಯಾವ ಸಂದರ್ಭಕ್ಕಾಗಿ ನನ್ನನ್ನು ಪಕ್ಷದಿಂದ ಹೊರಹಾಕಿದ್ರೋ ಗೊತ್ತಿಲ್ಲ. ಆದರೂ ಅತ್ಯಂತ ನೋವಿನಿಂದ ಜೆಡಿಎಸ್ ತೊರೆಯುತ್ತಿದ್ದೇನೆ ಎಂದರು.