Vijayapura Airport: ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆ, ಇಲ್ಲಿದೆ ಮಹತ್ವದ ಅಪ್​ಡೇಟ್

ವಿಜಯಪುರ ಜಿಲ್ಲೆಯ ಜನರ ಬಹುದಿನಗಳ ಕನಸಾಗಿದ್ದ ವಿಮಾನ ನಿಲ್ದಾಣ ಸದ್ಯ ನನಸಾಗುವ ಹಂತಕ್ಕೆ ಬಂದಿದೆ. ಈಗಾಗಲೇ ಕಾಮಗಾರಿ ಶೇಕಡಾ 75ರಷ್ಟು ಪೂರ್ಣಗೊಂಡಿದೆ.

First published:

  • 17

    Vijayapura Airport: ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆ, ಇಲ್ಲಿದೆ ಮಹತ್ವದ ಅಪ್​ಡೇಟ್

    ಶಿವಮೊಗ್ಗದ ವಿಮಾನ ನಿಲ್ದಾಣ ಕಾಮಗಾರಿ ಮುಗಿದು ಲೋಕಾರ್ಪಣೆಯೂ ಆಯಿತು. ಶಿವಮೊಗ್ಗ ವಿಮಾನ ನಿಲ್ದಾಣದ ಜೊತೆಯೇ ಆರಂಭವಾದ ವಿಜಯಪುರ ವಿಮಾನ ನಿಲ್ದಾಣದ ಕುರಿತು ಉತ್ತರ ಕರ್ನಾಟಕ ಭಾಗದ ಜನರು ನಿರೀಕ್ಷೆಯಿಂದ ಕಾಯುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Vijayapura Airport: ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆ, ಇಲ್ಲಿದೆ ಮಹತ್ವದ ಅಪ್​ಡೇಟ್

    ವಿಜಯಪುರ ನಗರದ ಹೊರಭಾಗದ ಬುರಣಾಪುರ ಮತ್ತು ಮದಭಾವಿ ಗ್ರಾಮದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Vijayapura Airport: ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆ, ಇಲ್ಲಿದೆ ಮಹತ್ವದ ಅಪ್​ಡೇಟ್

    ವಿಜಯಪುರ ಜಿಲ್ಲೆಯ ಜನರ ಬಹುದಿನಗಳ ಕನಸಾಗಿದ್ದ ವಿಮಾನ ನಿಲ್ದಾಣ ಸದ್ಯ ನನಸಾಗುವ ಹಂತಕ್ಕೆ ಬಂದಿದೆ. ಈಗಾಗಲೇ ಕಾಮಗಾರಿ ಶೇಕಡಾ 75ರಷ್ಟು ಪೂರ್ಣಗೊಂಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Vijayapura Airport: ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆ, ಇಲ್ಲಿದೆ ಮಹತ್ವದ ಅಪ್​ಡೇಟ್

    ಲಿಂಗೈಕ್ಯರಾದ ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಜಿ ಅವರು ಹೆಸರನ್ನ ವಿಜಯಪುರ ವಿಮಾನ ನಿಲ್ದಾಣಕ್ಕೆ ಇಡಬೇಕೆಂಬ ಕೂಗು ಈಗಾಗಲೇ ಕೇಳಿಬಂದಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Vijayapura Airport: ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆ, ಇಲ್ಲಿದೆ ಮಹತ್ವದ ಅಪ್​ಡೇಟ್

    ವಿಜಯಪುರ ವಿಮಾನ ನಿಲ್ದಾಣದ ರನ್ ವೇ ಸೇರಿದಂತೆ ಎಲ್ಲ ಕಾಮಗಾರಿಗಳು ಅಂತಿಮ ಹಂತ ತಲುಪಿದೆ. ಇನ್ನೇನು ಉದ್ಘಾಟನೆಗೆ ಎದುರು ನೋಡುತ್ತಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Vijayapura Airport: ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆ, ಇಲ್ಲಿದೆ ಮಹತ್ವದ ಅಪ್​ಡೇಟ್

    ವಿಜಯಪುರ ವಿಮಾನ ನಿಲ್ದಾಣಕ್ಕೆ 2008 ರಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪನವರು ಶಿಲಾನ್ಯಾಸ ನೆರವೇರಿಸಿದ್ದರು. ಆದರೆ ಕಾಮಗಾರಿ ಸಾಧ್ಯವಾಗಿರಲಿಲ್ಲ. ಬಳಿಕ 2021 ರ ಫೆಬ್ರವರಿಯಲ್ಲಿ ಕಾಕತಾಳೀಯ ಎಂಬಂತೆ ಮತ್ತೆ ಹದಿಮೂರು ವರ್ಷಗಳ ಬಳಿಕ ಮತ್ತೆ ಬಿಎಸ್ ಯಡಿಯೂರಪ್ಪನವರೇ ಶಿಲಾನ್ಯಾಸ ನೆರವೇರಿಸಿದ್ದರು. ಎಲ್ಲವೂ ನಿರೀಕ್ಷೆಯಂತೆ ಆಗಿದ್ದರೆ ಫೆಬ್ರವರಿ ಅಂತ್ಯಕ್ಕೆ ವಿಮಾನ ಹಾರಾಟ ನಡೆಸಬೇಕಿತ್ತು.  (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Vijayapura Airport: ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆ, ಇಲ್ಲಿದೆ ಮಹತ್ವದ ಅಪ್​ಡೇಟ್

    ದಿ. ಸಿದ್ದೇಶ್ವರ ಸ್ವಾಮೀಜಿ ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಹೆಸರಿಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಕಾರಜೋಳ ಅವರು, ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ವಿಜಯಪುರ ವಿಮಾನ ನಿಲ್ದಾಣಕ್ಕೆ ಶ್ರೀ ಬಸವೇಶ್ವರರ ಹೆಸರು ಇಡುವ ಕುರಿತು ಅನುಮೋದನೆಯಾಗಿದೆ. ಈಗ ಹೆಸರು ಬದಲಿಸುವುದು ಸರಿಯಲ್ಲ. ಈ ವಿಚಾರವಾಗಿ ರಾಜಕೀಯ ಮಾಡುವುದು ಬೇಡ ಎಂದು ಮನವಿ ಮಾಡಿದ್ದಾರೆ  (ಸಾಂದರ್ಭಿಕ ಚಿತ್ರ)

    MORE
    GALLERIES