Hassan ಜಿಲ್ಲೆಯಲ್ಲಿ ಎರಡು ಆಯ್ಕೆ: ಒಂದು ಬಿಜೆಪಿ, ಮತ್ತೊಂದು?: MLA Preetham Gowda
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಶಾಸಕ ಪ್ರೀತಂಗೌಡ ವಾಗ್ದಾಳಿ ನಡೆಸಿದ್ದಾರೆ. ನಿನ್ನೆ ಹಾಸನದಲ್ಲಿ ನಡೆದ ಶಾಸಕ ಎನ್.ಮಹೇಶ್ ಅಭಿಮಾನಿಗಳು ಹಾಗೂ ಬೆಂಬಲಿಗರು ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ದಲಿತ ವಿರೋಧಿ ಕುಟುಂಬ ಎಂದು ಕುಟುಕಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಎರಡು ಆಯ್ಕೆ ಇದೆ. ಒಂದು ಜೆಡಿಎಸ್ ಅಥವಾ ಬಿಜೆಪಿ, ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ. ಜೆಡಿಎಸ್ ಹಾಗೂ ಬಿಜೆಪಿ ನಡುವೆ ಹಾಸನ ಜಿಲ್ಲೆಯಲ್ಲಿ ರಾಜಕಾರಣ ನಡೆಯುತ್ತಿದೆ ಎಂದರು.
2/ 8
ಜೆಡಿಎಸ್ ಪಕ್ಷದವರು ಯಾವ ರೀತಿ ಅಂತ ಹೇಳಿದ್ರೆ, ನಾನು ಯಾರ ಬಗ್ಗೆ ಹೇಳ್ತಿನಿ ಅಂತ ನಿಮಗೆಲ್ಲ ಗೊತ್ತಿರುತ್ತದೆ. ಒಬ್ಬ ದಲಿತ ಸಮಾಜದ ಬಂಧು ಅವರ ಮನೆಗೆ ಹೋದರೆ ಇಲ್ಲಿಯತನಕ ಒಳಗೆ ಹೋಗಿರುವ ಒಂದು ನಿದರ್ಶನ ನಮ್ಮ ಕಣ್ಮುಂದೆ ಇಲ್ಲ ಎಂದು ಹೇಳಿದರು.
3/ 8
ಇದನ್ನು ಬಹಳ ಪ್ರಾಮಾಣಿಕತೆಯಿಂದ ಹೇಳ್ತಿನಿ. ದಲಿತ ಬಂಧುಗಳು ದೊಡ್ಡಗೌಡರ ಮನೆಗೆ ಹೋದ ವೇಳೆ ಅವರು ಮನೆಯಿಂದ ಹೊರಟ್ಟಿರುತ್ತಾರೆ.
4/ 8
ದಲಿತ ಸಮಾಜದ ಬಂಧುಗಳನ್ನು ನೋಡಿದರೆ ಮತ್ತೆ ಮನೆ ಒಳಗೆ ಹೋಗಿ ಸ್ನಾನ ಮಾಡಿ ಬರುವ ಸಂಸ್ಕೃತಿಯನ್ನ ಒಗ್ಗೂಡಿಸಿಕೊಂಡಿದ್ದಾರೆ. ಅಂತಹ ನಾಯಕತ್ವ ಜೆಡಿಎಸ್ ಅವರದ್ದು ಎಂದು ವಾಗ್ದಾಳಿ ನಡೆಸಿದರು.
5/ 8
ಹಾಸನ ಜಿಲ್ಲೆಯಲ್ಲಿ ದಲಿತ ಸಮಾಜವನ್ನು ಯಾರು ಕೇವಲವಾಗಿ ನೋಡ್ತಾರೆ ಅಂದರೆ ಅದು ಜಾತ್ಯಾತೀತ ಜನತಾದಳದವರು. ಇದೇ ವೇಳೆ ಕಾಂಗ್ರೆಸ್ ಪಕ್ಷದ ವಿರುದ್ಧವೂ ಗುಡುಗಿದರು. ಕಾಂಗ್ರೆಸ್ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ಅಂಬೇಡ್ಕರ್ ಅವರ ಅಂತ್ಯಸಂಸ್ಕಾರ ಮಾಡಲು ದೆಹಲಿಯಲ್ಲಿ 6*3 ಜಾಗ ಕೊಡಲಿಲ್ಲ ಎಂದರು.
6/ 8
ಅದೇ ಅವರ ಗಾಂಧಿ ಕುಟುಂಬಕ್ಕೆ ಒಬ್ಬರ ಅಂತ್ಯ ಸಂಸ್ಕಾರ ಮಾಡಲು ಮೂವತ್ತು ಎಕರೆ, ಐವತ್ತು ಎಕರೆ ಅವರ ತಾತನ ಮನೆ ಆಸ್ತಿ ಅನ್ನುವ ರೀತಿಯಲ್ಲಿ ಘಾಟ್ ಗಳನ್ನು ಮಾಡಿಕೊಂಡಿದ್ದಾರೆ.
7/ 8
ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿದರವರು ಕಾಂಗ್ರೆಸ್ನವರು. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದವರು ಕಾಂಗ್ರೆಸ್ನವರು. ಭಾರತೀಯ ಜನತಾ ಪಾರ್ಟಿ ದಲಿತ ಸಮಾಜದ ಬಂಧುಗಳನ್ನು ಸಮಾನತೆಯಿಂದ ನೋಡುತ್ತೆ ಎಂದು ತಿಳಿಸಿದರು.
8/ 8
ಹಾಸನ ಜಿಲ್ಲೆಯಲ್ಲಿ ನಮ್ಮನ್ನೆಲ್ಲರನ್ನು ಕಾಪಾಡವವರು ಯಾರೂ ಎಂಬ ಪ್ರಶ್ನೆಯಿತ್ತು. ನಿಮ್ಮ ಹಳ್ಳಿಗೆ ಹೋಗಿ ಹೇಳಿ ನರೇಂದ್ರಮೋದಿ, ಅಮಿತ್ ಶಾ ಇದ್ದಾರೆ ಅಂತ ಎಂದು ಹೇಳಿದರು