H.D Devegowda: ಬೆಂಗಳೂರಲ್ಲಿ ಕೆಸಿಆರ್-ಹೆಚ್​ಡಿಡಿ ಭೇಟಿ, ತೃತೀಯ ರಂಗ ಬಲಪಡಿಸುವ ಕುರಿತು ಮಾತುಕತೆ

ಬೆಂಗಳೂರಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (H.D Devegowda) ಹಾಗೂ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಅವರ ಭೇಟಿ ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಕೆರಳಿಸಿದೆ. ದೇಶದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ಸೇತರ ಪಕ್ಷಗಳ ಒಗ್ಗೂಡಿಸಲು ಕೆಸಿಆರ್ ಕಸರತ್ತು ನಡೆಸುತ್ತಿದ್ದಾರೆ.

First published:

  • 18

    H.D Devegowda: ಬೆಂಗಳೂರಲ್ಲಿ ಕೆಸಿಆರ್-ಹೆಚ್​ಡಿಡಿ ಭೇಟಿ, ತೃತೀಯ ರಂಗ ಬಲಪಡಿಸುವ ಕುರಿತು ಮಾತುಕತೆ

    ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ ರಾವ್ ಅವರು ಇಂದು ಮಾಜಿ ಪ್ರಧಾನಿ, ಹೆಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದ್ರು. ನಿವಾಸಕ್ಕೆ ಭೇಟಿ ನೀಡಿರುವುದು ದೇಶದ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

    MORE
    GALLERIES

  • 28

    H.D Devegowda: ಬೆಂಗಳೂರಲ್ಲಿ ಕೆಸಿಆರ್-ಹೆಚ್​ಡಿಡಿ ಭೇಟಿ, ತೃತೀಯ ರಂಗ ಬಲಪಡಿಸುವ ಕುರಿತು ಮಾತುಕತೆ

    ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆಲಂಗಾಣ ಸಿಎಂ ಚಂದ್ರಶೇಖರರಾವ್ ಆಗಮಿಸಿದರು. ಮನೆಯಿಂದ ಹೊರಬಂದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಹೂ ಗುಚ್ಛ ನೀಡಿ ಸಿಎಂ ಚಂದ್ರಶೇಖರ ರಾವ್ ಅವರನ್ನು ಸ್ವಾಗತಿಸಿದರು.

    MORE
    GALLERIES

  • 38

    H.D Devegowda: ಬೆಂಗಳೂರಲ್ಲಿ ಕೆಸಿಆರ್-ಹೆಚ್​ಡಿಡಿ ಭೇಟಿ, ತೃತೀಯ ರಂಗ ಬಲಪಡಿಸುವ ಕುರಿತು ಮಾತುಕತೆ

    ಎರಡು ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯವಾಗಿ ಪ್ರಾದೇಶಿಕ ಪಕ್ಷಗಳನ್ನು ಒಂದುಗೂಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಚಂದ್ರಶೇಖರರಾವ್ ಅವರು ಹೆಚ್.ಡಿ. ದೇವೇಗೌಡರನ್ನು ಭೇಟಿ ಮಾಡಿದ್ದಾರೆ.

    MORE
    GALLERIES

  • 48

    H.D Devegowda: ಬೆಂಗಳೂರಲ್ಲಿ ಕೆಸಿಆರ್-ಹೆಚ್​ಡಿಡಿ ಭೇಟಿ, ತೃತೀಯ ರಂಗ ಬಲಪಡಿಸುವ ಕುರಿತು ಮಾತುಕತೆ

    ದೇಶದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ಸೇತರ ಪಕ್ಷಗಳ ಒಗ್ಗೂಡಿಸಲು ಕೆಸಿಆರ್ ಕಸರತ್ತು ನಡೆಸಿದ್ದು, ದೇಶದಲ್ಲಿ ತೃತೀಯ ರಂಗ ಬಲಪಡಿಸುವ ಬಗ್ಗೆ ಮಹತ್ವದ ಮಾತುಕತೆ ನಡೆಸಿದ್ದಾರೆ. ತೃತೀಯ ರಂಗ ಬಲಪಡಿಸುವ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಜೊತೆ ಕೆಸಿಆರ್ ಸಮಾಲೋಚನೆ ನಡೆಸಿದ್ರು.

    MORE
    GALLERIES

  • 58

    H.D Devegowda: ಬೆಂಗಳೂರಲ್ಲಿ ಕೆಸಿಆರ್-ಹೆಚ್​ಡಿಡಿ ಭೇಟಿ, ತೃತೀಯ ರಂಗ ಬಲಪಡಿಸುವ ಕುರಿತು ಮಾತುಕತೆ

    ಕೆಸಿಆರ್ ಹಾಗೂ ದೇವೇಗೌಡರ ಮಾತುಕತೆ ವೇಳೆ ಮಾಜಿ ಸಿಎಂ ಹೆಚ್ಡಿಕೆ ಉಪಸ್ಥಿತಿರಿದ್ರು. ರಾಷ್ಟ್ರಪತಿ ಆಯ್ಕೆ, ಪ್ರಸಕ್ತ ರಾಜಕೀಯ ವಿದ್ಯಮಾನಗಳ ಮತ್ತು ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯ ಶಕ್ತಿಯಾಗಿ ತೃತೀಯ ರಂಗ ರಚಿಸುವ ಸಂಬಂಧ ಮಹತ್ವದ ಸಮಾಲೋಚನೆ ನಡೆಸಲಾಗಿದೆ.

    MORE
    GALLERIES

  • 68

    H.D Devegowda: ಬೆಂಗಳೂರಲ್ಲಿ ಕೆಸಿಆರ್-ಹೆಚ್​ಡಿಡಿ ಭೇಟಿ, ತೃತೀಯ ರಂಗ ಬಲಪಡಿಸುವ ಕುರಿತು ಮಾತುಕತೆ

    ಕಳೆದ ಶನಿವಾರ ಉತ್ತರ ಪ್ರದೇಶಕ್ಕೆ ತೆರಳಿ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಭೇಟಿ ಮಾಡಿದ್ದ ಕೆಸಿಆರ್, ಭಾನುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಸಿಎಂ ಭಗವಂತ್ ಮಾನ್ ಭೇಟಿ ಮಾಡಿದ್ರು.

    MORE
    GALLERIES

  • 78

    H.D Devegowda: ಬೆಂಗಳೂರಲ್ಲಿ ಕೆಸಿಆರ್-ಹೆಚ್​ಡಿಡಿ ಭೇಟಿ, ತೃತೀಯ ರಂಗ ಬಲಪಡಿಸುವ ಕುರಿತು ಮಾತುಕತೆ

    ಈ ಬೆನ್ನೆಲ್ಲೆ ಇಂದು ರಾಜ್ಯದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಭೇಟಿಯಾಗಿರುವ ಕೆಸಿಆರ್, ದೇಶದಲ್ಲಿ ಪ್ರಾದೇಶಿಕ ಪಕ್ಷಗಳನ್ನು ಒಟ್ಟುಗೂಡಿಸಿ ತೃತೀಯ ರಂಗ ರಚಿಸಲು ಮುಂಚೂಣಿ ನಾಯಕತ್ವ ವಹಿಸಿದ್ದಾರೆ.

    MORE
    GALLERIES

  • 88

    H.D Devegowda: ಬೆಂಗಳೂರಲ್ಲಿ ಕೆಸಿಆರ್-ಹೆಚ್​ಡಿಡಿ ಭೇಟಿ, ತೃತೀಯ ರಂಗ ಬಲಪಡಿಸುವ ಕುರಿತು ಮಾತುಕತೆ

    ಈಗಾಗಲೇ ಡಿಎಂಕೆ, ತೃಣಮೂಲ, ಆರ್ಜೆಡಿ, ಸಮಾಜವಾದಿ ಪಕ್ಷಗಳ ನಾಯಕರ ಜೊತೆ ಚರ್ಚಿಸಿರುವ ಚಂದ್ರಶೇಖರ್ ರಾವ್, ಇದೀಗ ದೇವೇಗೌಡರೊಂದಿಗೆ ಮಾತುಕತೆ ನಡೆಸಿ ಚುನಾವಣೆ ಎದುರಿಸುವ ಕುರಿತು ಸಮಾಲೋಚನೆ ನಡೆಸಿದ್ದಾರೆ.

    MORE
    GALLERIES