Umesh Katti Death: ಬೆಳಗಾವಿಗೆ ಉಮೇಶ್ ಕತ್ತಿ ಪಾರ್ಥಿವ ಶರೀರ ರವಾನೆ; ತಂದೆ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ

ಮಂಗಳವಾರ ರಾತ್ರಿ ಹೃದಯಘಾತದಿಂದ ನಿಧನರಾಗಿರುವ ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಬೆಳಗಾವಿಗೆ ಏರ್​​ಲಿಫ್ಟ್ ಮಾಡಲಾಗುತ್ತಿದೆ.

First published:

  • 17

    Umesh Katti Death: ಬೆಳಗಾವಿಗೆ ಉಮೇಶ್ ಕತ್ತಿ ಪಾರ್ಥಿವ ಶರೀರ ರವಾನೆ; ತಂದೆ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ

    ಏರ್ ಅಂಬುಲೆನ್ಸ್ ಮೂಲಕ ಬೆಳಗಾವಿಗೆ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತಿದೆ. ಅಲ್ಲಿಂದ ಹುಕ್ಕೇರಿಯ ಬೆಲ್ಲದ ಬಾಗೇವಾಡಿಗೆ ರವಾನೆ ಮಾಡಲಾಗುತ್ತದೆ. ಮಧ್ಯಾಹ್ನ ಎರಡು ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

    MORE
    GALLERIES

  • 27

    Umesh Katti Death: ಬೆಳಗಾವಿಗೆ ಉಮೇಶ್ ಕತ್ತಿ ಪಾರ್ಥಿವ ಶರೀರ ರವಾನೆ; ತಂದೆ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ

    ಸ್ವಗ್ರಾಮ ಬೆಲ್ಲದ ಬಾಗೇವಾಡಿಯ ತೋಟದಲ್ಲಿರುವ ತಂದೆ ವಿಶ್ವನಾಥ್ ಅವರ ಸಮಾಧಿ ಪಕ್ಕದಲ್ಲಿಯೇ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಿದ್ದಾರೆ.

    MORE
    GALLERIES

  • 37

    Umesh Katti Death: ಬೆಳಗಾವಿಗೆ ಉಮೇಶ್ ಕತ್ತಿ ಪಾರ್ಥಿವ ಶರೀರ ರವಾನೆ; ತಂದೆ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ

    ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಸಂಪುಟದ ಬಹುತೇಕ ಎಲ್ಲಾ ಸಚಿವರು, ರಾಜಕೀಯ ಮುಖಂಡರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

    MORE
    GALLERIES

  • 47

    Umesh Katti Death: ಬೆಳಗಾವಿಗೆ ಉಮೇಶ್ ಕತ್ತಿ ಪಾರ್ಥಿವ ಶರೀರ ರವಾನೆ; ತಂದೆ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ

    ಮಂಗಳವಾರ ರಾತ್ರಿ ಸುಮಾರು 10.30ಕ್ಕೆ ಬಾತ್  ರೂಂನಲ್ಲಿ ಉಮೇಶ್ ಕತ್ತಿ ಅವರು ಕುಸಿದು ಬಿದ್ದಿದ್ದಾರೆ. 10 ನಿಮಿಷವಾದ್ರೂ ಹೊರಗೆ ಬರದಿದ್ದಾಗ ಅನುಮಾನಗೊಂಡು ಬಾಗಿಲು ತೆಗೆದು ನೋಡಿದಾಗ ಉಮೇಶ್ ಕತ್ತಿ ಪ್ರಜ್ಞಾಹೀನರಾಗಿದ್ದರು. ಕೂಡಲೇ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ.

    MORE
    GALLERIES

  • 57

    Umesh Katti Death: ಬೆಳಗಾವಿಗೆ ಉಮೇಶ್ ಕತ್ತಿ ಪಾರ್ಥಿವ ಶರೀರ ರವಾನೆ; ತಂದೆ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ

    ಈ ಹಿಂದೆ  ಉಮೇಶ್​ ಕತ್ತಿ ಅವರಿಗೆ ಎರಡು ಬಾರಿ ಹೃದಯಾಘಾತ ಆಗಿತ್ತು. ಉಮೇಶ್​ ಕತ್ತಿ ಅವರಿಗೆ ಹೃದಯಕ್ಕೆ ಸ್ಟಂಟ್​ ಅಳವಡಿಸಲಾಗಿತ್ತು. ಈಗ ಮೂರನೇ ಬಾರಿ ಹೃದಯಾಘಾತದಿಂದ ಉಮೇಶ್ ಕತ್ತಿ ವಿಧಿವಶರಾಗಿದ್ದಾರೆ.

    MORE
    GALLERIES

  • 67

    Umesh Katti Death: ಬೆಳಗಾವಿಗೆ ಉಮೇಶ್ ಕತ್ತಿ ಪಾರ್ಥಿವ ಶರೀರ ರವಾನೆ; ತಂದೆ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ

    ಉಮೇಶ್ ಕತ್ತಿ ಅವರ ನಿಧನ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

    MORE
    GALLERIES

  • 77

    Umesh Katti Death: ಬೆಳಗಾವಿಗೆ ಉಮೇಶ್ ಕತ್ತಿ ಪಾರ್ಥಿವ ಶರೀರ ರವಾನೆ; ತಂದೆ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ

    ಉಮೇಶ್ ಕತ್ತಿ ನಿಧನದ ವಿಷಯ ತಿಳಿಯುತ್ತಲೇ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ (MS Ramaiah Hospital) ಆಗಮಿಸಿದ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ಅವರು ಉಮೇಶ್ ಕತ್ತಿ (Umesh Katti Death) ಅವರ ಅಂತಿಮ ದರ್ಶನ ಪಡೆದರು

    MORE
    GALLERIES