Sri Shivakumara Swamiji ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ

ಇಂದು ತ್ರಿವಿಧ ದಾಸೋಹಿ, ನಡೆದಾಡುವ ದೇವರು ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ (Sri Shivakumara Swamiji) 115ನೇ ಜಯಂತಿ ಹಿನ್ನೆಲೆ ತುಮಕೂರಿನ ಸಿದ್ದಗಂಗಾ ಮಠದಲ್ಲಿ (Siddaganga Mutt) ಗುರುವಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಶ್ರೀಗಳ ಜಯಂತಿ ಕಾರ್ಯಕ್ರಮದಲ್ಲಿ ಸುಮಾರು 4 ಲಕ್ಷ ಜನರು ಭಾಗಿಯಾಗುವ ಸಾಧ್ಯತೆ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

First published:

  • 18

    Sri Shivakumara Swamiji ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ

    ಸಿದ್ದಗಂಗಾ ಮಠಕ್ಕೆ ಆಗಮಿಸುವ ಭಕ್ತಾದಿಗಳಿಗಾಗಿ ಎಂಟು ಕಡೆ ಊಟದ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿಯ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

    MORE
    GALLERIES

  • 28

    Sri Shivakumara Swamiji ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ

    ಇಂದು ಬೆಳಗ್ಗೆ 10 ಗಂಟೆಯ ನಂತರ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ. ಗುರುವಾರ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಮಠಕ್ಕೆ ಭೇಟಿ ಶ್ರೀಗಳ ಗದ್ದುಗೆಯ ದರ್ಶನ ಪಡೆದುಕೊಂಡಿದ್ದರು.

    MORE
    GALLERIES

  • 38

    Sri Shivakumara Swamiji ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ

    ಒಟ್ಟು 20 ಎಕರೆ ಪ್ರದೇಶದಲ್ಲಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಬಂಡೆಪಾಳ್ಯದ ಬಳಿಯಲ್ಲಿ ಬಸ್, ಕಾರ್, ಬೈಕ್ ಸೇರಿದಂತೆ ಎಲ್ಲ ರೀತಿಯ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.

    MORE
    GALLERIES

  • 48

    Sri Shivakumara Swamiji ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ

    ತುಮಕೂರು ನಗರ ಹಾಗೂ ಸಿದ್ದಗಂಗಾ ಮಠದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ನಿನ್ನೆ ರಾಹುಲ್ ಗಾಂಧಿ ಮತ್ತು ಇಂದು ಅಮಿತ್ ಶಾ ಭೇಟಿ ಹಿನ್ನೆಲೆ ನಗರದಾದ್ಯಂತ ಪೊಲೀಸರು ಸರ್ಪಗಾವಲು ಹಾಕಿದ್ದಾರೆ.

    MORE
    GALLERIES

  • 58

    Sri Shivakumara Swamiji ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ

    ತುಮಕೂರು ನಗರ ಮತ್ತು ಸಿದ್ದಗಂಗಾ ಮಠದ ವ್ಯಾಪ್ತಿಯಲ್ಲಿ ಒಟ್ಟು ಎರಡು ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ. ಎಡಿಜಿಪಿ ಪ್ರತಾಪ್ ರೆಡ್ಡಿ, ಕೇಂದ್ರ ವಲಯ ಐಜಿ ಚಂದ್ರಶೇಖರ್ ಸ್ಥಳದಲ್ಲಿಯೇ ಇದ್ದು ಭದ್ರತೆ ಪರಿಶೀಲನೆ ಮಾಡುತ್ತಿದ್ದಾರೆ. ತುಮಕೂರು ಎಸ್ ಪಿ ರಾಹುಲ್ ಕುಮಾರ್ ಶಹಾಪುರ್ ವಾಡ್ ಹಾಗೂ ದಾವಣಗೆರೆ ಎಸ್ ಪಿ ಸೇರಿದಂತೆ ನಾಲ್ಕು ಎಸ್ ಪಿ ಗಳ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

    MORE
    GALLERIES

  • 68

    Sri Shivakumara Swamiji ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ

    ಇನ್ನು ಇಂದು ಬೆಳಗ್ಗೆಯಿಂದಲೇ ಗದ್ದುಗೆಗೆ ವಿಶೇಷ ಪೂಜೆಗಳು ನಡೆಯುತ್ತಿದ್ದು, ಭಕ್ತರ ಆಗಮನ ಸಹ ಆರಂಭಗೊಂಡಿದೆ. ಸಿದ್ದಲಿಂಗ ಶ್ರೀಗಳು ಸ್ವತಃ ಅವರೇ ಅನ್ನದಾಸೋಹ ಸಿದ್ಧತೆಯನ್ನು ಪರಿಶೀಲಿಸಿದರು.

    MORE
    GALLERIES

  • 78

    Sri Shivakumara Swamiji ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ

    ಈ ವೇಳೆ ಮಾತನಾಡಿದ ಸಿದ್ದಲಿಂಗ ಶ್ರೀಗಳು, ಪ್ರತಿ‌ ದಿನ ಅನ್ನ ದಾಸೋಹ ನಡೆಯುತ್ತದೆ. ಈಗಾಗಲೇ ನಿನ್ನೆಯಿಂದ ದಾಸೋಹ ಶುರುವಾಗಿದೆ. ಎಲ್ಲರೂ ಕೂಡ ಬರ್ತಾರೆ ದರ್ಶನ ಪಡೆದು ಅವರವರ ಪಾಡಿಗೆ ಹೋಗುತ್ತಾರೆ. ಕರ್ನಾಟಕದ ಮೂಲೆ ಮೂಲೆಯಲ್ಲಿ ಸಹಾ ಜನರು ಆಗಮಿಸುತ್ತಿದ್ದಾರೆ ಎಂದು ತಿಳಿಸಿದರು.

    MORE
    GALLERIES

  • 88

    Sri Shivakumara Swamiji ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ

    ಶಿವಕುಮಾರ ಸ್ವಾಮೀಜಿಗಳು ಏಪ್ರಿಲ್ 1, 1908ರಲ್ಲಿ ಮಾಗಡಿ ತಾಲೂಕಿನ ವೀರಾಪುರದಲ್ಲಿ ಜನಿಸಿದ್ದರು. ಜನವರಿ 20, 2019ರಲ್ಲಿ ಲಿಂಗೈಕ್ಯರಾಗಿದ್ದರು.

    MORE
    GALLERIES